ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಪಕ್ಷದಿಂದ ಪಾಲಿಕೆ ಸದಸ್ಯರಾದ ಶಾಮೀರ್ ಖಾನ್ ಅವರ ಮನೆಯ ಮೇಲೆ ಇಂದು ಮುಂಜಾನೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ 40 ಕೆಜಿ ಅಕ್ರಮ ಗೋಮಾಂಸ ಪತ್ತೆಯಾಗಿದೆ.
ಟಿಪ್ಪು ನಗರದಲ್ಲಿರುವ ಶಾಮೀರ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದ್ದು, ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಇಟ್ಟುಕೊಂಡಿದ್ದ 40 ಕೆಜಿ ಗೋಮಾಂಸ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಶಾಮೀರ್ ಪುತ್ರ ಇಬಾದ್ ಹಾಗೂ ಸಹಚರರು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು, ದಾಳಿ ನಡೆಸುತ್ತಿದ್ದಂತೆಯೇ ಅವರುಗಳು ಪರಾರಿಯಾಗಿದ್ದಾರೆ. ಮಾಜಿ ಶಾಸಕರೊಬ್ಬರ ಆತ್ಮೀಯರಾಗಿದ್ದ ಶಾಮೀರ್ ಖಾನ್ ಇವರ ಪತ್ನಿ ಮೇಯರ್ ಆಗಿದ್ದರು.
ಇನ್ನು ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ ಎಂದು ಹೇಳಲಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳಿಗೂ ಸಹ ದೂರು ನೀಡಲಿದೆ ಎನ್ನಲಾಗಿದೆ.
ತುಂಗನಗರ ಪೊಲೀಸ್ ಠಾಣೆಯಲ್ಲಿ Cow slaughter act section 4, 5 , 12 ಅಡಿಯಲ್ಲಿ ಎಫ್’ಐಆರ್ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post