No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚುನಾವಣಾಧಿಕಾರಿಗಳು ರಜೆ ದಿನದಂದು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಡಿಸಿ ಸೆಲ್ವಮಣಿ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 2, 2023
in Small Bytes, ಶಿವಮೊಗ್ಗ
0
ಚುನಾವಣಾಧಿಕಾರಿಗಳು ರಜೆ ದಿನದಂದು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಡಿಸಿ ಸೆಲ್ವಮಣಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ನಿಯೋಜಿತ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ರಜಾ ದಿನಗಳಂದು ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ ಸಿದ್ದತೆ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು.
ಎಲ್ಲ ಚುನಾವಣಾಧಿಕಾರಿಗಳು ಮತಗಟ್ಟೆಗಳಿಗೆ ತೆರಳಿ ಮತಗಟ್ಟೆಗಳ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆ ಕುರಿತು ಈಗಲೇ ಸಮರ್ಪಕವಾದ ಯೋಜನೆ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು. ಪ್ರತಿ ಮತಗಟ್ಟೆಗೆ ಪಂಚಾಯಿತಿ ಅಥವಾ ಇತರೆ ಸ್ಥಳೀಯ ಸಂಸ್ಥೆಗಳಿಂದ ಒಬ್ಬರನ್ನು ನಿಯೋಜಿಸಬೇಕು. ಇಓ, ಚೀಫ್ ಆಫೀಸರ್, ಪಿಡಿಓಗಳು ಮತಗಟ್ಟೆಗಳು ಹಾಗೂ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ/ಸಿಬ್ಬಂದಿಗಳ ಎಲ್ಲ ರೀತಿಯ ಮೂಲಭೂತ ವ್ಯವಸ್ಥೆಗಳ ಕುರಿತು ನಿಗಾ ವಹಿಸಿ, ಮುತುವರ್ಜಿಯಿಂದ ವ್ಯವಸ್ಥೆ ಮಾಡಬೇಕು ಎಂದರು.

ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು, ಚುನಾವಣಾ ಸಿಬ್ಬಂದಿಗಳಿಗೆ ನೀರು, ಊಟದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಯೋಜಿತ ಅಧಿಕಾರಿಗಳು ಮಾಡಬೇಕು. ಕೆಲವು ದೂರದ ಹಳ್ಳಿಗಳಲ್ಲಿ ಕುಡಿಯುವ ನೀರು ಇತರೆ ಸೌಕರ್ಯಗಳು ಇರುವುದಿಲ್ಲ. ಅಲ್ಲಿ ಹೆಚ್ಚಿನ ಕಾಳಜಿ ವಹಿಸಿ ವ್ಯವಸ್ಥೆ ಮಾಡಬೇಕು. ಹಾಗೂ ಕ್ಲಸ್ಟರ್ ಮತಗಟ್ಟೆ ಅಂದರೆ ಮೂರು ಮತ್ತು ಹೆಚ್ಚು ಮತಗಟ್ಟೆ ಇರುವೆಡೆ ಪೆಂಡಾಲ್ ಸೇರಿದಂತೆ ಮೂಲಭೂತ ಸೌಕರ್ಯ ಸಮರ್ಪಕವಾಗಿರುವಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.
Kalahamsa Infotech private limitedಇಓ, ಚೀಫ್ ಆಫೀಸರ್, ಪಿಡಿಓಗಳು ಎಲ್ಲ ಮತಗಟ್ಟೆಗಳಲ್ಲಿ ಎಎಂಎಫ್(ಅಶ್ಯೂರಡ್ ಮಿನಿಮಮ್ ಫೆಸಿಲಿಟಿಸ್) ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು. ಹಾಗೂ ಚುನಾವಣಾಧಿಕಾರಿಗಳು ಪೋಸ್ಟಲ್ ಬ್ಯಾಲಟ್ ಬಗ್ಗೆ ಅತ್ಯಂತ ಸೂಕ್ಷ್ಮವಾಗಿ ಕಾರ್ಯ ನಿರ್ವಹಿಸಬೇಕೆ ಎಂದರು.

ನಾಮಪತ್ರ ಸಲ್ಲಿಕೆಗೆ ಅಗತ್ಯವಾದ ತಯಾರಿಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ನಾಮಪತ್ರ ಸ್ವೀಕರಿಸುವ ಕುರಿತು ಚುನಾವಣಾಧಿಕಾರಿಗಳು ನಿಯಮಗಳು, ಮಾರ್ಗಸೂಚಿಗಳನ್ನು ಮತ್ತೊಮ್ಮೆ ಓದಿ, ತಿಳಿದುಕೊಂಡು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಬೇಕು. ಮಸ್ಟರಿಂಗ್ ಕೇಂದ್ರಗಳು ಹಾಗೂ ಇದಕ್ಕೆ ಸಂಬಂಧಿಸಿದ ಸಿಬ್ಬಂದಿಗಳು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮತದಾರರ ಗುರುತಿನ ಚೀಟಿಗಳ ವಿತರಣೆಯನ್ನು ಸಮರ್ಪಕವಾಗಿ ಮಾಡಬೇಕು. ಹೊಸ ಹಾಗೂ ಉಳಿದ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲು ಶೀಘ್ರವೇ ಕ್ರಮ ಜರುಗಿಸುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಲೋಖಂಡೆ, ಎಫ್‌ಎಸ್ಟಿ, ಎಸ್‌ಎಸ್ಟಿ, ವಿಎಸ್ಟಿ ಮತ್ತು ಇತರೆ ತಂಡಗಳು ತಮ್ಮ ತಮ್ಮ ಕರ್ತವ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಮತದಾನ ಜಾಗೃತಿಗಾಗಿ ಎಲ್ಲ ಹಳ್ಳಿಗಳಲ್ಲಿ ಕಸ ಸಂಗ್ರಹ ವಾಹನಗಳಲ್ಲಿ ಮತದಾನ ಮಹತ್ವ-ಅರಿವು ಮೂಡಿಸುವ ಜಿಂಗಲ್’ಗಳನ್ನು ಹಾಕಬೇಕು. ಹಾಗೂ ಸ್ವೀಪ್ ಚಟುವಟಿಕೆಗಳನ್ನು ಸಕ್ರಿಯಗೊಳಿಸಿ ಮತದಾನ ಜಾಗೃತಿ ಮೂಡಿಸಬೇಕು. ಕಳೆದ ಬಾರಿ ಕಡಿಮೆ ಮತದಾನ ಆದ ಮತಕ್ಷೇತ್ರಗಳಲ್ಲಿ ಹೆಚ್ಚಿನ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly Election 2023Kannada News WebsiteLatest News KannadaShimogaShivamoggaShivamogga Newsಚುನಾವಣಾಧಿಕಾರಿಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿವಿಧಾನಸಭಾ ಚುನಾವಣೆ 2023ಶಿವಮೊಗ್ಗ
Share204Tweet123Send
Previous Post

ಚುನಾವಣಾ ಚೆಕ್ ಪೋಸ್ಟ್: ಶಿವಮೊಗ್ಗದಲ್ಲಿ ಸಾಲು ಸಾಲು ಅಕ್ರಮ ನಗದು, ವಸ್ತುಗಳ ವಶ

Next Post

ಈಶ್ವರಪ್ಪ ವಿರುದ್ಧ ಆಯನೂರು ವಾಗ್ದಾಳಿ | ಬಿಜೆಪಿ ತ್ಯಜಿಸುತ್ತಾರಾ? | ವಿಧಾನಸಭೆ ಸ್ಪರ್ಧೆ ಬಗ್ಗೆ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈಶ್ವರಪ್ಪ ವಿರುದ್ಧ ಆಯನೂರು ವಾಗ್ದಾಳಿ | ಬಿಜೆಪಿ ತ್ಯಜಿಸುತ್ತಾರಾ? | ವಿಧಾನಸಭೆ ಸ್ಪರ್ಧೆ ಬಗ್ಗೆ ಹೇಳಿದ್ದೇನು?

ಈಶ್ವರಪ್ಪ ವಿರುದ್ಧ ಆಯನೂರು ವಾಗ್ದಾಳಿ | ಬಿಜೆಪಿ ತ್ಯಜಿಸುತ್ತಾರಾ? | ವಿಧಾನಸಭೆ ಸ್ಪರ್ಧೆ ಬಗ್ಗೆ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಲೋನ್ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ | ಹೇಗಾಯ್ತು ಘಟನೆ?

May 25, 2026
ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

May 25, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಮತ್ತೊಮ್ಮೆ ಬೆಲೆ ಏರಿಕೆಯ ಹೊರೆ | ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

May 25, 2026
ಉತ್ತರ ಕನ್ನಡ | ಕಡಲತೀರದಲ್ಲಿ ಭೀಕರ ದುರಂತ | ಮೃತರ ಸಂಖ್ಯೆ 11ಕ್ಕೆ ಏರಿಕೆ | ಹೇಗಾಯ್ತು ಘಟನೆ?

ಉತ್ತರ ಕನ್ನಡ | ಕಡಲತೀರದಲ್ಲಿ ಭೀಕರ ದುರಂತ | ಮೃತರ ಸಂಖ್ಯೆ 11ಕ್ಕೆ ಏರಿಕೆ | ಹೇಗಾಯ್ತು ಘಟನೆ?

May 25, 2026
ಬಹುತೇಕ ಜನರ ಸಮಸ್ಯೆಗೆ ಅವಿಭಕ್ತ ಕುಟುಂಬವೇ ಅಂತಿಮ ಪರಿಹಾರ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಬಹುತೇಕ ಜನರ ಸಮಸ್ಯೆಗೆ ಅವಿಭಕ್ತ ಕುಟುಂಬವೇ ಅಂತಿಮ ಪರಿಹಾರ | ಸತ್ಯಾತ್ಮ ತೀರ್ಥ ಸ್ವಾಮೀಜಿ

May 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL