ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮೆಗ್ಗಾನ್ ಆಸ್ಪತ್ರೆಯ ಸುತ್ತ ಹಾಗೂ ದುರ್ಗಿಗುಡಿ ಭಾಗದಲ್ಲಿ ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಯಿತು.
ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಅವರ ನೇತೃತ್ವದಲ್ಲಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ತಂಬಾಕು ನಿಯಂತ್ರಣ ಸಮಿತಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ 18 ಪ್ರಕರಣಗಳನ್ನು ದಾಖಲಿಸಿ, ರೂ.2740 ದಂಡವನ್ನು ಸಂಗ್ರಹಿಸಲಾಯಿತು.
ಈ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರಾದ ಹೇಮಂತ್ರಾಜ್ ಅರಸ್, ಸಮಾಜ ಕಾರ್ಯಕರ್ತರಾದ ರವಿರಾಜ್, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Also read: ಶಿಕಾರಿಪುರ ಗಲಭೆ ಪ್ರಕರಣ: ಎಷ್ಟು ಪ್ರಕರಣ ದಾಖಲಾಗಿದೆ? ಎಷ್ಟು ಜನರ ಬಂಧನವಾಗಿದೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post