No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Friday, February 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತರಾತುರಿಯ ಎನ್‌ಇಪಿ ಅನುಷ್ಠಾನದಿಂದ ಉನ್ನತ ಶಿಕ್ಷಣಕ್ಕೆ ತೊಂದರೆ: ಪ್ರೊ. ಪೂರ್ಣಾನಂದ ಆತಂಕ

ಕುವೆಂಪು ವಿವಿಯಲ್ಲಿ ಪತ್ರಿಕೋದ್ಯಮ ಪಠ್ಯಕ್ರಮ ಪುನರಚನೆ ಕುರಿತು ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 30, 2023
in ಶಿವಮೊಗ್ಗ
0
ತರಾತುರಿಯ ಎನ್‌ಇಪಿ ಅನುಷ್ಠಾನದಿಂದ ಉನ್ನತ ಶಿಕ್ಷಣಕ್ಕೆ ತೊಂದರೆ: ಪ್ರೊ. ಪೂರ್ಣಾನಂದ ಆತಂಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್.ಇ.ಪಿ.) ಬಹಳಷ್ಟು ಮಹತ್ವದ ಶೈಕ್ಷಣಿಕ ವಿಚಾರಗಳ ಕುರಿತು ಮೌನವಹಿಸುತ್ತದೆ. ಸಮರ್ಪಕತೆಯ ಕೊರತೆಯಿಂದ ಕೂಡಿರುವ ಅದನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವುದು ಉನ್ನತ ಶಿಕ್ಷಣಕ್ಕೆ ಹೊಡೆತ ನೀಡಲಿದೆ ಎಂದು ಕುವೆಂಪು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಡಿ. ಎಸ್. ಪೂರ್ಣಾನಂದ ಆತಂಕ ವ್ಯಕ್ತಪಡಿಸಿದರು.

ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಗುರುವಾರ ವಿಭಾಗದಲ್ಲಿ ‘ಮಾಧ್ಯಮ ಶಿಕ್ಷಣ ಪಠ್ಯಕ್ರಮ ಪುನರಚನೆ’ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನವು ಹಲವು ವಿಚಾರಗಳಲ್ಲಿ ವೈರುಧ್ಯಗಳನ್ನು ಅಪ್ಪಿಕೊಳ್ಳುತ್ತಿದೆ. ಶಿಕ್ಷಕರು ಮತ್ತು ಸಂಸ್ಥೆಗಳಿಗೆ ಪಠ್ಯಕ್ರಮ ರಚನೆಯ ಸ್ವಾಯತ್ತತೆ ನೀಡಲಾಗುವುದು ಎಂದು ನೀತಿ ಹೇಳುತ್ತದೆ ಆದರೆ ಇಡೀ ರಾಜ್ಯದ ಎಲ್ಲ ವಿವಿಗಳಿಗೆ ಒಂದೇ ಸಮಿತಿಯಿಂದ ಪಠ್ಯಕ್ರಮ ರಚನೆಗೆ ಇಲಾಖೆ ಆದೇಶ ನೀಡುತ್ತದೆ. ಸಾಮಾಜಿಕ-ಆರ್ಥಿಕ ದುರ್ಬಲವರ್ಗಗಳನ್ನು ಒಳಗೊಳ್ಳುವ ಕುರಿತು ಮಾತನಾಡುವ ಶಿಕ್ಷಣ ನೀತಿಯು, ಸರ್ಕಾರಗಳಿಂದ ಕಾಲೇಜು-ವಿವಿಗಳು ಅನುದಾನ ನಿರೀಕ್ಷಿಸದೇ ಆರ್ಥಿಕ ಸ್ವಾವಲಂಬನೆ ಸಾಧಿಸಲು ಹೇಳುತ್ತದೆ ಎಂದರು.
ಕಾರ್ಪೋರೇಟ್ ಜಗತ್ತಿನ ಅವಶ್ಯಕತೆಗಳಿಗೆ ಅನುಗುಣವಾಗಿ ಉನ್ನತ ಶಿಕ್ಷಣದಲ್ಲಿ ಕೇವಲ ಕೌಶಲ್ಯಪೂರ್ಣ ಯುವಜನಾಂಗ ನಿರ್ಮಿಸಿದಲ್ಲಿ, ಮಾಧ್ಯಮದಲ್ಲಿನ ಉನ್ನತ ಶಿಕ್ಷಣದ ಉದ್ದೇಶವು ಮುಕ್ತಚಿಂತನೆ, ವಿಚಾರಶೀಲತೆ, ವಿಶ್ವಮಾನವತ್ವವುಳ್ಳ ನಾಗರೀಕರು ಮತ್ತು ಪತ್ರಕರ್ತರನ್ನು ಸೃಷ್ಟಿಸುವುದಾಗಿರುತ್ತದೆ. ಆದರೆ ಕಾರ್ಪೋರೇಟ್ ಜಗತ್ತು ಕೇವಲ ತಾಂತ್ರಿಕ ಕೌಶಲಗಳುಳ್ಳ ಕೆಲಸಗಾರರನ್ನು ಬೇಡುತ್ತಿದೆ. ಎನ್.ಇ.ಪಿ. ಕೂಡಾ ಕೌಶಲಗಳ ಪೂರೈಕೆಗೆ ಮಹತ್ವ ನೀಡಿದೆ. ವಿಶೇಷವಾಗಿ ಉನ್ನತ ಶಿಕ್ಷಣದ ಪದವಿಗಳನ್ನು ಉದ್ಯೋಗ ಪಡೆಯಲಿರುವ ಸಾಧನ ಎಂಬ ಆಲೋಚನಾಕ್ರಮದಿಂದ ಬೇರ್ಪಡಿಸುವ ತುರ್ತು ಇದೆ ಎಂದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ಪತ್ರಿಕೆಯ ವಿಶೇಷ ವರದಿಗಾರ ರಾಮಚಂದ್ರ ಗುಣಾರಿ ಮಾತನಾಡಿ, ಪತ್ರಿಕೋದ್ಯಮವು ವೃತ್ತಿಯಾಧರಿತ ಕೋರ್ಸ್ ಆಗಿದ್ದು, ಉತ್ತಮ ಮೌಲ್ಯವುಳ್ಳ ಶಿಕ್ಷಣದ ಜೊತೆಗೆ ಹೆಚ್ಚೆಚ್ಚು ಮಾಧ್ಯಮ ಸಲಕರಣೆಗಳ ಬಳಕೆಯ ತರಬೇತಿ ನೀಡಬೇಕು. ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ಸು ಸಾಧಿಸಬಲ್ಲ ಕಾಶಲ್ಯಗಳನ್ನು ಕಲಿಸಬೇಕು. ಇದು ಸಾರ್ವಜನಿಕರ ಹಿತಕಾಯುವ ಪತ್ರಿಕೋದ್ಯಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯಕವಾಗುತ್ತದೆ ಎಂದು ಸಲಹೆಯಿತ್ತರು.
ಕನ್ನಡ ಮಿಡಿಯಂ ನ್ಯೂಸ್ ಚಾನೆಲ್‌ನ ಸಂಪಾದಕ ಹೊನ್ನಾಳಿ ಚಂದ್ರಶೇಖರ್ ಮಾತನಾಡಿ, ಮಾಧ್ಯಮವು ಪ್ರತಿನಿತ್ಯವೂ ವೇಗವಾಗಿ ಬದಲಾಗುತ್ತಿರುವ ಕ್ಷೇತ್ರವಾಗಿದೆ. ಪತ್ರಕರ್ತರು ಜಾತಿ, ಧರ್ಮ, ಪ್ರಾಂತ್ಯ, ರಾಷ್ಟ್ರೀಯತೆ, ವೈಭವೀಕೃತ ಇತಿಹಾಸಗಳಿಂದ ಹೊರತಾಗಿ ವೈಚಾರಿಕತೆ, ಬಂಧುತ್ವ, ಮಾನವತ್ವಗಳನ್ನು ಒಳಗೊಂಡವರಾಗಬೇಕು. ಈ ನಿಟ್ಟಿನಲ್ಲಿ ಮಾಧ್ಯಮ ಮತ್ತು ಎಲ್ಲ ವಿಷಯಗಳ ಶಿಕ್ಷಣ ಪಠ್ಯಕ್ರಮದ ರಚನೆಯಾಗಬೇಕು ಎಂದು ತಿಳಿಸಿದರು.

Also read: ಸಾರ್ವಜನಿಕರು ಎಷ್ಟು ಹಣ ಕೊಂಡೊಯ್ಯಬಹುದು? ಜಾಹೀರಾತು, ಫ್ಲೆಕ್ಸ್’ಗಳಿಗೆ ಏನೆಲ್ಲಾ ನಿರ್ಬಂಧ?

ಈ ಸಂದರ್ಭದಲ್ಲಿ ವಿಭಾಗದ ಅಧ್ಯಕ್ಷ ಡಾ. ಸತ್ಯಪ್ರಕಾಶ್ ಎಂ. ಆರ್. ಪಠ್ಯಕ್ರಮ ಸಮಿತಿಯ ಅಧ್ಯಕ್ಷ ಡಾ. ಸತೀಶ್‌ಕುಮಾರ್, ಡಾ. ವರ್ಗೀಸ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರು ವಿವಿಯ ಡಾ. ಸಿ. ಕೆ. ಪುಟ್ಟಸ್ವಾಮಿ, ಕರ್ನಾಟಕ ವಿವಿಯ ಡಾ. ಸಂಜಯ್ ಮಾಲಗತ್ತಿ, ಬೆಂಗಳೂರು ವಿವಿಯ ಡಾ. ವಾಹಿನಿ, ಡಾ. ವಿನಯ್ ಎಂ. ಹಾಗೂ ವಿವಿಧ ವಿವಿಗಳ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರುಗಳು, ಸಂಶೋಧನಾರ್ಥಿಗಳು ಹಾಜರಿದ್ದರು.

ಕಾರ್ಯಾಗಾರದಲ್ಲಿ ಪಠ್ಯಕ್ರಮದಲ್ಲಿ ಪ್ರಯೋಗಾಲಯ ತರಬೇತಿಯ ಅವಶ್ಯಕತೆ, ಇತ್ತೀಚಿನ ಮಾಧ್ಯಮ ಪ್ರವೃತ್ತಿಗಳ ಒಳಗೊಳ್ಳುವಿಕೆ, ಎನ್.ಇ.ಪಿ. ಅಳವಡಿಯ ಸಾಧಕ-ಬಾಧಕಗಳು, ಮಾಧ್ಯಮ ವಿಭಾಗ ಮತ್ತು ವೃತ್ತಿಕ್ಷೇತ್ರದ ಸಂಬಂಧಗಳ ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu UniversityLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share204Tweet123Send
Previous Post

ಸಾರ್ವಜನಿಕರು ಎಷ್ಟು ಹಣ ಕೊಂಡೊಯ್ಯಬಹುದು? ಜಾಹೀರಾತು, ಫ್ಲೆಕ್ಸ್’ಗಳಿಗೆ ಏನೆಲ್ಲಾ ನಿರ್ಬಂಧ?

Next Post

ದೇವಾಲಯದ ಮೆಟ್ಟಿಲು ಬಾವಿ ಕುಸಿದು 12 ಮಂದಿ ಸಾವು: ಉಳಿದವರ ರಕ್ಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇವಾಲಯದ ಮೆಟ್ಟಿಲು ಬಾವಿ ಕುಸಿದು 12 ಮಂದಿ ಸಾವು: ಉಳಿದವರ ರಕ್ಷಣೆ

ದೇವಾಲಯದ ಮೆಟ್ಟಿಲು ಬಾವಿ ಕುಸಿದು 12 ಮಂದಿ ಸಾವು: ಉಳಿದವರ ರಕ್ಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

February 20, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

February 20, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ | ಜಿಲ್ಲೆಗೆ 4 ಚಿನ್ನ, 4 ಬೆಳ್ಳಿ ಪದಕ

ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ | ಜಿಲ್ಲೆಗೆ 4 ಚಿನ್ನ, 4 ಬೆಳ್ಳಿ ಪದಕ

February 20, 2026
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL