Thursday, September 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಇಂದಿನ ಸುದ್ಧಿಗಳು |

ಹಕ್ಕುಪತ್ರ ವಿತರಿಸುವಂತೆ ಆಶ್ರಯ ಬಡಾವಣೆ ನಿವಾಸಿಗಳ ಆಗ್ರಹ | ಮುನ್ಸೂಚನೆ ಮನೆ ಧ್ವಂಸ ಹಿನ್ನೆಲೆ ಮಾನವ ಹಕ್ಕು ಹೋರಾಟ ಸಮಿತಿ ಪ್ರತಿಭಟನೆ | ಕಾಸಿನ ಸರ ನೋಡಲೇ ಬೇಕಾದ ಸಿನಿಮಾ: ಹೆಚ್.ಆರ್. ಬಸವರಾಜಪ್ಪ 

March 14, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆಶ್ರಯ ಬಡಾವಣೆಯ `ಎ’ ಮತ್ತು `ಬಿ’ ಬ್ಲಾಕ್‌ಗಳಲ್ಲಿ ಅನಧಿಕೃತವಾಗಿ ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿರುವ ನಮಗೆ ಸರ್ಕಾರದ ನಿಯಮಾನುಸಾರ ಸರ್ವೆ ಕಾರ್ಯ ಪ್ರಾರಂಭಿಸಿ ಕೂಡಲೇ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಬೊಮ್ಮನಕಟ್ಟೆಯ ಸರ್.ಎಂ. ವಿಶ್ವೇಶ್ವರಯ್ಯ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಹಿತರಕ್ಷಣಾ ಸಮಿತಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.

ಕಳೆದ 25 ವರ್ಷಗಳಿಂದ ಸೂರಿಲ್ಲದ ನಾವು ಸರ್ಕಾರದಿಂದ ಮಂಜೂರಾಗಿ ನಿಯಮಾವಳಿಗಳ ಪ್ರಕಾರ ನಿಗದಿತ ಸಮಯದಲ್ಲಿ ಮನೆ ಕಟ್ಟದೆ ಖಾಲಿ ಬಿಟ್ಟ ಜಾಗಗಳಲ್ಲಿ ಗುಡಿಸಲು ಕಟ್ಟಿಕೊಂಡು ವಾಸಿಸುತ್ತಾ ಬಂದಿದ್ದೇವೆ. ನಾವು ಬಡ ಕೂಲಿ ಕಾರ್ಮಿಕರಾಗಿದ್ದು ಈಗ ಕಟ್ಟಿಕೊಂಡಿರುವ ಮನೆ ಬಿಟ್ಟರೆ ಬೇರೆಲ್ಲೂ ಕೂಡ ವಸತಿ ಸೌಲಭ್ಯ ಹೊಂದಿಲ್ಲ. ಈ ಬಗ್ಗೆ ಹಲವಾರು ಬಾರಿ ನಾವಿದ್ದ ಜಾಗಕ್ಕೆ ಹಕ್ಕುಪತ್ರ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ದಿನಾಂಕ 13-10-2022ರ ಆಶ್ರಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಸರ್ವೆ ಕಾರ್ಯ ಪ್ರಾರಂಭಿಸಲು ಮಹಾನಗರ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ. ಆದರೂ ಕೂಡ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿದ್ದು, ಕೂಡಲೇ ನಾವು ವಾಸಿಸುತ್ತಿರುವ ಮನೆಗಳ ಸರ್ವೆ ಕಾರ್ಯ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಇಲ್ಲಿ ವಾಸಿಸುತ್ತಿರುವ ಎಲ್ಲಾ ಬಡ ಕುಟುಂಬಗಳಿಗೂ ಹಕ್ಕು ಪತ್ರ ವಿತರಿಸಬೇಕೆಂದು ಸಮಿತಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಸುರೇಶ್, ವರಲಕ್ಷ್ಮಿ, ರಾಜಮ್ಮ, ಬಾಬು, ರಾಜ್‌ಕುಮಾರ್, ಸಂತೋಷ್ ನಾಯ್ಕ, ಲಕ್ಷ್ಮಣ್ ನಾಯ್ಕ, ರಾಜಾ ನಾಯ್ಕ, ತಿಪ್ಪೇಶ್ ನಾಯ್ಕ, ಮಂಜಮ್ಮ, ನೂರ್‌ಜಾನ್ ಮೊದಲಾದವರಿದ್ದರು.

ಮುನ್ಸೂಚನೆ ಮನೆ ಧ್ವಂಸ ಹಿನ್ನೆಲೆ ಮಾನವ ಹಕ್ಕು ಹೋರಾಟ ಸಮಿತಿ ಪ್ರತಿಭಟನೆ
ಆನವಟ್ಟಿ-ಹಾನಗಲ್-ಶಿರಾಳಕೊಪ್ಪ ಮುಖ್ಯರಸ್ತೆ ಸರ್ವೆ ನಂ.60ರಲ್ಲಿ ವಾಸವಾಗಿರುವ ನಿರಾಶ್ರಿತರಿಗೆ ಯಾವುದೇ ನೋಟೀಸ್ ಮುನ್ಸೂಚನೆ ನೀಡದೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಏಕಾಏಕಿ ಬಂದು ಮನೆಗಳನ್ನು ಧ್ವಂಸಗೊಳಿಸಿದ್ದು, ಮನೆಯಲ್ಲಿ ವಾಸವಾಗಿದ್ದ ಹೆಣ್ಣುಮಕ್ಕಳು, ವೃದ್ಧರು, ಮಕ್ಕಳು ಸೇರಿದಂತೆ ಎಲ್ಲರನ್ನೂ ಪೊಲೀಸರು ಹೊರಗೆ ಹಾಕಿರುತ್ತಾರೆ. ಆದ್ದರಿಂದ ಬಡವರು ಬೀದಿಪಾಲಾಗಿದ್ದು ಕೂಡಲೇ ಸೂಕ್ತ ಪರಿಹಾರ ಮಾರ್ಗ ತೋರಿಸಬೇಕೆಂದು ಆನವಟ್ಟಿ ನಿರಾಶ್ರಿತರು ಮಾನವ ಹಕ್ಕು ಹೋರಾಟ ಸಮಿತಿಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
1995ನೇ ಸಾಲಿನವರೆಗೆ ಸ್ಥಳೀಯ ನಿವಾಸಿಗಳು ಕಂದಾಯ ಸಲ್ಲಿಸುತ್ತಾ ಬಂದಿದ್ದು, ಡಿಮ್ಯಾಂಡ್ ರಿಜಿಸ್ಟರ್‌ನಲ್ಲಿ ಹೆಸರು ನಮೂದಾಗಿರುತ್ತದೆ. ಮತ್ತು ಇಲ್ಲಿನ ನಿವಾಸಿಗಳಿಗೆ ಚುನಾವಣಾ ಗುರುತಿನ ಚೀಟಿ ಇದ್ದು, ವಿದ್ಯುತ್ ಸಂಪರ್ಕ ನೀಡಲಾಗಿದೆ. ಆದ್ದರಿಂದ ಮಾನಸಿಕವಾಗಿ ನೊಂದಿರುವ ಬಡ ಕುಟುಂಬಗಳು ದಾರಿ ಕಾಣದೆ ಬೀದಿ ಬದಿಯ ಮರದ ಕೆಳಗೆ ಜೀವನ ಸಾಗಿಸುತ್ತಿದ್ದು, ಅಮಾಯಕರಾದ ನಮಗೆ ಸೂರು ಕಲ್ಪಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ವಿನಂತಿಸಿದ್ದಾರೆ.

Also read: ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಜಗ್ಗೇಶ್: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಇದೇ ಸಂದರ್ಭದಲ್ಲಿ ಮಾನವ ಹಕ್ಕು ಹೋರಾಟ ಸಮಿತಿಯ ಉಪವಾಸ ಸತ್ಯಾಗ್ರಹ 2ನೇ ದಿನಕ್ಕೆ ಕಾಲಿಟ್ಟಿದ್ದು, ಈ ಹೋರಾಟಕ್ಕೂ ಸಮಿತಿ ಅಧ್ಯಕ್ಷ ಬಿ.ಎನ್. ರಾಜು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಾಸಿನ ಸರ ನೋಡಲೇ ಬೇಕಾದ ಸಿನಿಮಾ: ಹೆಚ್.ಆರ್. ಬಸವರಾಜಪ್ಪ 
ಕಾಸಿನ ಸರ ಚಲನಚಿತ್ರವು ರೈತರ ಸಮಸ್ಯೆಗಳನ್ನು ಎಳೆಎಲೆಯಾಗಿ ಬಿಚ್ಚಿಡುತ್ತದೆ. ರೈತಹೋರಾಟಗಾರರು ಮತ್ತು ರೈತರು ನೋಡಲೇಬೇಕಾದ ಸಿನಿಮಾ ಇದು ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಅಭಿಪ್ರಾಯ ಪಟ್ಟಿದ್ದಾರೆ.
ಅವರು ಕಾಸಿನ ಸರ ಸಿನಿಮಾವನ್ನು ತಮ್ಮ ಕುಟುಂಬ ಹಾಗೂ ರೈತಸಂಘದ ಪದಾಧಿಕಾರಿಗಳೊಂದಿಗೆ ವೀಕ್ಷಿಸಿ ನಂತರ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕಾಸಿನ ಸರ ಸಿನಿಮಾ ವಿಶೇಷವಾಗಿ ರೈತರ ಇಂದಿನ ಪರಿಸ್ಥಿತಿಯನ್ನು ತಿಳಿಸುತ್ತದೆ. ವಿದೇಶಿ ಕಂಪನಿಗಳು ರಾಜಕಾರಣಿಗಳ ಮೂಲಕ ಭೂಮಿಯನ್ನು ಹೇಗೆ ಕಬಳಿಸುತ್ತಾರೆ ಮತ್ತು ರೈತರು ಚಳುವಳಿಯ ಮೂಲಕ ಅದನ್ನು ಹೇಗೆ ವಾಪಾಸು ಪಡೆಯಬಹುದು ಎಂದು ಈ ಸಿನಿಮಾದಲ್ಲಿ ತೋರಿಸಲಾಗಿದೆ.

ರೈತ ಚಳುವಳಿಯು ಬಹದೊಡ್ಡ ಶಕ್ತಿಯಾಗಿದೆ. ಈ ಶಕ್ತಿಯ ಜೊತೆಗೆ ಸಾವಯವ ಕೃಷಿಯ ಮಹತ್ವ, ಕೌಟುಂಬಿಕ ಸಮಸ್ಯೆಗಳಿಂದ ಛಿದ್ರವಾದ ಕುಟುಂಬ ಮತ್ತೆ ಒಂದುಗೂಡುವುದು, ರೈತಮುಖಂಡರ ಕಷ್ಟ ಕಾರ್ಪಣ್ಯಗಳನ್ನು ಸೂಕ್ಷ್ಮವಾಗಿ ಇದರಲ್ಲಿ ಚಿತ್ರಿಸಲಾಗಿದೆ. ಜೊತೆಗೆ ಹಳ್ಳಿಯ ಬದುಕು ಅಲ್ಲಿನ ಸಂಸ್ಕೃತಿ, ರೈತರು ಬದುಕುತ್ತಿರುವ ರೀತಿಗಳ ಬಗ್ಗೆ ಇದು ಬೆಳಕು ಚೆಲ್ಲುತ್ತದೆ ಎನ್ನುತ್ತಾರೆ.

ಚಿತ್ರದ ನಿರ್ದೇಶಕ ನಂಜುಂಡೇಗೌಡರು ಕೂಡ ರೈತ ಹೋರಾಟದಿಂದಲೇ ಬಂದವರಾಗಿದ್ದಾರೆ ಈಹಿಂದೆಯೂ ಕೂಡ ರೈತರ ಬದುಕು ಹೋರಾಟಕ್ಕೆ ಸಂಬಂಧಿಸಿದಂತೆ ಹಲವು ಕಿರುಚಿತ್ರಗಳನ್ನು ತೆಗೆದುಕೊಂಡಿದ್ದಾರೆ. ಹೆಬ್ಬೆಟ್ಟು ರಾಮಕ್ಕ, ನೋಡು ಬಾ ನಮ್ಮೂರ ಸಿನಿಮಾಕ್ಕೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ದೊರಕಿದೆ. ರೈತರು, ರೈತಹೋರಾಟಗಾರರು ಈ ಸಿನಿಮಾ ವೀಕ್ಷಿಸುವುದರ ಮೂಲಕ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸಬಹುದಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಜಗ್ಗೇಶ್: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

Next Post

ಅಲಹಾಬಾದ್ ಹೈಕೋರ್ಟ್‌ ಆವರಣದ ಮಸೀದಿ ತೆರವಿಗೆ ಮೂರು ತಿಂಗಳ ಗಡುವು: ಸುಪ್ರೀಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಲಹಾಬಾದ್ ಹೈಕೋರ್ಟ್‌ ಆವರಣದ ಮಸೀದಿ ತೆರವಿಗೆ ಮೂರು ತಿಂಗಳ ಗಡುವು: ಸುಪ್ರೀಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು | ನಂಜನಗೂಡಿನ ಪ್ರಸ್ತಾವಿತ ಮೇಲ್ಸೇತುವೆ ಸ್ಥಳ ಪರಿಶೀಲನೆ

September 4, 2025

ರಿಪ್ಪನ್‌ಪೇಟೆ | ಕಾರಿನ ಮೇಲೆ ಉರುಳಿ ಬಿದ್ದ ಮರ | ನಾಲ್ವರಿಗೆ ಗಾಯ

September 4, 2025

Railway Employees Maintaining Salary Accounts with SBI to Get Enhanced Insurance Coverage of ₹1 Crore for Accidental Death

September 4, 2025

ನೈರುತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

September 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು | ನಂಜನಗೂಡಿನ ಪ್ರಸ್ತಾವಿತ ಮೇಲ್ಸೇತುವೆ ಸ್ಥಳ ಪರಿಶೀಲನೆ

September 4, 2025

ರಿಪ್ಪನ್‌ಪೇಟೆ | ಕಾರಿನ ಮೇಲೆ ಉರುಳಿ ಬಿದ್ದ ಮರ | ನಾಲ್ವರಿಗೆ ಗಾಯ

September 4, 2025

Railway Employees Maintaining Salary Accounts with SBI to Get Enhanced Insurance Coverage of ₹1 Crore for Accidental Death

September 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!