No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ | ಈ ಬಾರಿ ಏನೆಲ್ಲಾ ವಿಶೇಷ ಇತ್ತು?

ಈಸೂರಿನ ಸ್ವಾಭಿಮಾನದ ಹಾದಿಯಲ್ಲಿ ನಾಡಿನ ಅಭಿವೃದ್ಧಿ: ಎಸ್. ಮಧು ಬಂಗಾರಪ್ಪ

kalpa News by kalpa News
August 15, 2026
in ಶಿವಮೊಗ್ಗ
0
Shivamogga 80th Independence Day celebration
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ಜಿಲ್ಲೆ ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ನೆಲೆಯಾಗಿದ್ದು, ಶಾಂತವೇರಿ ಗೋಪಾಲಗೌಡರು, ಕಡಿದಾಳು ಮಂಜಪ್ಪನವರು ಹಾಗೂ ಬ್ರಿಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದ ಈಸೂರಿನ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳು ಇಂದಿಗೂ ನಮಗೆಲ್ಲರಿಗೂ ಸ್ಫೂರ್ತಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ (Madhu Bangarappa) ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಎಂದರೆ ಕೇವಲ ಧ್ವಜ ಹಾರಿಸುವುದಲ್ಲ. ಪ್ರತಿಯೊಬ್ಬ ಮನುಷ್ಯನೂ ಗೌರವದಿಂದ ಬದುಕುವಂತಹ ವಾತಾವರಣ ನಿರ್ಮಿಸುವುದೇ ನಿಜವಾದ ಸ್ವಾತಂತ್ರ್ಯ. ಹಸಿವು, ಬಡತನ ಮತ್ತು ಅಸಮಾನತೆಯ ವಿರುದ್ಧ ಹೋರಾಡುವುದು ಇಂದಿನ ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಈಸೂರಿನ ಹೋರಾಟದ ಸ್ಫೂರ್ತಿಯಲ್ಲಿ ಅಭಿವೃದ್ಧಿ

ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲಿ ಈಸೂರಿನ ಸ್ವಾತಂತ್ರ್ಯ ಹೋರಾಟಕ್ಕೆ ವಿಶಿಷ್ಟ ಸ್ಥಾನವಿದೆ. ಬ್ರಿಟಿಷರ ವಿರುದ್ಧ ಈಸೂರಿನ ಜನರು ಪ್ರದರ್ಶಿಸಿದ ಸ್ವಾಭಿಮಾನ, ಧೈರ್ಯ ಮತ್ತು ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಆ ಮೌಲ್ಯಗಳನ್ನು ಇಂದಿನ ಸಮಾಜ ನಿರ್ಮಾಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಧು ಬಂಗಾರಪ್ಪ ಕರೆ ನೀಡಿದರು.

ಕುವೆಂಪು ಅವರ ‘ವಿಶ್ವಮಾನವ’ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಶಿವಮೊಗ್ಗವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಬೇಕು ಎಂದರು.

https://kalpa.news/wp-content/uploads/2026/08/Independence-Day-Film-Kannada.mp4

 

ಯುವಶಕ್ತಿಗೆ ಹೊಸ ವೇದಿಕೆ

ಯುವಜನರನ್ನು ಸಮಾಜ ನಿರ್ಮಾಣದ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸುವ ಉದ್ದೇಶದಿಂದ ರಾಜ್ಯಾದ್ಯಂತ 10,000 ‘ಭಾರತ್ ಜೋಡೋ ಯುವಕ ಸಂಘ’ಗಳನ್ನು ಸ್ಥಾಪಿಸಲು ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪ್ರತಿ ಯುವಕ ಸಂಘಕ್ಕೆ ಸರ್ಕಾರದಿಂದ ವಾರ್ಷಿಕ ₹10 ಲಕ್ಷ ಅನುದಾನವನ್ನು ಮೂರು ಕಂತುಗಳಲ್ಲಿ ನೀಡಲಾಗುವುದು. ಉದ್ಯೋಗ, ಶಿಕ್ಷಣ ಮತ್ತು ಸಮಾಜದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳಲ್ಲಿ ಯುವಜನರು ಧ್ವನಿ ಎತ್ತಲು ಹಾಗೂ ಸರ್ಕಾರದ ವಿವಿಧ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಈ ಸಂಘಗಳು ವೇದಿಕೆಯಾಗಲಿವೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜಿಲ್ಲೆಯ ಜನರಿಗೆ ದೊರೆತಿರುವ ಪ್ರಯೋಜನಗಳ ವಿವರವನ್ನು ಸಚಿವರು ನೀಡಿದರು.

