ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಮನಗರದ ಮಾವತ್ತೂರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಫೋಟೋಗ್ರಾಫರ್ ಪ್ರಸನ್ನ ಭಟ್ ಅವರ ಅಂತ್ಯಕ್ರಿಯೆ ಭಾರೀ ಜನಸ್ತೋಮದ ನಡುವೆ ಹೊಸನಗರದಲ್ಲಿ ನಡೆಯಿತು.
ಸೋಮವಾರ ಮಧ್ಯಾಹ್ನ 4:15ಕ್ಕೆ ಪ್ರಸನ್ನ ಭಟ್ ಮೃತದೇಹ ಶಿವಮೊಗ್ಗ ತಲುಪಿತು. ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ 15 ನಿಮಿಷಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಕೆ.ಈ.ಕಾಂತೇಶ್ ಸೇರಿದಂತೆ ನೂರಾರು ಸ್ನೇಹಿತರು ಹಿತೈಷಿಗಳು ಪ್ರಸನ್ನ ಭಟ್ ಗೆ ಅಂತಿಮ ನಮನ ಸಲ್ಲಿಸಿದರು. ನಂತರ ಮೃತ ದೇಹವನ್ನು ಶಿವಮೊಗ್ಗದಿಂದ ಹೊಸನಗರಕ್ಕೆ ತೆಗೆದುಕೊಂಡು ಹೋಗಲಾಯಿತು.
ಗೃಹ ಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಸನ್ನ ಭಟ್ ಮನೆಗೆ ಆಗಮಿಸಿ ಅಂತಿಮ ನಮನ ಸಲ್ಲಿಸಿ, ಪ್ರಸನ್ನ ಅವರ ಪೋಷಕರನ್ನು ಸಂತೈಸಿದರು.
ಈ ಸಂದರ್ಭದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಸಾಮಾಜಿಕ ಕೆಲಸಗಳಲ್ಲಿ ತನ್ನದೇ ಶೈಲಿಯಲ್ಲಿ ಗುರುತಿಸಿಕೊಂಡಿದ್ದ ಪ್ರಸನ್ನ ಭಟ್ ಅದ್ಭುತ ಛಾಯಾಗ್ರಾಹಕ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಅಪಾರ ಜನಬೆಂಬಲ ಪಡೆದಿದ್ದ ಅವರು ಮೃತರಾಗಿರುವುದು ನಿಜಕ್ಕೂ ನೋವಿನ ಸಂಗತಿ. ಕುಟುಂಬಕ್ಕೆ ದೇವರು ನೋವು ಮರೆಸುವ ಶಕ್ತಿ ನೀಡಲಿ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post