ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೋಟೆ ರಸ್ತೆಯಲ್ಲಿರುವ ವಾಸವಿ ಶಾಲೆಯು ಆರ್ಥಿಕವಾಗಿ ಹಿಂದುಳಿದವರ ನೆರವಿಗಾಗಿ ವಾಸವಿ ಚಾರಿಟಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಸ್.ಕೆ. ಶೇಷಾಚಲ ಹೇಳಿದರು.
ಅವರು ಇಂದು ವಾಸವಿ ಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗಾಗಿ ನಮ್ಮ ಸಂಸ್ಥೆಯು ವಾಸವಿ ಚಾರಿಟಿ ಯೀಜನೆಯನ್ನು ಜಾರಿಗೆ ತಂದಿದ್ದು, ಎಲ್ಕೆಜಿಯಿಂದ ನಾಲ್ಕನೇ ತರಗತಿಗೆ ನೇರವಾಗಿ ದಾಖಲಾಗುವ ಮಕ್ಕಳಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರು ಈ ಸೌಲಭ್ಯ ಪಡೆಯಬಹುದು. ಅರ್ಜಿಯನ್ನು ಮಾರ್ಚ್ 1 ರಿಂದ ವಿತರಿಸಲಾಗುವುದು. ಮಾ.18 ಕೊನೆಯ ದಿನಾಂಕವಾಗಿದೆ. ಈ ಬಾರಿ 20 ಮಕ್ಕಳಿಗೆ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿಗೆ ಜನರು ಅರ್ಜಿ ಹಾಕಿದ್ದರೆ ಮಾ. 20ರಂದು ಬೆಳಿಗ್ಗೆ 11 ಗಂಟೆಗ ಪೋಷಕರ ಸಮ್ಮುಖದಲ್ಲಿ ಲಾಟರಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದರು.
ಆಯ್ಕೆಯಾದ ವಿದ್ಯಾರ್ಥಿಗಳು ಏಕಗಂಟಿನಲ್ಲಿ ವಾರ್ಷಿಕ ಶುಲ್ಕ ರೂ. 15ಸಾವಿರ ಕಟ್ಟಬೇಕಾಗುತ್ತದೆ. ಅಂದೇ ಸಂಜೆ 4ಗಂಟೆಯೊಳಗೆ ಶುಲ್ಕ ಪಾವತಿಸಿ ದಾಖಲಾತಿ ಹೊಂದಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಶ್ಯಾಮ್ ಸುಂದರ್, ಮಂಜುನಾಥ ಶೆಟ್ಟಿ, ಮನುಜಿಸೆ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post