Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಪಂಚರತ್ನ ರಥಯಾತ್ರೆಗೆ ಬೃಹತ್ ಜನ ಬೆಂಬಲ: ಹೆಚ್ಡಿಕೆ, ಖಾಶೆಂಪುರ್ ಅವರಿಗೆ ಅದ್ದೂರಿ ಸ್ವಾಗತ

January 6, 2023
in ಬೀದರ್
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ H D Kumaraswamy ಹಾಗೂ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರ Bandeppa Khashempur ಸಮ್ಮುಖದಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆಗೆ ಬೃಹತ್ ಜನ ಬೆಂಬಲ ವ್ಯಕ್ತವಾಗಿದೆ.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಮಲಾಪೂರ ಗ್ರಾಮದಿಂದ ಶುಕ್ರವಾರ ಬೆಳಗ್ಗೆ ಆರಂಭವಾದ ರಥಯಾತ್ರೆಯನ್ನು ಕ್ಷೇತ್ರದ ಜನತೆ ವಿಶಿಷ್ಟ ಹಾರಗಳು, ವಿವಿಧ ಕಲಾ ತಂಡಗಳೊಂದಿಗೆ ಸ್ವಾಗತಿಸಿಕೊಂಡರು. ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಲಕ್ಷಾಂತರ ಜನರು ಮಾಜಿ ಸಚಿವ ಕುಮಾರಣ್ಣರವರ ಸ್ವಾಗತಕ್ಕಾಗಿ ಕಾತರದಿಂದ ಕಾಯ್ದುಕೊಂಡು ಅವರನ್ನು ತಮ್ಮೂರಿಗೆ ಬರಮಾಡಿಕೊಂಡರು.
ಯಾತ್ರೆ ನಡೆದುಬಂದ ದಾರಿ:
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಮಲಾಪೂರ ಗ್ರಾಮದಿಂದ ಆರಂಭವಾದ ದಕ್ಷಿಣ ಕ್ಷೇತ್ರದ ಪಂಚರತ್ನ ರಥಯಾತ್ರೆಯನ್ನು ಗ್ರಾಮಸ್ಥರು ಎತ್ತಿನ ಬಂಡಿಯೊಂದಿಗೆ ಸ್ವಾಗತಿಸಿ, ಬೈಕ್ ರ್ಯಾಲಿ ನಡೆಸಿ ವಿವಿಧ ಹೂವಿನ ಹಾರಗಳನ್ನು ಹಾಕಿದರು. ಇದೇ ವೇಳೆ ಹೆಚ್ಡಿಕೆ ಮತ್ತು ಖಾಶೆಂಪುರ್ ಎತ್ತಿನ ಗಾಡಿಯಲ್ಲಿಯೇ ಸಾಗಿದರು. ಇದೇ ವೇಳೆ ಗ್ರಾಮಸ್ಥರು ಮೊಸಂಬಿ (ಕಿತ್ತಾಳೆ) ಹಣ್ಣಿನ ವಿಶೇಷ ಹಾರ ಹಾಕಿ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಕುಮಾರಸ್ವಾಮಿರವರು, ಬಡವರ, ರೈತರ, ಗ್ರಾಮೀಣ ಜನರ ಒಳಿತಿಗಾಗಿ ಅನೇಕ ಯೋಜನೆಗಳನ್ನು, ರೈತರಿಗಾಗಿ ಮತ್ತು ಗ್ರಾಮೀಣ ಭಾಗದ ಜನರಿಗೆ ಶಾಶ್ವತ ಕಾರ್ಯಕ್ರಮಗಳನ್ನು ತರುವ ಉದ್ದೇಶದಿಂದ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ಸ್ತ್ರೀ ಶಕ್ತಿ ಸ್ವಸಾಹಯ ಗುಂಪುಗಳ ಸಾಲವನ್ನು ನಾವು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಮಾಡುತ್ತೇವೆ. ಬಿದಿಬದಿಯ ವ್ಯಾಪಾರಿಗಳಿಗೆ ಸರ್ಕಾರದಿಂದ ಬಡ್ಡಿ ರಹಿತ ನೇರವು ನೀಡುತ್ತೇವೆಂದರು.
ಬಂಡೆಪ್ಪ ಖಾಶೆಂಪುರ್ ರವರು ಈಗಾಗಲೇ ಎರಡು ಬಾರಿ ಸಚಿವರಾಗಿ ಅನೇಕ ಜನ ಪರ ಕೆಲಸಗಳನ್ನು ಮಾಡಿದ್ದಾರೆ. ಅವರು ನಿಮ್ಮೆಲ್ಲರಿಗೆ ಆತ್ಮೀಯರಾಗಿದ್ದಾರೆ. ಅವರಿಗೆ ನಿಮ್ಮ ಮತ ನೀಡಿ ಎಂದು ಹೆಚ್ಡಿಕೆ ಮನವಿ ಮಾಡಿದರು.

