ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಪಶು ವಿಶ್ವವಿದ್ಯಾಲಯದ ಸನಿಹ ರೈಲ್ವೆ ಸೇತುವೆ ಬಳಿ 17 ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.
ಮೃತ ಬಾಲಕನನ್ನು ಹೊಸಮನೆಯ ವಿಶ್ವಾಸ್ ಎಂದು ಗುರುತಿಸಲಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವೋ ಎಂಬುದು ಇನ್ನೂ ತಿಳಿದುಬಂದಿಲ್ಲ.
ಈತ ಸ್ಥೂಲಕಾಯದ ಬಾಲಕನಾಗಿದ್ದು ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















