ಕಲ್ಪ ಮೀಡಿಯಾ ಹೌಸ್ | ಸೊರಬ |
ದೆಹಲಿ ಮಾದರಿಯಲ್ಲಿ ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಹಾಗೂ ತಾಲೂಕಿನ ಸುಗಮ ಆಡಳಿತಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ‘ವಿಸ್ತಾರ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಹೇಳಿದರು.
ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ಪುರಸಭೆ ವ್ಯಾಪ್ತಿಯ ಜಂಗಿನಕೊಪ್ಪ ಗ್ರಾಮದ 18-35 ಎಕರೆ ವಿಸ್ತೀರ್ಣದಲ್ಲಿ 49.68 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ಒಂದೇ ಸೂರಿನಡಿ ಆಡಳಿತ ಸೌಧವನ್ನು ನಿರ್ಮಿಸಲಾಗುವುದು. ಯೋಜನೆ ಮಂಜೂರಾತಿಯ ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರಕ್ಕೆ ಅಭಿನಂದಿಸುವುದಾಗಿ ತಿಳಿಸಿದರು.

ಜನಪರ ಯೋಜನೆಗಳು ಸಾಕಾರಗೊಳ್ಳಲು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯವಿದೆ. ಇಂತಹ ಮಹತ್ವಕಾಂಕ್ಷಿ ಯೋಜನೆಯನ್ನು ಬಹಳ ಆಸಕ್ತಿ, ಕಾಳಜಿಯಿಂದ ಕುಮಾರ್ ಬಂಗಾರಪ್ಪನವರು ಈ ಯೋಜನೆ ಜಾರಿಗೊಳಿಸಿದ್ದಾರೆ. ತಾಲೂಕಿಗೆ ವಿಶೇಷ ಯೋಜನೆಗಳನ್ನು ತರುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಹಕಾರಕ್ಕೆ ತಾಲೂಕಿನ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಇದೇ ತಿಂಗಳ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಆಗಮಿಸಿ ವಿಸ್ತಾರ ಯೋಜನೆ ಹಾಗೂ ದಂಡಾವತಿ ಯೋಜನೆಯಡಿಯಲ್ಲಿ 750 ಕೋಟಿ ರೂಪಾಯಿ ವೆಚ್ಚದಲ್ಲಿ 37 ಬ್ಯಾರೇಜ್ಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು, ತಾಲೂಕು ಯುವಾ ಮೋರ್ಚಾ ಅಧ್ಯಕ್ಷ ಅಭಿಷೇಕ ಬೇನ್ನೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಪುರಸಭೆ ಸದಸ್ಯ ಎಂ.ಡಿ. ಉಮೇಶ, ಬಗೆರ್ ಹುಕಂ ಸಮಿತಿ ಸದಸ್ಯ ದೇವೇಂದ್ರಪ್ಪ ಚನ್ನಾಪುರ, ಜಗದೀಶ ಗೆಂಡ್ಲ, ಕನಕದಾಸ ಕಲ್ಲಂಬಿ, ರಮೇಶ ಕೊರಕೋಡು, ಅಭಿಷೇಕ ಪಾಟೀಲ್, ಲಿಂಗರಾಜ, ಜಗದೀಶ ಮತ್ತಿತರರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post