ನಾಗೋರಾ ಗ್ರಾಮಕ್ಕೆ ಆಗಮಿಸಿದ ಪಂಚರತ್ನ ರಥಯಾತ್ರೆ
ಅಮಲಾಪೂರದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರು ಬಳಿಕ ನಾಗೋರಾ ಕಡೆಗೆ ಪಂಚರತ್ನ ರಥಯಾತ್ರೆಯ ರಥವನ್ನು ಕಳಿಸಿಕೊಟ್ಟರು. ಅಮಲಾಪೂರ – ನಾಗೋರಾದವರೆಗೂ ಅದ್ದೂರಿಯಾಗಿ ಸಾಗಿದ ರ್ಯಾಲಿಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.

ಪುದಿನ ಹಾರದೊಂದಿಗೆ ನಾಗೋರಾಕ್ಕೆ ಅದ್ದೂರಿ ಸ್ವಾಗತ*
ಪಂಚರತ್ನ ರಥಯಾತ್ರೆಯ ರಥತವನ್ನ ನಾಗೋರಾ ಗ್ರಾಮಸ್ಥರು ಪುದೀನಾ ಹಾರದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿಕೊಂಡರು‌. ರಸ್ತೆಯೂದ್ದಕ್ಕೂ ಸಾವಿರಾರು ಬೈಕ್, ಕಾರ್ ಗಳ ರ್‍ಯಾಲಿಯಲ್ಲಿದ್ದವು‌‌. ಬಳಿಕ ಯಾಕತಪೂರ್ ದಲ್ಲೂ ಪುದಿನಾ ಹಾರದೊಂದಿಗೆ ಸ್ವಾಗತಿಸಿದರು. ಮಾರ್ಗ ಮಧ್ಯದ ಯಾಕತಪೂರ್ ದ ಲಿಟಲ್ ಪ್ಲಾವರ್ ಶಾಲೆಯ ಮಕ್ಕಳು ಹೆಚ್ಡಿಕೆ ಅವರಿಗೆ ಸನ್ಮಾನಿಸಿದರು.
ಮನ್ನಳಿಗೆ ಅದ್ದೂರಿಯಾಗಿ ಸ್ವಾಗತ
ಹೆಚ್ಡಿಕೆ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಮನ್ನಳ್ಳಿ ಗ್ರಾಮಸ್ಥರು. ಕಂಬಳಿ ಹಾರದೊಂದಿಗೆ ಅದ್ದೂರಿ ಸ್ವಾಗತಿಸಿದರು. ಕಳಸ, ಕುಂಭಮೇಳದೊಂದಿಗೆ ಮಹಿಳೆಯರು ಪಾಲ್ಗೊಂಡಿದ್ದರು.

Also read: ನೂತನ ಟವರ್ ಅಳವಡಿಕೆ ಹಿನ್ನೆಲೆ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಶಾಸಕ ಹಾಲಪ್ಪ ಸಭೆ

ಮನ್ನಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿರವರು, ನಾವು ರೈತರ, ಬಡವರ, ಶ್ರಮಿಕರ ಪರವಾಗಿ ಕೆಲಸ ಮಾಡುವ ಪಣ ತೊಟ್ಟಿದ್ದೇವೆ. ನಾವು ಅಧಿಕಾರಕ್ಕೆ ಬಂದರೇ ಪಂಚ ಯೋಜನೆಗಳನ್ನು ಜಾರಿಗೆ ತರುತ್ತೇವೆ. ನಾಡಿನ ಒಳಿತಿಗಾಗಿ ಶ್ರಮಿಸುತ್ತೇವೆ. ನಮಗೆ ಮತ ನೀಡಿ ಸಂಪೂರ್ಣ ಐದು ವರ್ಷಗಳ ಸರ್ಕಾರ ತರಲು ಅನುಕೂಲ ಕಲ್ಪಿಸಿ ಕೊಡಬೇಕು ಎಂದು ಮನವಿ ಮಾಡಿದರು.

