Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಈಶ್ವರವನದಲ್ಲಿ ಫೆ.18ರಂದು ಶಿವರಾತ್ರಿ ವೈಭವವನ್ನು ಆಚರಿಸಲಾಗುವುದು ಎಂದು ಟ್ರಸ್ಟಿನ ಅಧ್ಯಕ್ಷ ನವ್ಯಶ್ರೀ ನಾಗೇಶ್ ಹೇಳಿದರು.
ಅವರು ಇಂದು ನವ್ಯಶ್ರೀ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮತನಾಡಿ, ಈಶ್ವರವನದಿ ಪ್ರತಿ ವರ್ಷವೂ ಶಿವರಾತ್ರಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಇದು ಪ್ರಕೃತಿಯೊಂದಿಗಿನ ಶಿವರಾತ್ರಿಯಾಗಿದೆ. ಶಿವರಾತ್ರಿಯ ಪ್ರಯುಕ್ತ ಇಡೀ ದಿನ ರಕ್ತದಾನ ಶಿಬಿರ, ಭಜನಾ ಕಾರ್ಯಕ್ರಮ, ಶಿವದರ್ಶನ ಗಾಯನ, ರಾಗಿಗುಡ್ಡ ಉಳಿಸಿ ವಿಶೇಷ ಜನಜಾಗೃತಿ ಮುಂತಾದ ಪರೋಪಕಾರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಅಂದು ಬೆಳಿಗ್ಗೆ 8 ಗಂಟೆಗೆ ರುದ್ರಾಭಿಷೇಕ ನಡೆಯಲಿದೆ. ನಂತರ 10 ಗಂಟೆಗೆ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಇದಕ್ಕೆ ಚಾಲನೆ ನೀಡುವರು. 11 ಗಂಟೆಗೆ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಸಮೃದ್ಧಿ ಕಲಾವಿದರಿಂದ ಕನ್ನಡ ಚಿತ್ರಗೀತೆಗಳಲ್ಲಿ ಶಿವದರ್ಶನ ಕುರಿತ ಗಾಯನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
Also read: ರಾಜಕೀಯ ಪ್ರಾತಿನಿಧ್ಯ ಹಾಗೂ ನೇಕಾರರ ಸಮುದಾಯಗಳ ಅಭಿವೃದ್ದಿ ನಿಗಮಕ್ಕೆ ನೇಕಾರ ಸಮುದಾಯದ ಸ್ವಾಮೀಜಿಗಳ ಒತ್ತಾಯ
ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮವಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ನಿರೂಪಕ ಹಾಗೂ ನಟ ಮಾ. ಆನಂದ್ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಮಾಧವನೆಲೆಗೆ ಈಶ್ವರವನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಾಗೂ 50 ವಿಶೇಷ ಚೇತನ ವ್ಯಕ್ತಿಗಳಿಗೆ ಆಹಾರ ಧಾನ್ಯ ಕಿಟ್ ವಿತರಿಸಲಾಗುವುದು. 9 ಗಂಟೆಗೆ ಶಾರದಾ ದೇವಿ ಅಂಧರ ಶಾಲೆಯ ಮಕ್ಕಳಿಂದ ಭಜನೆ ಕಾರ್ಯಕ್ರಮ, ನಂತರ ಶಬರಿ ಕಣ್ಣನ್ ತಂಡದವರಿಂದ ಶಿವಸ್ತುತಿ ಕಾರ್ಯಕ್ರಮ ಹಾಗೂ ಪ್ರಕೃತಿರೂಪಿ ಶಿವನಿಗೆ ಜಲಾಭಿಷೇಕ ಹಮ್ಮಿಕೊಳ್ಳಲಾಗಿದೆ ಎಂದರು.

ಅಂದು ನಗರದ ಏಕೈಕ ಜೀವವೈವಿಧ್ಯತೆಯ ತಾಣವಾಗಿರುವ ರಾಗಿಗುಡ್ಡದ ಬಗ್ಗೆ ವಿಶೇಷ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಗಿಗುಡ್ಡವನ್ನು ಅಭಿವೃದ್ಧಿಯ ಹೆಸರಲ್ಲಿ ನಾಶ ಮಾಡಲಾಗುತ್ತಿದೆ. ಅದು 102 ಎಕರೆ ಜಾಗ. ಈಗಾಗಲೇ 78 ಎಕರೆ ಜಾಗವನ್ನು ವಿವಿಧ ಉದ್ದೇಶಗಳಿಗೆ ನೀಡಲಾಗಿದೆ. ಅದೆಲ್ಲವನ್ನು ವಾಪಾಸು ಪಡೆದು ಅಲ್ಲಿ ದಟ್ಟವಾದ ಕಾಡನ್ನು ಬೆಳೆಸುವಂತೆ ಜಿಲ್ಲಾಧಿಕಾರಿಗಳಿವ ಮನವಿ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಾಂತೇಶ್ ಕದರಮಂಡಲಗಿ, ಶ್ರೀಪತಿ, ಬಾಲಕೃಷ್ಣ ನಾಯ್ಡು, ಗೀತಾ ಪಾಟೀಲ್. ವಿನಯ್, ಶ್ರೀಧರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Discussion about this post