ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸ ವರ್ಷಾಚರಣೆಯ ಸಂಭ್ರಮವನ್ನು ವಿಭಿನ್ನವಾಗಿ ಆಚರಿಸುವ ವೇಳೆ ಮಿಸ್ ಫೈರಿಂಗ್ ಆಗಿ ಗಾಯಗೊಂಡಿದ್ದ ಯುವಕ ವಿನಯ್ ಎನ್ನುವವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ವಿನಯ್ (35) ಪಿಎಚ್’ಡಿ ವಿದ್ಯಾರ್ಥಿಯಾಗಿದ್ದು, ಮೂಲತಃ ಹೊಸನಗರದ ಹುಡುಗ ಎನ್ನಲಾಗಿದೆ.

ನಿನ್ನೆ ರಾತ್ರಿ 12 ಗಂಟೆ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಮಂಜುನಾಥ್ ಅವರು ತನ್ನ ಬಂದೂಕಿನಿAದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ಈ ಗುಂಡು ಮಿಸ್ ಆಗಿ ವಿನಯ್’ಗೆ ತಗುಲಿತ್ತು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post