ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: 700 ತಬ್ಲಿಘಿ ಜಮಾತ್ ಸದಸ್ಯರು ವಿಶೇಷ ರೈಲಿನ ಮೂಲಕ ಇಂದು ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ.
ಮಾಹಿತಿಯನ್ವಯ 700 ತಬ್ಲಿಘಿಗಳನ್ನು ದೆಹಲಿಯಲ್ಲಿ ಕ್ವಾರಂಟೈನ್’ನಲ್ಲಿರಿಸಲಾಗಿತ್ತು. ಇವರಿಗೆಲ್ಲರಿಗೂ ಕೊರೋನಾ ಟೆಸ್ಟ್ ಮಾಡಲಾಗಿದ್ದು, ಎಲ್ಲರಿಗೂ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಇವರನ್ನೆಲ್ಲಾ ಅವರ ರಾಜ್ಯ ತಮಿಳುನಾಡಿಗೆ ರೈಲು ಮೂಲಕ ಕಳುಹಿಸಲು ವ್ಯವಸ್ಥೆ ಮಾಡಲಾಗಿದ್ದು, ಕ್ವಾರಂಟೈನ್ ಸ್ಥಳದಿಂದ ರೈಲು ನಿಲ್ದಾಣಕ್ಕೆ ತೆರಳಲು ಬಸ್ ವ್ಯವಸ್ಥೆ ಸಹ ಮಾಡಲಾಗಿದೆ.
ಎಡಪ್ಪಾಡಿ ಕೆ.ಪಳನಿಸ್ವಾಮಿ ನೇತೃತ್ವದ ತಮಿಳುನಾಡು ಸರ್ಕಾರವು ವಿಶೇಷ ವಿನಂತಿಯನ್ನು ಸಲ್ಲಿಸಿದ ನಂತರ ತಬ್ಲಿಘಿ ಜಮಾತ್ ಸದಸ್ಯರನ್ನು ದೆಹಲಿಯಿಂದ ಹೊರಹೋಗಲು ಅನುಮತಿ ನೀಡಲಾಗಿದೆ.
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
Discussion about this post