ಸಮಾಜದ ಅಭಿವೃದ್ಧಿಯೇ ನಮ್ಮ ಸಂವಿಧಾನದ ಅಂತಿಮ ಆಶಯ ಎಂಬ ಡಾ. ಅಂಬೇಡ್ಕರ್ ಮಾತನ್ನು ಅರಿತು ಅಭಿವೃದ್ಧಿಯ ಪಥದಲ್ಲಿ ದೇಶ ಸಾಗುತ್ತಿದ್ದು, ಅಭಿವೃದ್ಧಿಯೊಂದಿಗೆ ಕರ್ನಾಟಕ ರಾಜ್ಯವನ್ನು ಮತ್ತು ಭಾರತ ದೇಶವನ್ನು ಸಶಕ್ತ, ಸದೃಢ ಪ್ರಜಾಪ್ರಭುತ್ವವಾಗಿ ರೂಪಿಸಲು ನಾವೆಲ್ಲರೂ ಶ್ರಮಿಸಬೇಕು ಎಂದು ಯುವ ಸಬಲೀಕರಣ, ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ Minister Narayana Gowda ಹೇಳಿದರು.
ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 74ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಾರತದ ಇತಿಹಾಸದಲ್ಲಿಯೇ ಗಣರಾಜ್ಯೋತ್ಸವ ಮಹತ್ವದ ದಿನವಾಗಿದೆ. ಮಹಾತ್ಮ ಗಾಂಧೀಜಿ, ಪಂಡಿತ್ ನೆಹರು, ಸರ್ಧಾರ್ ಪಟೇಲ್ ರವರ ನೇತೃತ್ವದಲ್ಲಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರು ಸ್ವತಂತ್ರ ಭಾರತಕ್ಕೊಂದು ಭದ್ರ ಸಂವಿಧಾನ ನೀಡಿದರು. ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಅತ ಸಂವಿಧಾನ ನಮ್ಮದು. ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ, ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಹಾಗೂ ಸಮಾನ ಅವಕಾಶ ನೀಡಲಾಗಿದೆ ಎಂದರು.
ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ಏಕತೆಯನ್ನು ಸಾರುವ ದೇಶ ನಮ್ಮ ಭಾರತ. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದೀ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆ ಇಟ್ಟು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿದೆ ಎಂದರು. ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಚತುಷ್ಪಥ ರಸ್ತೆಗಳು, ವರ್ತುಲ ರಸ್ತೆಗಳು, ಸೇತುವೆಗಳು, ಹೊಸ ರೈಲು ಮಾರ್ಗ ಸಂಪರ್ಕಗಳಿಗೆ ಒತ್ತು ನೀಡಲಾಗಿದೆ. ಜಿಲ್ಲೆಯ ಜನತೆಯ ದಶಕಗಳ ಕನಸಾದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ರೂ. 970 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು ಒಟ್ಟಾರೆ ರೂ. 1469 ಕೋಟಿ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಪ್ರಗತಿಯಲ್ಲಿವೆ ಎಂದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಒಟ್ಟು 104 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಒಟ್ಟು ಕೈಗೆತ್ತಿಕೊಳ್ಳಲಾಗಿದೆ. 190 ಕಿ.ಮಿ.ರಸ್ತೆ ನಿರ್ಮಾಣ ಕಾರ್ಯವನ್ನು ನಗರೋತ್ಥಾನ ಯೋಜನೆಯಡಿ ಜಿಲ್ಲೆಯ ನಗರಗಳ ಅಭಿವೃದ್ಧಿಗೆ 148 ಕೋಟಿ ಅನುದಾನ ಒದಗಿಸಲಾಗಿದೆ. ಯೋಜನೆಯಡಿ ಸೊರಬ ಮತ್ತು ಹೊಸನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು 28.1 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸಲು ಜಿಲ್ಲೆಗೆ ಒಟ್ಟು 1031 ಕೋಟಿ ರೂ. ಮಂಜೂರಾಗಿದ್ದು, 2,27,672 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗುತ್ತಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪ್ರಸ್ತುತ ಸಾಲಿನಲ್ಲಿ 133 ಕೋಟಿ ರೂ. ಬಿಡುಗಡೆ ಮಾಡಿದ್ದು, 328 ಕಿ.ಮೀ. ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಪಿಎಂಜಿಎಸ್ವೈ ಯೋಜನೆಯಡಿಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಈ ಸಾಲಿನಲ್ಲಿ 31 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಕಳೆದ 4 ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ 476 ಕೋಟಿ ರೂ. ಗಳನ್ನು ಜಿಲ್ಲೆಯ 1,55,859 ರೈತರ ಖಾತೆಗೆ ಜಮಾ ಮಾಡಲಾಗಿದೆ ಎಂದರು.