ಮನ್ನಳ್ಳಿ ಗ್ರಾಮದಲ್ಲಿ ಇಷ್ಟೊಂದು ದೊಡ್ಡಮಟ್ಟದ ಜನಸೇರಿ ನಮ್ಮ ಪಕ್ಷವನ್ನು ಬೆಂಬಲಿಸಿದ್ದಿರಿ. ಪಕ್ಷದ ಪರವಾಗಿ ನಾನು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನಮ್ಮ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು. ಬಳಿಕ ಸಿಂದೋಲ್ ನಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಕಂಬಳಿ ಹಾಕಿ ರಥಯಾತ್ರೆಯನ್ನು ಸ್ವಾಗತಿಸಿದರು. ಸಿಂದೋಲ್, ರಾಜಗಿರ, ಪಾತರಪಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜನರು ಅಲ್ಲಿದ್ದರು.
ಐದು ತಿಂಗಳ ಬಳಿಕ 24 ತಾಸು ಕರೆಂಟ್
ಐದು ತಿಂಗಳು ತಡೆಯಿರಿ, ಕುಮಾರಣ್ಣ ಮುಖ್ಯಮಂತ್ರಿಯಾದ ನಂತರ ದಿನದ 24 ತಾಸು ರೈತರಿಗೆ ವಿದ್ಯುತ್ ಪೂರಕೆ ಮಾಡಲಾಗುತ್ತದೆ. ಎಲ್ಲಾ ರೀತಿಯಿಂದಲ್ಲೂ ಜನಪರ ಯೋಜನೆಗಳನ್ನು ಅವರು ಅಧಿಕಾರಕ್ಕೆ ಬಂದ ನಂತರ ಜಾರಿಗೆ ತರುತ್ತೇವೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು.

ಸ್ಪಷ್ಟವಾದ ಬಹುಮತದ ಸರ್ಕಾರವನ್ನು ತಾವು ತಂದರೆ ನಿಜವಾದ ರೈತಪರವಾದ ಯೋಜನೆಗಳನ್ನು ಜಾರಿಗೆ ತರುತ್ತೇವೆ. ರೈತರು ಸಾಲಗಾರರಾಗದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಹೆಚ್ಡಿಕೆ ಭರವಸೆ ನೀಡಿದರು.

ಬಳಿಕ ಪಂಚರತ್ನ ರಥಯಾತ್ರೆ ಬಂಗೂರು, ಬೇಮಳಖೇಡ, ಉಡಮನಳ್ಳಿ, ಕರಕನಳ್ಳಿ, ಚಾಂಗಲೇರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ತಲುಪಿತು. ಇದೇ ವೇಳೆ ಕರಕನಳ್ಳಿಯ ಗಂಗಾಧರ ಬುಕ್ಕ ಪ್ರಭು ದೇವಸ್ಥಾನ, ಚಾಂಗಲೇರಾದ ವೀರಭದ್ರೇಶ್ವರ ದೇವಸ್ಥಾನಗಳಿಗೆ ರಥಯಾತ್ರೆ ಸಾಗಿತು. ಜೆಡಿಎಸ್ ಜಿಲ್ಲಾಧ್ಯಕ್ಷ, ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಮೇಶ ಪಾಟೀಲ್ ಸೋಲಪೂರ್ ರವರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandeppa KhashempurBidarH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್ಹೆಚ್.ಡಿ. ಕುಮಾರಸ್ವಾಮಿ
Previous Post

ನೂತನ ಟವರ್ ಅಳವಡಿಕೆ ಹಿನ್ನೆಲೆ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಶಾಸಕ ಹಾಲಪ್ಪ ಸಭೆ

Next Post

ಬರಿಗೆ – ಹಲಸಿನಕೊಪ್ಪ- ಕ್ಯಾಸನೂರು ಗ್ರಾಮಗಳಲ್ಲಿ ಭೂಕಬಳಿಕೆ ಹಿನ್ನೆಲೆ ಕ್ರಮಕ್ಕೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬರಿಗೆ - ಹಲಸಿನಕೊಪ್ಪ- ಕ್ಯಾಸನೂರು ಗ್ರಾಮಗಳಲ್ಲಿ ಭೂಕಬಳಿಕೆ ಹಿನ್ನೆಲೆ ಕ್ರಮಕ್ಕೆ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!