No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಇಂದಿನ ಸುದ್ಧಿಗಳು| ಶನೇಶ್ವರ ಸ್ಬಾಮಿ ದೇಗುಲದ ಸಮುದಾಯ ಭವನಕ್ಕೆ ಶಾಸಕ ಅಶೋಕ ನಾಯ್ಕ ಭೂಮಿ ಪೂಜೆ

ಜಲ ಜೀವನ್ ಮಿಷನ್ ಪ್ರಚಾರ ಅಭಿಯಾನಕ್ಕೆ ಜಗದೀಶ್ ಚಾಲನೆ | ಶಾಸಕ ಈಶ್ವರಪ್ಪ ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ | ಮಾ. 17ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ | ಕಾಂಗ್ರೆಸ್ ನ ಮಹತ್ವಾಕಾಂಕ್ಷಿ ಪ್ರಣಾಳಿಕೆಯಾದ ಗ್ಯಾರಂಟಿ ಕಾರ್ಡ್ ವಿತರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2023
in ಶಿವಮೊಗ್ಗ
0
ಶಿವಮೊಗ್ಗದ ಇಂದಿನ ಸುದ್ಧಿಗಳು| ಶನೇಶ್ವರ ಸ್ಬಾಮಿ ದೇಗುಲದ ಸಮುದಾಯ ಭವನಕ್ಕೆ ಶಾಸಕ ಅಶೋಕ ನಾಯ್ಕ ಭೂಮಿ ಪೂಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಇಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಕುಂಸಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ತುಪ್ಪೂರು ಗ್ರಾಮ ಪಂಚಾಯತಿಯ ಸನ್ನಿವಾಸ ಗ್ರಾಮದಲ್ಲಿ 20 ಲಕ್ಷ ರೂಗಳಲ್ಲಿ ನಿರ್ಮಿಸಲಾಗುತ್ತಿರುವ. ಶ್ರೀ ಶನೇಶ್ವರ ಸ್ಬಾಮಿ ದೇವಸ್ಥಾನದ ಸಮುದಾಯ ಭವನದ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಭಾಗದ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ತಮ್ಮ ಅವಧಿಯಲ್ಲಿ ಆದಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸೂಡೂರು ಸುಧಾಕರ್, ಉಮೇಶ್, ಅರುಣ್, ಅಣ್ಣಪ್ಪ, ಗ್ರಾಮ ಪಂಚಾಯತಿ ಪ್ರತಿನಿಧಿಗಳು. ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಜಲ ಜೀವನ್ ಮಿಷನ್ ಪ್ರಚಾರ ಅಭಿಯಾನಕ್ಕೆ ಜಗದೀಶ್ ಚಾಲನೆ
ಮಾ.14ರಂದು ಜಿಲ್ಲಾ ಪಂಚಾಯಿತಿ ಶಿವಮೊಗ್ಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಶಿವಮೊಗ್ಗ ಮತ್ತು ಚೈತನ್ಯ ರೂರಲ್ ಡೆವೆಲಪ್ ಮೆಂಟ್ ಸೊಸೈಟಿ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಅನುಷ್ಟಾನಗೊಳ್ಳುತ್ತಿರುವ ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರನ್ನು ಒದಗಿಸುವ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಇಂದು ಯೋಜನೆಯ ಬಗ್ಗೆ ಮಾಹಿತಿ ನೀಡಲು ಅಟೋ ಪ್ರಚಾರವನ್ನು ಕೈಗೊಳ್ಳಲಾಗಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಶಿವಮೊಗ್ಗದ ಕಾರ್ಯಪಾಲಕ ಅಭಿಯಂತರಾದ ಜಗದೀಶ್ ಬಿ.ಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ISRA ತಂಡದ ನಾಯಕರಾದ ದಿನಕರ ಜಾಧವ್, ಸಹಾಯಕ ಇಂಜಿನಿಯರ್ ಆದ ಶ್ಯಾಮ್ ತಾಂಬ್ಲೆ, ಜಿಲ್ಲಾ IMS ಸಂಯೋಜಕರಾದ ಗಿರೀಶ್ ಪಾಟೀಲ್ ಮತ್ತು ಮಹೇಶ್ವರಪ್ಪ ಇಲಾಖೆಯ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಶಾಸಕ ಈಶ್ವರಪ್ಪ ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ
ಅಲ್ಲಾಹು ಬಗ್ಗೆ ಹಾಗೂ ಆಜಾನ್ ವಿರುದ್ಧ ಅವಹೇಳನ ಮಾತುಗಳನ್ನು ಆಡಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಿವಮೊಗ್ಗ ನಗರ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್‌ಡಿಪಿಐ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮುಸ್ಲಿಂ ಸಮುದಾಯದ ಬಗ್ಗೆ ಧಾರ್ಮಿಕ ನಿಂದನೆ ಮಾಡಿ ಶಾಸಕ ಕೆ.ಎಸ್.ಈಶ್ವರಪ್ಪನವರು ಮಂಗಳೂರಿನ ಕಾವೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಆಜಾನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ದೈನಂದಿನ ಸಮಯಕ್ಕೆ ತಕ್ಕಂತೆ ಮಸೀದಿಯಲ್ಲಿ ಆಜಾನ್ ಕೂಗಿದಾಗ ರಾಜಕೀಯ ಹಾಗೂ ಕೋಮುದ್ವೇಷದ ಉದ್ದೇಶದಿಂದ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಒಂದು ಸಮುದಾಯವನ್ನು ಎತ್ತುಕಟ್ಟುವಂತಹ ಕೆಲಸ ಮಾಡಿದ್ದಾರೆ. ರಾಜ್ಯದ ಶಾಂತಿ ಸುವ್ಯವಸ್ಥೆ ಹಾಳುಮಾಡುವ ಪ್ರಯತ್ನ ಮಾಡಿದ್ದು, ಅವರ ಮೇಲೆ ಕಾನೂನು ರೀತಿಯ ಕ್ರಮಕೈಗೊಳ್ಳಬೇಕೆಂದು ಎಸ್‌ಡಿಪಿಐ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್, ರಾಜ್ಯ ಸಮಿತಿ ಸದಸ್ಯರಾದ ಸಲೀಂಖಾನ್, ಜಿಲ್ಲಾ ಕಾರ್ಯದರ್ಶಿ ಖಲೀಂ, ಜಿಲ್ಲಾ ಸಮಿತಿ ಸದಸ್ಯರಾದ ಫೈರೋಜ್, ಜೀಲಾನ್, ಇಸಾಕ್, ರಹೀಂ ಮತ್ತಿತರರಿದ್ದರು.
ಮಾ. 17ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಜಯಕರ್ನಾಟಕ ಸಂಘಟನೆ ಜಿಲ್ಲಾ ಸಮಿತಿಯಿಂದ ಮಾ. 17ರಂದು ಜ್ಯುಯೆಲ್ ರಾಕ್ ಹೋಟೆಲ್ ಸಭಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ವಿ. ಸುರೇಶ್ ಶೆಟ್ಟಿ ಹೇಳಿದರು.

ಅವರು ಇಂದು ಮೀಡಿಯಾ ಹೌಸ್ ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಅನುಕೂಲವಾಗುವ ಹಿನ್ನಲೆಯಲ್ಲಿ ಈ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಸರ್ಜಿ ಆಸ್ಪತ್ರೆ ನಮ್ಮ ಜೊತೆಗಿರುತ್ತದೆ. ನುರಿತ ವೈದ್ಯರು ತಪಾಸಣೆ ಮಾಡುತ್ತಾರೆ. ಮೂಳೆ ರೋಗ, ದಂತ, ಮಕ್ಕಳ, ಕಣ್ಣು, ಹಾಗೂ ಸ್ತ್ರೀ ರೋಗ ತಜ್ಞರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ಮಾಡುತ್ತಾರೆ. ಉಚಿತವಾಗಿ ಮಧುಮೇಹ ಮತ್ತು ರಕ್ಷ ಪರೀಕ್ಷೆ ಮಾಡಲಾಗುವುದು ಎಂದರು.

ಶಿಬಿರ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ ೩ ಗಂಟೆಯವರೆಗೆ ನಡೆಯಲಿದೆ. ರಕ್ತದ ತಪಾಸಣೆ ಮಾಡಿಸಿಕೊಳ್ಳುವವರು ಖಾಲಿ ಹೊಟ್ಟೆಯಲ್ಲಿ ಬರಬೇಕು. ಲಘು ಉಪಾಹಾರದ ವ್ಯವಸ್ಥೆ ಇರುತ್ತದೆ. ತಪಾಸಣೆ ಮತ್ತು ವೈದ್ಯರ ಸಲಹೆ ಪಡೆಯಬಹುದು. ಆರ್ಥಿಕವಾಗಿ ತುಂಬ ಬಡವರಾದರೆ ನಮ್ಮ ಸಂಘಟನೆಯೆ ಹೆಚ್ಚಿನ ಚಿಕಿತ್ಸೆಗೆ ನೆರವು ನೀಡುತ್ತದೆ. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕು. ಹೆಚ್ಚಿನ ವಿವರಗಳಿಗೆ 86603 63565 ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಪರಶುರಾಮ್, ಜಿ.ಆರ್. ತ್ಯಾಗರಾಜ್, ಟಿ. ನಾಗರಾಜ್, ಮೋಹನ್ ದೇವರಾಜ್, ನಾಜೀಮಾ, ಪ್ರೇಮಾ ಎನ್. ಶೆಟ್ಟಿ, ಎಂ. ನಾಗರಾಜ್, ರವಿ, ರಮೇಶ್ ಮುಂತಾದವರಿದ್ದರು.
ಕಾಂಗ್ರೆಸ್ ನ ಮಹತ್ವಾಕಾಂಕ್ಷಿ ಪ್ರಣಾಳಿಕೆಯಾದ ಗ್ಯಾರಂಟಿ ಕಾರ್ಡ್ ವಿತರಣೆ
ಕಾಂಗ್ರೆಸ್ ನ ಮಹತ್ವಾಕಾಂಕ್ಷಿ ಪ್ರಣಾಳಿಕೆಯಾದ ಗ್ಯಾರಂಟಿ ಕಾರ್ಡ್ ವಿತರಣೆಯನ್ನು ಇಂದು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬೇಡರಹೊಸಹಳ್ಳಿಯಲ್ಲಿ ವಿತರಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ಎನ್. ರಮೇಶ್ ಅವರು, ಕಾಂಗ್ರೆಸ್ ಪಕ್ಷ ಜನರಿಗೆ ಆತ್ಮ ವಿಶ್ವಾಸ ತುಂಬುತ್ತಿದೆ ಎನ್ನುವುದಕ್ಕೆ ಗ್ಯಾರಂಟಿ ಕಾರ್ಡ್ ನೀಡಿರುವುದೇ ಉದಾಹರಣೆಯಾಗಿದೆ. ಬಡವರ ಬದುಕು ದಿನೇ ದಿನೇ ದುಸ್ತರವಾಗುತ್ತಿದೆ. ಆದ್ದರಿಂದಲೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ, ಕುಟುಂಬ ನಿರ್ವಹಣೆ ಮಾಡುವ ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೆರವು, ಹಾಗೂ ಬಡವರು, ಶ್ರೀಮಂತರೆಂಬ ಬೇಧವಿಲ್ಲದೇ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಲದೇವಕೃಷ್ಣ, ಎಸ್. ರವಿಕುಮಾರ್, ಜಿ. ಪಲ್ಲವಿ, ದೇವಿಕುಮಾರ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಹಂದಿ ಅಣ್ಣಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ದಾಳಿ: ಓರ್ವ ಸಾವು, ಮತ್ತೊಬ್ಬ ಗಂಭೀರ

Next Post

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್‌ನಿಂದ ಮುಕ್ತಿ ಸಿಗಲಿದೆಯೇ? ಎಸ್ಕಾಂ ಸಭೆಯಲ್ಲಿ ಮಹತ್ವದ ನಿರ್ಧಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್‌ನಿಂದ ಮುಕ್ತಿ ಸಿಗಲಿದೆಯೇ? ಎಸ್ಕಾಂ ಸಭೆಯಲ್ಲಿ ಮಹತ್ವದ ನಿರ್ಧಾರ

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್‌ನಿಂದ ಮುಕ್ತಿ ಸಿಗಲಿದೆಯೇ? ಎಸ್ಕಾಂ ಸಭೆಯಲ್ಲಿ ಮಹತ್ವದ ನಿರ್ಧಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL