ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ವಿಮಾನ ನಿಲ್ದಾಣ ಕಾರ್ಯಾರಂಭದ ನಂತರ ಶಿವಮೊಗ್ಗ ಪ್ರವಾಸೋದ್ಯಮ, ಆರ್ಥಿಕ, ಕೈಗಾರಿಕೆ ಹಾಗೂ ಔದ್ಯೋಗಿಕವಾಗಿ ವೇಗವಾಗಿ ಬೆಳವಣಿಗೆಯಾಗಲಿದೆ ಎಂದರು.
ರಾಜ್ಯದಲ್ಲಿ ಶಿವಮೊಗ್ಗ ಅತಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದ್ದು, ಟಯರ್ 2 ಸಿಟಿ ಎಂಬ ಖ್ಯಾತಿ ಪಡೆದಿದೆ. ಇಂದು ನಗರದಲ್ಲಿ 18 ತಿಂಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವ ಹಿಂದೆ ಯಡಿಯೂರಪ್ಪ ಅವರ ಶ್ರಮ ದೊಡ್ಡದಿದೆ. ತಮ್ಮ ಹೆಸರಿಡುವುದು ಬೇಡ ಎಂದು ಯಡಿಯೂರಪ್ಪ ಅವರು ಹೇಳಿದ್ದರು. ಆದರೆ, ಜನನಾಯಕರಾದವರು ಜನರ ಪ್ರೀತಿಗೆ ಬೆಲೆ ಕೊಡಬೇಕು. ಹೀಗಾಗಿ ಅವರ ಹೆಸರನ್ನು ಕೇಂದ್ರಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ ಎಂದರು.
Also read: ಸ್ಮಾರ್ಟ್ಸಿಟಿ ಕಾಮಗಾರಿಗಳು ಅವ್ಯವಸ್ಥೆಯ ಆಗರ: ಎಸ್.ಕೆ. ಮರಿಯಪ್ಪ ಆಕ್ರೋಶ
ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರು ಫೆ.27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post