  • ಗೃಹಲಕ್ಷ್ಮಿ: ಜಿಲ್ಲೆಯ 3.78 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಒಟ್ಟು ₹2,363 ಕೋಟಿ ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ.
  • ಅನ್ನಭಾಗ್ಯ: 3.76 ಲಕ್ಷ ಪಡಿತರ ಕಾರ್ಡುದಾರರಿಗೆ 2,45,290 ಕ್ವಿಂಟಾಲ್ ಅಕ್ಕಿ ವಿತರಿಸಲಾಗಿದೆ.
  • ಶಕ್ತಿ ಯೋಜನೆ: ಜಿಲ್ಲೆಯ 8.25 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ.
  • ಗೃಹಜ್ಯೋತಿ: 4.77 ಲಕ್ಷ ಕುಟುಂಬಗಳು ಯೋಜನೆಯ ಸೌಲಭ್ಯ ಪಡೆಯುತ್ತಿದ್ದು, ವಿದ್ಯುತ್ ಸಬ್ಸಿಡಿಗಾಗಿ ಸರ್ಕಾರ ₹752 ಕೋಟಿ ವೆಚ್ಚ ಮಾಡಿದೆ.
  • ಯುವನಿಧಿ: 12,969 ವಿದ್ಯಾರ್ಥಿಗಳಿಗೆ ಒಟ್ಟು ₹36 ಕೋಟಿ ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ

ರಾಜ್ಯದಲ್ಲಿ ಈಗಾಗಲೇ 1,000 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳನ್ನು ಪ್ರಾರಂಭಿಸಲಾಗಿದ್ದು, ಮುಂದಿನ ಹಂತದಲ್ಲಿ ಮತ್ತಷ್ಟು 1,000 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು ಎಂದು ಸಚಿವರು ತಿಳಿಸಿದರು.ರಾಜ್ಯಮಟ್ಟದ ಕೆಪಿಎಸ್ ಉದ್ಘಾಟನಾ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿಯೇ ಆಯೋಜಿಸುವ ಉದ್ದೇಶವಿದೆ ಎಂದ ಅವರು, ಜಿಲ್ಲೆಯಲ್ಲಿ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ಒದಗಿಸುವ 11 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಗೆ ಹೊಸದಾಗಿ 59 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಯ 222 ಸರ್ಕಾರಿ ಶಾಲೆಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳು ನಡೆಯುತ್ತಿವೆ. ಶಾಲಾ ಕೊಠಡಿಗಳ ದುರಸ್ತಿಗೆ ₹319 ಲಕ್ಷ ಹಾಗೂ ಹೊಸ ಕೊಠಡಿಗಳ ನಿರ್ಮಾಣಕ್ಕೆ ₹1,180 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶಿವಮೊಗ್ಗದ ಸಾಧನೆ

ರಾಜ್ಯದಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ 98.08% ಹಾಗೂ ದ್ವಿತೀಯ ಪಿಯುಸಿಯಲ್ಲಿ 92.25% ಫಲಿತಾಂಶ ದಾಖಲಾಗಿದ್ದು, ಇದು ಐತಿಹಾಸಿಕ ಸಾಧನೆಯಾಗಿದೆ ಎಂದು ಸಚಿವರು ಹೇಳಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ 96.5%ಕ್ಕೆ ಏರಿಕೆಯಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.14ರಷ್ಟು ಪ್ರಗತಿ ಕಂಡುಬಂದಿದೆ ಎಂದು ತಿಳಿಸಿದರು.

ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆಗೆ ಇದೇ ಮೊದಲ ಬಾರಿಗೆ ಸರ್ಕಾರ ಆದೇಶ ಹೊರಡಿಸಿದೆ ಎಂದರು.

ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ

ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಕಟ್ಟಡಗಳ ನಿರ್ಮಾಣಕ್ಕಾಗಿ ₹24 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲೆಗೆ 9 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಮಂಜೂರಾಗಿದ್ದು, 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ದೊರೆತಿದೆ ಎಂದು ಸಚಿವರು ವಿವರಿಸಿದರು.PES Shivamogga

72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ಯುವಜನರ ಭವಿಷ್ಯಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ 72,000 ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಇದರ ಭಾಗವಾಗಿ 15,000 ಶಿಕ್ಷಕರ ನೇರ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಖಾಸಗಿ ವಲಯದಲ್ಲಿ ಉದ್ಯೋಗ ಬಯಸುವ ಯುವಕರು ಮತ್ತು ಉದ್ಯೋಗದಾತರ ನಡುವೆ ಸಂಪರ್ಕ ಕಲ್ಪಿಸಲು ಕೃತಕ ಬುದ್ಧಿಮತ್ತೆ ಆಧಾರಿತ ‘ಯುವ ಉದ್ಯೋಗ ಸೇತು’ ವೇದಿಕೆಯನ್ನು ಜಾರಿಗೆ ತರಲಾಗಿದೆ ಎಂದರು.

ರೈತರ ಹಿತರಕ್ಷಣೆಗೆ ಆದ್ಯತೆ

ರೈತರ ಹಿತರಕ್ಷಣೆಗಾಗಿ ‘ಮುಖ್ಯಮಂತ್ರಿಗಳ ರೈತ ಚೈತನ್ಯ’ ಮತ್ತು ‘ರೈತ ಮಿತ್ರ’ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದರು.

ಮುಂಗಾರು ಮಳೆಯ ಏರುಪೇರು, ಅತಿವೃಷ್ಟಿ ಹಾಗೂ ಬೆಳೆ ಹಾನಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಹಾಗೂ ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ತ್ವರಿತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಗ್ರಾಮೀಣ ರಸ್ತೆಗಳು ಮತ್ತು ಕುಡಿಯುವ ನೀರಿಗೆ ಒತ್ತು

ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಗೆ ₹250 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಸಂಪರ್ಕ ರಸ್ತೆಗಳು ಹಾಗೂ ಗ್ರಾಮೀಣ ಮೂಲಸೌಕರ್ಯಗಳನ್ನು ಬಲಪಡಿಸುವ ಕಾಮಗಾರಿಗಳು ನಡೆಯುತ್ತಿವೆ ಎಂದು ಸಚಿವರು ಹೇಳಿದರು.

ವಿಬಿಜಿ ರಾಮ್ ಜಿ ಯೋಜನೆಯಡಿ 2025-26ನೇ ಸಾಲಿನಲ್ಲಿ 19 ಲಕ್ಷ ಮಾನವ ದಿನಗಳನ್ನು ಸೃಷ್ಟಿಸಲಾಗಿದ್ದು, ₹68.69 ಕೋಟಿ ಕೂಲಿ ಹಾಗೂ ₹8.82 ಕೋಟಿ ಸಾಮಗ್ರಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ₹1,005 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಸಾಗರ ತಾಲೂಕಿನ ಆನಂದಪುರ ಯೋಜನೆಯ ₹100.94 ಕೋಟಿ ಅಂದಾಜಿನ ಕಾಮಗಾರಿಗಳು ಅಂತಿಮ ಹಂತದಲ್ಲಿವೆ ಎಂದರು.

ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಮೇಲ್ದರ್ಜೆಗೆ

ಶಿವಮೊಗ್ಗದ ಮೆಗಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯ ನಡೆಯುತ್ತಿದೆ. ಆಸ್ಪತ್ರೆಯಲ್ಲಿನ ಕ್ಯಾನ್ಸರ್ ಚಿಕಿತ್ಸೆ, ಹೃದ್ರೋಗ ವಿಭಾಗ ಹಾಗೂ ತೀವ್ರ ನಿಗಾ ಘಟಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಮೇಲ್ದರ್ಜೆಗೇರಿಸುವ ಕೆಲಸ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಶರಾವತಿ ಸಂತ್ರಸ್ತರು, ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಪರಿಹಾರಕ್ಕೆ ಆದ್ಯತೆ

ದಶಕಗಳಿಂದ ಬಾಕಿ ಉಳಿದಿರುವ ಶರಾವತಿ ಸಂತ್ರಸ್ತರು ಹಾಗೂ ಬಗರ್ ಹುಕುಂ ಸಾಗುವಳಿದಾರರ ಹಕ್ಕುಗಳ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಆದ್ಯತೆ ನೀಡಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ರೈತರು, ಬಡವರು ಹಾಗೂ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಆರ್. ಬೊಮ್ಮಾಯಿ ಹಾಗೂ ದೇವರಾಜ ಅರಸು ಅವರ ಆಶಯಗಳಿಗೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಶಿವಮೊಗ್ಗದಲ್ಲಿ ಅಡಿಕೆ ಬೆಳೆಯ ವಿಸ್ತರಣೆ

ಶಿವಮೊಗ್ಗ ಜಿಲ್ಲೆಯಲ್ಲಿ 1990ರಲ್ಲಿ ಕೇವಲ 12,000 ಹೆಕ್ಟೇರ್ ಪ್ರದೇಶದಲ್ಲಿದ್ದ ಅಡಿಕೆ ಬೆಳೆ ಇಂದು ಸುಮಾರು 1.4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಣೆಯಾಗಿದೆ ಎಂದು ಸಚಿವರು ತಿಳಿಸಿದರು.

ಜನಪರ ಯೋಜನೆಗಳ ಮೂಲಕ ಬಡವರು, ರೈತರು ಹಾಗೂ ಹಿಂದುಳಿದ ವರ್ಗಗಳ ಜೀವನಮಟ್ಟ ಸುಧಾರಣೆಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಇಂದಿಗೂ ರಾಜ್ಯದ ಜನರ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ ಎಂದು ಸ್ಮರಿಸಿದರು.Kumadvathi College Shikariura

‘ಬಂಗಾರಪ್ಪನವರ ಹಾದಿಯಲ್ಲಿ ಸಾಗುವುದು ನನ್ನ ಜವಾಬ್ದಾರಿ’

“ನಾನು ಬಂಗಾರಪ್ಪನವರ ಮಗ ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತೇನೆ. ಆದರೆ ಅದಕ್ಕಿಂತ ಹೆಚ್ಚಾಗಿ ಅದೊಂದು ದೊಡ್ಡ ಜವಾಬ್ದಾರಿ. ಬಡವರ, ಶೋಷಿತರ ಹಾಗೂ ಶಿವಮೊಗ್ಗದ ಜನರ ಸೇವೆ ಮಾಡುವುದು, ಅವರ ಹಾದಿಯಲ್ಲಿ ಮುನ್ನಡೆಯುವುದು ನನ್ನ ಕರ್ತವ್ಯವಾಗಿದೆ,” ಎಂದು ಎಸ್. ಮಧು ಬಂಗಾರಪ್ಪ ಹೇಳಿದರು.

“ನನ್ನ ತಂದೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ಬಡವರು, ರೈತರು ಮತ್ತು ಹಿಂದುಳಿದವರ ಪರವಾಗಿ ನಿರ್ಮಿಸಿದ ಹಾದಿಯಲ್ಲಿ ಸಾಗುವುದು ನನ್ನ ಜವಾಬ್ದಾರಿಯಾಗಿದೆ. ಕುವೆಂಪು ಅವರ ‘ವಿಶ್ವಮಾನವ’ ಸಂದೇಶದೊಂದಿಗೆ ಶಿವಮೊಗ್ಗ ಮತ್ತು ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸೋಣ,” ಎಂದು ಅವರು ಹೇಳಿದರು.

Also read>> ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

18 ಸಾವಿರ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ

ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳ ಸುಮಾರು 18 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

ಒಟ್ಟು 29 ಕವಾಯಿತು ತುಕಡಿಗಳು ಶಿಸ್ತುಬದ್ಧ ಹಾಗೂ ಆಕರ್ಷಕ ಪಥಸಂಚಲನ ನಡೆಸಿದವು. ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ದೇಶಭಕ್ತಿ ಗೀತೆಗಳ ನೃತ್ಯ ಪ್ರದರ್ಶನವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.

ಡಿಎಆರ್ ಆರ್‌ಪಿಐ ಯುವರಾಜ್ ಅವರು ಕವಾಯಿತು ಮುಖ್ಯ ದಂಡ ನಾಯಕರಾಗಿ ಕನ್ನಡದಲ್ಲಿ ಆದೇಶಗಳನ್ನು ನೀಡಿದರು.

ಕವಾಯಿತು ಹಾಗೂ ಸಾಂಸ್ಕೃತಿಕ ಪ್ರದರ್ಶನಕ್ಕೆ ಬಹುಮಾನ

ಶಿಸ್ತಿನ ಕವಾಯಿತು ಪ್ರದರ್ಶಿಸಿದ ತುಕಡಿಗಳ ಪೈಕಿ ಕಸ್ತೂರಿಬಾ ಬಾಲಕಿಯರ ಪೂರ್ವ ಪ್ರೌಢಶಾಲೆಯ ಭಾರತ ಸೇವಾದಳ ವಿಭಾಗಕ್ಕೆ ಪ್ರಥಮ, ಜಾವಳ್ಳಿಯ ಜ್ಞಾನದೀಪ ಪ್ರೌಢಶಾಲೆಗೆ ದ್ವಿತೀಯ ಹಾಗೂ ಮೊರಾರ್ಜಿ ದೇಸಾಯಿ ಬಾಲಕರ ವಸತಿ ಶಾಲೆಗೆ ತೃತೀಯ ಬಹುಮಾನ ಲಭಿಸಿತು.

ಅತ್ಯುತ್ತಮ ಸಾಂಸ್ಕೃತಿಕ ನೃತ್ಯ ಪ್ರದರ್ಶನಕ್ಕಾಗಿ ಕಿರಣ ಕೇಂದ್ರ ವಿದ್ಯಾಲಯಕ್ಕೆ ಪ್ರಥಮ, ಪೊಲೀಸ್ ಪಬ್ಲಿಕ್ ಶಾಲೆಗೆ ದ್ವಿತೀಯ ಹಾಗೂ ಮೌಂಟ್ ಇನ್ನೋವೇಟಿವ್ ಶಾಲೆಗೆ ತೃತೀಯ ಬಹುಮಾನ ನೀಡಲಾಯಿತು.

ಇದೇ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ಸೌಹಾರ್ದತೆ ಮತ್ತು ಸಾಮಾಜಿಕ ನ್ಯಾಯವೇ ಅಭಿವೃದ್ಧಿಯ ಆಧಾರ

ಅಭಿವೃದ್ಧಿ ಎಂದರೆ ಕೇವಲ ತಂತ್ರಜ್ಞಾನ ಅಥವಾ ಭೌತಿಕ ಮೂಲಸೌಕರ್ಯಗಳ ನಿರ್ಮಾಣವಲ್ಲ. ಸೌಹಾರ್ದತೆ, ಸಾಮಾಜಿಕ ನ್ಯಾಯ, ಸಮಾನ ಅವಕಾಶ ಹಾಗೂ ಸಂವಿಧಾನದ ಮೌಲ್ಯಗಳನ್ನು ಗೌರವಿಸುವ ಸಮಾಜ ನಿರ್ಮಾಣವೂ ಅಭಿವೃದ್ಧಿಯ ಭಾಗವಾಗಿದೆ ಎಂದು ಸಚಿವರು ಹೇಳಿದರು.

ಹಿಂದುಳಿದ ಸಮುದಾಯಗಳಿಗೆ ಶಕ್ತಿ ತುಂಬಿ, ಕನ್ನಡದ ನೆಲ, ಜಲ ಮತ್ತು ಸಂಸ್ಕೃತಿಯನ್ನು ಎತ್ತಿಹಿಡಿಯುತ್ತಾ ಶಿವಮೊಗ್ಗವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲರ ಸಹಕಾರ ಅಗತ್ಯ ಎಂದು ಅವರು ಹೇಳಿದರು.Kalahamsa Infotech private limited

1947ರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ರೂಪಿಸುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ. ಈಸೂರಿನ ಸ್ವಾಭಿಮಾನವನ್ನು ಉಳಿಸಿಕೊಂಡು, ಕುವೆಂಪು ಅವರ ‘ವಿಶ್ವಮಾನವ’ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

“ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಯುವಕರಿಗೆ ಹೊಸ ಅವಕಾಶ, ರೈತರಿಗೆ ಬಲ ಹಾಗೂ ಪ್ರತಿಯೊಬ್ಬರಿಗೂ ಗೌರವಯುತ ಬದುಕು ನೀಡುವ ಹೊಸ ಭಾರತವನ್ನು ಕಟ್ಟಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ,” ಎಂದು ಎಸ್. ಮಧು ಬಂಗಾರಪ್ಪ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಬಲ್ಕೀಶ್ ಬಾನು, ಡಾ. ಧನಂಜಯ ಸರ್ಜಿ, ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್, ರಾಜ್ಯ ಎಸ್‌ಸಿ, ಎಸ್‌ಟಿ ಹಾಗೂ ಅಲೆಮಾರಿಗಳ ಅಭಿವೃದ್ಧಿ ಸಂಘದ ಅಧ್ಯಕ್ಷೆ ಪಲ್ಲವಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್. ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಮಹಾನಗರಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಎಸಿ, ತಹಶೀಲ್ದಾರ್‌ಗಳು, ಜನಪ್ರತಿನಿಧಿಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಬಲ್ಕೀಶ್ ಬಾನು, ಡಾ. ಧನಂಜಯ ಸರ್ಜಿ, ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್, ರಾಜ್ಯ ಎಸ್‌ಸಿ, ಎಸ್‌ಟಿ ಹಾಗೂ ಅಲೆಮಾರಿಗಳ ಅಭಿವೃದ್ಧಿ ಸಂಘದ ಅಧ್ಯಕ್ಷೆ ಪಲ್ಲವಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್. ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಮಹಾನಗರಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಎಸಿ, ತಹಶೀಲ್ದಾರ್‌ಗಳು, ಜನಪ್ರತಿನಿಧಿಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising Disclaimer

Tags: 80th Independence dayMinister Madhu BangarappaShivamoggaಶಿವಮೊಗ್ಗ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

Next Post

ನಾಯಕತ್ವವು ಸರಪಳಿಯಲ್ಲ, ನಾವು ಹೊತ್ತುಕೊಂಡು ಸಾಗಬೇಕಾದ ಜವಾಬ್ದಾರಿ: ದೇವೇಂದ್ರ ಪ್ರತಾಪ್

kalpa News

kalpa News

Next Post
Shivamogga Leadership Lecture In PESIMS

ನಾಯಕತ್ವವು ಸರಪಳಿಯಲ್ಲ, ನಾವು ಹೊತ್ತುಕೊಂಡು ಸಾಗಬೇಕಾದ ಜವಾಬ್ದಾರಿ: ದೇವೇಂದ್ರ ಪ್ರತಾಪ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL