No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

150 ಕಿಮೀ ಬಂಗಾಳಕೊಲ್ಲಿಯಲ್ಲಿ ಈಜಿ ದಾಖಲೆ ಬರೆದ ಕಾಕಿನಾಡದ 52 ವರ್ಷದ ಮಹಿಳೆ

ಶ್ಯಾಮಲಾ ಸಾಹಸಕ್ಕೆ ನಿಬ್ಬೆರಗಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 4, 2025
in ರಾಷ್ಟ್ರೀಯ
0
150 ಕಿಮೀ ಬಂಗಾಳಕೊಲ್ಲಿಯಲ್ಲಿ ಈಜಿ ದಾಖಲೆ ಬರೆದ ಕಾಕಿನಾಡದ 52 ವರ್ಷದ ಮಹಿಳೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾಕಿನಾಡ(ಆಂಧ್ರಪ್ರದೇಶ)  |

30-40ನೇ ವಯಸ್ಸಿನಲ್ಲೇ ದೈಹಿಕ ಉತ್ಸಾಹ ಕಳೆದುಕೊಳ್ಳುವ ಈ ಕಾಲದಲ್ಲಿ ಆಂಧ್ರಪ್ರದೇಶದ 52 ವರ್ಷದ ಮಹಿಳೆಯೊಬ್ಬರೂ ಸಮುದ್ರದಲ್ಲಿ 150 ಕಿಲೋ ಮೀಟರ್ ಈಜುವ ಮೂಲಕ ವಿಶ್ವವೇ ನಿಬ್ಬೆರಗಾಗುವಂತಹ ದಾಖಲೆ ಬರೆದಿದ್ದಾರೆ.

ಆಂಧ್ರಪ್ರದೇಶದ #Andrapradesh ಕಾಕಿನಾಡ ಮೂಲದ 52 ವಯಸ್ಸಿನ ಗೋಲಿ ಶ್ಯಾಮಲಾ #GoliShyamala ಎಂಬ ಮಹಿಳೆಯೇ ಈ ಸಾಧಕಿ.

ಬಂಗಾಳ ಕೊಲ್ಲಿ #BayofBengal ಎಂದು ಹೆಸರು ಕೇಳಿದರೇ ಬಹಳಷ್ಟು ಮಂದಿ ಹೆದರುವಂತಹ ಅಲೆಗಳ ಅಬ್ಬರ ಇರುತ್ತದೆ. ಆದರೆ, ಅಂತಹ ಸಮುದ್ರದಲ್ಲಿ ಈಜುವ ಮೂಲಕ ಯುವಕರಿಗೆ ಶ್ಯಾಮಲಾ ಅವರು ಮಾದರಿಯಾಗಿದ್ದಾರೆ.

Also Read>> UPI Effect | ಈ ಪಾನಿಪುರಿ ಮಾರಾಟಗಾರದ ಆದಾಯ ಕಂಡು ಹೌಹಾರಿದ ಆದಾಯ ತೆರಿಗೆ ಇಲಾಖೆ

ವಿಶಾಖಪಟ್ಟಣಂನಿಂದ #Visakhapatnam ಕಾಕಿನಾಡದವರೆಗೂ ಅಂದರೆ ಬರೋಬ್ಬರಿ 150 ಕಿಲೋ ಮೀಟರ್ ಸಮುದ್ರದಲ್ಲಿ ಈಜಿದ್ದಾರೆ.

ಐದು ದಿನಗಳಲ್ಲಿ ಪೂರ್ಣಗೊಂಡ ಈ ಅಸಾಮಾನ್ಯ ಸಾಧನೆಯು ಅನುಭವಿ ಸಹಿಷ್ಣುತೆಯ ಈಜುಗಾರ್ತಿ ಶ್ಯಾಮಲಾ ಅವರ ವೈಯಕ್ತಿಕ ವಿಜಯವಲ್ಲ. ಬದಲಾಗಿ, ಎಲ್ಲ ವಯಸ್ಸಿನ ಜನರಿಗೂ ಮಾದರಿಯಾದ ಸಾಧನೆಯಾಗಿದೆ.

