No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕರ್ತವ್ಯ ಲೋಪ ಕಂಡುಬಂದಲ್ಲಿ ಮುಲಾಜಿಲ್ಲದೆ ಕ್ರಮ: ಲೋಕಾಯುಕ್ತ ಎಸ್‌ಪಿ ಖಡಕ್ ಎಚ್ಚರಿಕೆ

ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಶಿವಮೊಗ್ಗ ಪಾಲಿಕೆ ಸಿಬ್ಬಂದಿಗಳಿಗೆ ಫುಲ್ ಕ್ಲಾಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2023
in ಶಿವಮೊಗ್ಗ
0
ಕರ್ತವ್ಯ ಲೋಪ ಕಂಡುಬಂದಲ್ಲಿ ಮುಲಾಜಿಲ್ಲದೆ ಕ್ರಮ: ಲೋಕಾಯುಕ್ತ ಎಸ್‌ಪಿ ಖಡಕ್ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಾರ್ವಜನಿಕರ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡದಿದ್ದರೆ ನಾವು ದಿಢೀರ್ ಭೇಟಿ ನೀಡಿದಾಗ ಅನವಶ್ಯಕ ವಿಳಂಬ ಮತ್ತು ಲೋಪಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಕೇಸ್ ದಾಖಲಿಸಿ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಚಿತ್ರದುರ್ಗ, ಶಿವಮೊಗ್ಗ ಲೋಕಾಯುಕ್ತ ಎಸ್‌ಪಿ ವಾಸುದೇವ್ ಮಹಾನಗರ ಪಾಲಿಕೆ ಸಿಬ್ಬಂದಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ ಪಾಲಿಕೆಯ ಎಲ್ಲಾ ವಿಭಾಗದ ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದರು.
ಪ್ರತಿನಿತ್ಯ ಸಿಬ್ಬಂದಿಗಳು ಸೋಮಾರಿತನ ಬಿಟ್ಟು ಅಪ್‌ಡೇಟ್ ಆಗಬೇಕು. ಹೈಕೋರ್ಟ್ ನಮಗೆ ಪೂರ್ಣ ಅಧಿಕಾರ ನೀಡಿದೆ. ಕರ್ತವ್ಯ ಲೋಪ ಕಂಡುಬಂದಲ್ಲಿ ಲೋಕಾಯುಕ್ತ ಕೈಗೆ ಸಿಕ್ಕಿದಾಗ ಯಾವುದೇ ಮೂಲಾಜಿಲ್ಲದೆ ಕ್ರಮತೆಗೆದುಕೊಳ್ಳುತ್ತೇವೆ. ನೀವು ಮತ್ತು ನಾವು ಇಬ್ಬರು ಸರ್ಕಾರಿ ನೌಕರರೇ. ಆದರೆ ಮೊದಲೇ ಎಚ್ಚರಿಕೆ ನೀಡುತ್ತಿರುವ ಉದ್ದೇಶ ತಪ್ಪನ್ನು ತಿದ್ದುಕೊಳ್ಳಿ. ಅಮೇಲೆ ಪಶ್ಚಾತಾಪ ಪಟ್ಟರೆ ಆಗುವುದಿಲ್ಲ. ಕೆಲವೊಂದು ರಾಜಕೀಯ ಒತ್ತಡ ಮತ್ತೆ ಕೆಲವರು ಇದೇ ಊರಿನಲ್ಲಿ ಇರಬೇಕು ಎಂಬ ಆಸೆ, ವರ್ಗಾವಣೆಯ ಭಯ ಅನೇಕ ರೀತಿಯ ಒತ್ತಡಗಳಿರುತ್ತವೆ. ಆದರೆ ಕೆಲಸ ಮಾಡಲೇಬೇಕು ಮತ್ತು ಇದೊಂದು ದೇವರು ಕೊಟ್ಟ ಸುದವಕಾಶ ಎಂದು ಭಾವಿಸಿ ಯಾವುದೇ ಫೈಲ್‌ಗಳನ್ನು ಪೆಂಡಿಂಗ್ ಇಡದೆ ಕೆಲಸಮಾಡಿ ಕೊಡಿ ಎಂದರು.