ಸಣ್ಣ ನೀರಾವರಿ ಇಲಾಖೆಯಡಿ ರೂ.208 ಕೋಟಿ ಮೊತ್ತದ 308 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರತಿಯೊಬ್ಬರಿಗೂ ಸೂರು ಒದಗಿಸುವುದು ನಮ್ಮ ಸರ್ಕಾರದ ದೃಢ ಸಂಕಲ್ಪವಾಗಿದೆ. ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ಜಿಲ್ಲೆಗೆ ಒಟ್ಟು 7688 ಮನೆಗಳ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ. ಅಮೃತ ಗ್ರಾಮ ಯೋಜನೆಯಡಿ ಒಟ್ಟು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಈ ವರ್ಷ ಇದುವರೆಗೆ 28 ಲಕ್ಷ ಮಾನವ ದಿನ ಕೆಲಸ ನೀಡಲಾಗಿದ್ದು, 134 ಕೋಟಿ ರೂ. ಪಾವತಿ ಮಾಡಲಾಗಿದೆ ಎಂದರು.
ಪ್ರತಿ ಗ್ರಾಮ ಪಂಚಾಯತ್ನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕ್ರೀಡಾ ಅಂಕಣ ನಿರ್ಮಾಣ ಮಾಡಲಾಗುತ್ತಿದೆ. ಅಡಿಕೆ ತೋಟಗಳಲ್ಲಿ ಕಾಣಿಸಿಕೊಂಡ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ 9794 ರೈತರಿಗೆ 1 ಕೋಟಿ ರೂ. ವೆಚ್ಚದಲ್ಲಿ ಉಚಿತವಾಗಿ ಔಷಧಿಯನ್ನು ವಿತರಿಸಲಾಗಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಣಿಸಿಕೊಂಡ ಜಾನುವಾರುಗಳ ಚರ್ಮಗಂಟು ನಿಯಂತ್ರಣಕ್ಕಾಗಿ ಜಿಲ್ಲೆಯ ಶೇಕಡ 93ರಷ್ಟು ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ರೋಗದಿಂದ ಮರಣ ಹೊಂದಿದ 329 ಜಾನುವಾರುಗಳ ಮಾಲಕರಿಗೆ 63.95 ಲಕ್ಷ ರೂ. ಪರಿಹಾರ ಧನ ವಿತಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪೋಲಿಸ್ ಪಡೆ ಹಾಗೂ ವಿವಿಧ ತಂಡಗಳು ಆಕರ್ಷಕ ಪಥಸಂಚಲನ ಪ್ರದರ್ಶಿಸಿದವು. ವಿವಿಧ ಶಾಲಾ ಮಕ್ಕಳು ಅತ್ಯುತ್ತಮವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ಸರ್ಕಾರಿ ಬಾಲಕರ ಬಾಲ ಮಂದಿರದ ವಿದ್ಯಾರ್ಥಿಗಳಯ ಪ್ರಥಮ, ಸಾಂದೀಪಿನಿ ಪ್ರೌಢಶಾಲೆಯ ಬಾಲಕಿಯರು ದ್ವಿತೀಯ ಹಾಗೂ ಬಾಲಕರ ಎನ್ ಸಿಸಿ ತೃತೀಯ ಬಹುಮಾನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಜಿ.ಪಂ. ಸಿಇಒ ಎನ್.ಡಿ.ಪ್ರಕಾಶ್ ಇತರೆ ಅಧಿಕಾರುಗಳಯ ಪಾಲ್ಗೊಂಡಿದ್ದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post