ಕೋರಮಂಡಲ್ ಒಡಿಸ್ಸಿ ಸಾಗರ ಈಜು ಸಂಸ್ಥೆಯ ಆಶ್ರಯದಲ್ಲಿ ಕಳೆದ ತಿಂಗಳು 28ರಂದು ವಿಶಾಖಪಟ್ಟಣಂ ಕರಾವಳಿಯಿಂದ ಕಾಕಿನಾಡ ಕರಾವಳಿವರೆಗೆ ಯಾತ್ರೆ ಆರಂಭಿಸಲಾಗಿತ್ತು.

ಈ ಯಾತ್ರೆಯಲ್ಲಿ ಶಾಮಲಾ ಅವರು 2024ರ ಡಿ.28ರಂದು ತಮ್ಮ ಈಜಿನ ಜರ್ನಿಯನ್ನು ವಿಶಾಖಪಟ್ಟಣಂನ ಆರ್.ಕೆ. ಬೀಚ್’ನಲ್ಲಿ ಆರಂಭಿಸಿದ್ದರು. ಸಮುದ್ರದಲ್ಲಿ ದಿನಕ್ಕೆ 30 ಕಿಮೀನಂತೆ 150 ಕಿಮೀ ದೂರ ಈಜಿ ಜನವರಿ 4ರಂದು ಆಂಧ್ರ ಪ್ರದೇಶದ ಕಾಕಿನಾಡದ ಸೂರ್ಯರಾವ್ ಬೀಚ್ ತಲುಪಿದ್ದಾರೆ. ಅಚ್ಚರಿ ಎಂದರೆ ಶಾಮಲಾ ಅವರು ಸಮುದ್ರದಲ್ಲಿ ಈಜುತ್ತಾ ಹೊಸ ವರ್ಷಾಚರಣೆ ಮಾಡಿದ್ದು ವಿಶೇಷ.

ಇನ್ನೂ ವಿಶೇಷ ಎಂದರೆ, ಭಾರೀ ಅಲೆಗಳ ಅಬ್ಬರ ಇರುವ ಅರಬ್ಬೀ ಸಮುದ್ರದಲ್ಲಿ ಈಜುವುದು ಸಾಮಾನ್ಯದ ಸಾಧನೆಯಲ್ಲ. ಆದರೆ, ಬೃಹತ್ ಅಲೆಗಳಿಗೆ ಎದುರಾಗಿ, ಯಾವುದನ್ನೂ ಲೆಕ್ಕಿಸದೇ, ಪಟ್ಟುಬಿಡದೇ ತಮ್ಮ ಗುರಿಯೆಡೆಗೆ ಮಾತ್ರ ಈಜಿ ಗಮ್ಯವನ್ನು ತಲುಪಿದ ಈ ಮಹಿಳೆಯ ಸಾಧನೆ ಅಸಾಮಾನ್ಯವಾದುದು.

ಅಲ್ಲದೇ, ಶ್ಯಾಮಲಾ ಅವರೊಂದಿಗೆ ವೈದ್ಯಕೀಯ ಸಿಬ್ಬಂದಿ ಮತ್ತು ಸ್ಕೂಬಾ ಡೈವರ್’ಗಳು ಸೇರಿದಂತೆ 14 ಸಿಬ್ಬಂದಿಗಳ ತಂಡವು ಪ್ರಯಾಸಕರವಾದ ಈ ಈಜು ಸಾಹಸದೊಂದಿಗೆ ಸಾಗಿದ್ದರು.

ಇನ್ನು ತಮ್ಮ ಹುಟ್ಟೂರು ಕಾಕಿನಾಡಕ್ಕೆ ಈಜಿನ ಮೂಲಕ ಬಂದ ಶಾಮಲಾ ಅವರನ್ನು ಸ್ಥಳೀಯರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಕಿನಾಡ ಸೀಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಿಇಒ ಮುರಳೀಧರ್, ಸ್ಥಳೀಯ ಶಾಸಕ ಚಿನ್ನರಾಜಪ್ಪ, ಕಾಕಿನಾಡ ಆಯುಕ್ತೆ ಭಾವನಾ ಮತ್ತಿತರರು ಉಪಸ್ಥಿತರಿದ್ದು ಶಾಮಲಾ ಅವರಿಗೆ ಅಭಿನಂದನೆ ಸಲ್ಲಿಸಿದರು.

Kalahamsa Infotech private limitedಇನ್ನು ಶಾಮಲಾ ಅವರ ಈಜಿನ ಸಾಹಸಕ್ಕೆ ಸ್ವತಃ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಕೂಡ ಫಿದಾ ಆಗಿದ್ದಾರೆ.

ಈ ಕುರಿತಂತೆ ವಿಡಿಯೋ ಸಹಿತ ಟ್ವೀಟ್ ಮಾಡಿರುವ ಅವರು, `52ನೇ ವಯಸ್ಸಿನಲ್ಲಿ, ಗೋಲಿ ಶ್ಯಾಮಲಾ ಅವರು ವಿಶಾಖಪಟ್ಟಣಂನಿಂದ ಕಾಕಿನಾಡಕ್ಕೆ 150 ಕಿಮೀ ಈಜಿರುವುದು ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪದ ಕಥೆಯಾಗಿದೆ. ಆರು ದಿನಗಳಲ್ಲಿ, ಆಂಧ್ರ ಪ್ರದೇಶದ ಈ ಮಗಳು ತನ್ನ ಪ್ರಯಾಣದಲ್ಲಿ ಹಲವಾರು ಸವಾಲುಗಳನ್ನು ಎದುರಿಸಿ ಅಂತಿಮವಾಗಿ ಧೈರ್ಯದಿಂದ ಜಯಗಳಿಸಿದ್ದಾರೆ. ಅವರ ಪ್ರಯಾಣವು ನಾರಿ ಶಕ್ತಿಯ ಉಜ್ವಲ ಉದಾಹರಣೆಯಷ್ಟೇ ಅಲ್ಲ, ಮಾನವ ಚೈತನ್ಯದ ಶಕ್ತಿಯ ಪ್ರತಿಬಿಂಬವಾಗಿದೆ. ತಮ್ಮ ಈ ಸಾಹಸದ ಮೂಲಕ ಅಮೂಲ್ಯ ಸಮುದ್ರ ಜೀವಿಗಳನ್ನು ರಕ್ಷಿಸುವ ಅಗತ್ಯವನ್ನು ಅವರು ಒತ್ತಿಹೇಳಿದ್ದಾರೆ. ಅವರ ಶ್ಲಾಘನೀಯ ಸಾಧನೆಯ ಮೂಲಕ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದ್ದಾರೆ. ಅಭಿನಂದನೆಗಳು ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Andra PradeshBay of BengalCM Chandrababu NaiduGoli ShamalaGoli ShyamalaKannada News WebsiteLatest News KannadaSwimmingVisakhapatnamWorld Recordಆಂಧ್ರ ಪ್ರದೇಶಈಜುಕಾಕಿನಾಡಗೋಲಿ ಶಾಮಲಾಚಂದ್ರಬಾಬು ನಾಯ್ಡುಬಂಗಾಳ ಕೊಲ್ಲಿವಿಶಾಖಪಟ್ಟಣಂ
Share196Tweet123Send
Previous Post

ಯುಪಿಐ ಎಫೆಕ್ಟ್ | ಈ ಪಾನಿಪುರಿ ಮಾರಾಟಗಾರನ ವಹಿವಾಟು ಕಂಡು ಹೌಹಾರಿದ ಆದಾಯ ತೆರಿಗೆ ಇಲಾಖೆ

Next Post

IIT Delhi Launches Third Cohort of Executive Programme in Healthcare Entrepreneurship & Management

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
IIT Delhi Launches Third Cohort of Executive Programme in Healthcare Entrepreneurship & Management

IIT Delhi Launches Third Cohort of Executive Programme in Healthcare Entrepreneurship & Management

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ

ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ

May 25, 2026
ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

May 25, 2026
ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL