ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ(ಪಿಡಬ್ಲ್ಯೂಡಿಎಸ್) ಮತ್ತು ಕೋವಿಡ್-19 ಸೋಂಕಿತ ಅಥವಾ ಬಾಧಿತ ವ್ಯಕ್ತಿಗಳಿಗೆ ಹಾಗೂ ಅಗತ್ಯ ಸೇವೆಗಳ ಮೇಲಿರುವ ಅಂದರೆ ಗೈರು ಹಾಜರಿ ಮತದಾರರಿಗೆ ಅಂಚೆ ಮತಪತ್ರ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಬೂತ್ ಮಟ್ಟದ ಅಧಿಕಾರಿಗಳು ಮತದಾನ ಕೇಂದ್ರವಿರುವ ಪ್ರದೇಶದಲ್ಲಿ ಚುನಾವಣಾಧಿಕಾರಿಯು ಒದಗಿಸಿದ ವಿವರಗಳ ಅನುಸಾರ ಎವಿಎಸ್ಸಿ(ಅಬ್ಸೆಂಟೀ ವೋಟರ್ಸ್ ಆಫ್ ಸೀನಿಯರ್ ಸಿಟಿಜನ್ ಕೆಟಗರಿ) ಎವಿಪಿಡಿ(ಅಬ್ಸೆಂಟೀ ವೋಟರ್ಸ್ ಬಿಲಾಂಗಿಂಗ್ ಟು ಪಿಡಬ್ಲ್ಯೂಡಿ ಕೆಟಗರಿ) ಮತ್ತು ಎವಿಸಿಓ(ಅಬ್ಸೆಂಟೀ ವೋಟರ್ಸ್ ಬಿಲಾಂಗಿAಗ್ ಟು ಕೋವಿದ್-19 ಕೆಟಗರಿ) ಪ್ರವರ್ಗಗಳಲ್ಲಿನ ಗೈರು ಹಾಜರಿ ಮತದಾರರ ಮನೆಗಳಿಗೆ ಭೇಟಿ ನೀಡಿ ಸಂಬAಧಪಟ್ಟ ಮತದಾರನಿಗೆ ನಮೂನೆ 12 ಡಿ ಯನ್ನು ವಿತರಿಸಿ, ನಂತರ ಮತದಾರರಿಂದ ಚಲಾಯಿಸಿದ ನಮೂನೆ 12 ಡಿ ಯನ್ನು ಪಡೆಯಲಿದ್ದಾರೆ ಎಂದರು.
ಸೆಕ್ಟರ್ ಅಧಿಕಾರಿಗಳು ನಮೂನೆ 12 ಡಿ ಅರ್ಜಿಗಳನ್ನು ವಿತರಿಸುವ ಹಾಗೂ ಸಂಗ್ರಹಿಸುವ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ಈ ಎಲ್ಲಾ ಕಾರ್ಯದ ಸಂಪೂರ್ಣ ಮೇಲ್ವಿಚಾರಣೆಯನ್ನು ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದಿದ್ದಾರೆ.
ಅಂಚೆ ಮತದಾರನು ಒಂದು ಬಾರಿ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸುವುದಾಗಿ ಆಯ್ಕೆ ಮಾಡಿಕೊಂಡಲ್ಲಿ ಯಾವುದೇ ಕಾರಣಕ್ಕೂ ಮತಗಟ್ಟೆಗೆ ಹೋಗಿ ಮತಚಲಾಯಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕದAದು ಆ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಹಾಗೂ ಚುನಾವಣೆಯು ಮುಕ್ತಾಯಗೊಳ್ಳುವವರೆಗೂ ಆ ಪಟ್ಟಿಯಲ್ಲಿ ಯಾವುದೇ ಹೆಚ್ಚುವರಿ ಸೇರ್ಪಡೆ ಅಥವಾ ತೆಗೆದುಹಾಕುವಿಕೆಯನ್ನು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಕೋವಿಡ್-19 ಪ್ರವರ್ಗಕ್ಕೆ ಸೇರಿದ ಗೈರು ಹಾಜರಿ ಮತದಾರರ ಸಂದರ್ಭದಲ್ಲಿ ಅಂಚೆ ಮತದಾನಕ್ಕಾಗಿ ನಮೂನೆ-12 ಡಿ ಯನ್ನು ಅನುಮೋದಿಸುವ ಮುಂಚೆ ಚುನಾವಣಾಧಿಕಾರಿಯು ಸಕ್ಷಮ ಪ್ರಾಧಿಕಾರವು ನೀಡಿದ ಪ್ರಮಾಣ ಪತ್ರವನ್ನು ಪರಿಶೀಲಿಸಲಿದ್ದಾರೆ.
ಅಂಚೆ ಮತಪತ್ರವನ್ನು ನೀಡಲಾದ ಮತದಾರನಿಗೆ ಮತದಾನ ಕೇಂದ್ರದಲ್ಲಿ ಮತ ಹಾಕಲು ಅನುಮತಿ ನೀಡುವುದಿಲ್ಲ. ನಮೂನೆ-12 ಡಿ ಅರ್ಜಿಯು ಕೊಡಗು ಜಿಲ್ಲಾ ಅಧಿಕೃತ ವೆಬ್’ಸೈಟ್’ನಲ್ಲಿ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post