ಕೆಲವು ತಿಂಗಳ ಹಿಂದೆ ಲೋಕಾಯುಕ್ತರು ಭೇಟಿ ನೀಡಿದಾಗ ಬೆಳಿಗ್ಗೆ ನಗರ ಸಂಚಾರ ಮಾಡಿ ಲೋಪದೋಷಗಳ ಪಟ್ಟಿಮಾಡಿ ಕೂಡಲೇ ಸರಿಪಡಿಸುವಂತೆ ಸಲಹೆ ನೀಡಿದ್ದರು. ಅದರ ಬಗ್ಗೆ ಕೂಡ ಪರಿಶೀಲನೆ ನಡೆಸಿದ್ದೇನೆ. ತಾಂತ್ರಿಕ ತೊಂದರೆಯಿದ್ದರೆ ಗಮನಕ್ಕೆ ತನ್ನಿ ಎಂದರು.

ಈ ಸಂದರ್ಭದಲ್ಲಿ ಕಂದಾಯ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಕೊರತೆ ಬಗ್ಗೆ ಗಮನಕ್ಕೆ ತಂದರು ಮತ್ತು ಒತ್ತಡದ ಬಗ್ಗೆಯೂ ಮಾಹಿತಿ ನೀಡಿದರು. ಆಯುಕ್ತರು ಕೂಡ ಕಂದಾಯ ವಿಭಾಗದಲ್ಲಿ 180 ಜನ ಸಿಬ್ಬಂದಿ ಇರುವ ಕಡೆ ಕೇವಲ 35 ಜನರಿದ್ದಾರೆ. ಆದರೂ ಕೂಡ ನಾವು ಸಾಧ್ಯವಾದಷ್ಟು ತುರ್ತಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದನ್ನು ಗಮನಕ್ಕೆ ತಂದರು.
ಲೋಕಾಯುಕ್ತ ಎಸ್‌ಪಿ ಮಾತನಾಡಿ, ಇಂದು ಸುಮಾರು 15 ದೂರುಗಳು ಸಾರ್ವಜನಿಕರಿಂದ ಬಂದಿದೆ. ಗೋಪಾಳದಲ್ಲಿ ಚರಂಡಿ ಮಾಡದೆ ರಸ್ತೆ ಕಾಮಗಾರಿ ಮಾಡಲಾಗಿದೆ. ಸಂಬಂಧಪಟ್ಟ ಅಭಿಯಂತರರು ಕೂಡಲೆ ಸರಿಪಡಿಸಿಕೊಳ್ಳಿ ಇಲ್ಲವಾದರೆ ನಿಮಗೆ ಸಮಸ್ಯೆಯಾಗುತ್ತದೆ. ಕ್ರಿಮಿನಲ್ ಕೇಸ್ ಅಲ್ಲದೆ ನಿಮ್ಮ ಇಡೀ ಸೇವಾ ಅವಧಿಯಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಎಸಿಬಿಯಿಂದ ಲೋಕಾಯುಕ್ತಕ್ಕೆ ಸಾವಿರಾರು ಕೇಸ್‌ಗಳು ವರ್ಗಾವಣೆಯಾದ್ದರಿಂದ ಪರಿಶೀಲನೆಗೆ ಸಮಯ ಆಗುತ್ತಿದೆ. ಆದರೂ ಕೂಡ ನಾವು ದಿಢೀರ್ ಭೇಟಿ ನೀಡುತ್ತೇವೆ. ಬಡವರ ಕೆಲಸವನ್ನು ಕೂಡಲೆ ಮಾಡಿಕೊಡಿ ಒತ್ತುವರಿ,ಆಶ್ರಯ ಮನೆ ವಿತರಣೆ ವಿಚಾರದಲ್ಲಿ ಅನೇಕ ದೂರುಗಳು ಬರುತ್ತಿದೆ. ಈ ಬಗ್ಗೆ ತಕ್ಷಣ ಗಮನಹರಿಸಿ ಇನ್ನೊಂದು ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದಾಗ ಎಲ್ಲಾ ಅರ್ಜಿಗಳ ಇಥ್ಯರ್ತಆಗಬೇಕು ಎಂದು ತಾಕೀತು ಮಾಡಿದರು. ನಿರ್ವಾಹಕ ಅಭಿಯಂತರರು ಕೆಲವೊಂದು ತಾಂತ್ರಿಕ ದೋಷದ ಬಗ್ಗೆ ಗಮನ ಸೆಳೆದರು.

ಈ ಸಂದರ್ಭದಲ್ಲಿ ನಾಗರೀಕ ಹಿತರಕ್ಷಣಾ ಸಮಿತಿಯ ವಸಂತ್‌ಕುಮಾರ್ ಅವರು ಕನ್ಸರ್‌ವೆನ್ಸಿಯಲ್ಲಿ ನಿರ್ಮಾಣಗೊಂಡು 30ಕ್ಕೂ ಹೆಚ್ಚು ಶೌಚಾಲಯಗಳು ಸಾರ್ವಜನಿಕ ಉಪಯೋಗಕ್ಕೆಬಾರದೆ ವ್ಯರ್ಥವಾಗಿರುವ ಬಗ್ಗೆ ಲೋಕಾಯುಕ್ತರ ಗಮನಕ್ಕೆ ತಂದರು. ಅಲ್ಲದೆ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಪಾಲಿಕೆ ಮುಂಭಾಗದಲ್ಲಿ ಕಲ್ಲುಗಳನ್ನು ಅಳವಡಿಸಿದ್ದು, ಈ ಕಲ್ಲುಹಾಸಿನಿಂದ ಸಾರ್ವಜನಿಕರಿಗೆ ಅನಾನುಕೂಲವೆ ಜಾಸ್ತಿಯಾಗಿದೆ ಮತ್ತು ಕಾಮಗಾರಿ ಸಂದರ್ಭದಲ್ಲಿಯೇ ನಾಗರೀಕ ವೇದಿಕೆ ಎಲ್ಲಾ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಲೋಕಾಯುಕ್ತ ಎಸ್‌ಪಿ ಅವರಿಗೆ ಲಿಖಿತ ದೂರು ನೀಡಿದರು.
ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವುದಾಗಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳು ಮತ್ತು ಸ್ಮಾರ್ಟ್‌ಸಿಟಿಗೆ ಸಂಬಂಧಿಸಿದ ಕೆಲವು ದೂರುಗಳ ಬಗ್ಗೆ ಕೂಡ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರು ಕೂಡ ಅನೇಕ ಸಮಸ್ಯೆಗಳ ಬಗ್ಗೆ ದೂರು ನೀಡಿದರು. ಆಯುಕ್ತರಾದ ಮಾಯಣ್ಣಗೌಡ, ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್ ಈಶ್ವರ್‌ನಾಯ್ಕ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share214Tweet123Send
Previous Post

ಮಾ.17-20ರವರೆಗೆ ಕೃಷಿ ಮತ್ತು ತೋಟಗಾರಿಕಾ ಮೇಳ: ಸಿಎಂ ಬೊಮ್ಮಾಯಿ ಚಾಲನೆ

Next Post

ಹಂದಿ ಅಣ್ಣಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ದಾಳಿ: ಓರ್ವ ಸಾವು, ಮತ್ತೊಬ್ಬ ಗಂಭೀರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಹಂದಿ ಅಣ್ಣಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ದಾಳಿ: ಓರ್ವ ಸಾವು, ಮತ್ತೊಬ್ಬ ಗಂಭೀರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

April 3, 2026
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

April 3, 2026
SWR Mysuru Division Excels with Record Passenger Revenue and Strong Commercial Growth

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

April 3, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಲಂಚದ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ: ಕೋರ್ಟ್ ಆದೇಶ

April 3, 2026
SWR to run special trains for Good Friday, Easter rush

Extension of Partial Cancellation of Trains between Chitradurg-Chikjajur

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL