ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಸ್ತು ಮತ್ತು ದಕ್ಷತೆಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಪ್ರತಿ ಅಧಿಕಾರಿ ಸಿಬ್ಬಂಧಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಯರಿತು ಸದಾ ಎಚ್ಚರಿಕೆಯಿಂದಿದ್ದು ಕಾರ್ಯನಿರ್ವಹಿಸುವಂತೆ ನಿವೃತ್ತ ಎಎಸ್ಐ ದಾನಂ ಅವರು ಹೇಳಿದರು.
ಅವರು ಪೊಲೀಸ್ ಇಲಾಖೆಯ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದರು. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು ಇಲಾಖೆ ಮಾತ್ರವಲ್ಲದೆ ಎಲ್ಲೆಡೆಯಲ್ಲಿಯೂ ಗೌರವಕ್ಕೆ ಪಾತ್ರರಾಗುತ್ತಾರೆ ಎಂದರು.

ಇಲಾಖೆಯ ಎಲ್ಲಾ ಹಂತದ ಅಧಿಕಾರಿ ಸಿಬ್ಬಂಧಿಗಳು ಕರ್ತವ್ಯದಲ್ಲಿ ನಿಷ್ಠೆ, ಶಿಸ್ತು , ಬದ್ಧತೆಯೊಂಡಿಗೆ ವೃತ್ತಿಪರತೆಯನ್ನು ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದ ಅವರು, ಅಗತ್ಯವಿರುವ ಸಿಬ್ಬಂಧಿಗಳು ಸೂಕ್ತ ತರಬೇತಿ ಪಡೆದು ಮುಂದುವರೆಯುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾತನಾಡಿ, ಸ್ಥಾಪಿಸಲಾಗಿರುವ ಪೊಲೀಸ್ ನಿಧಿಯಿಂದ ಜಿಲ್ಲೆಯಲ್ಲಿ ನಿವೃತ್ತಿ ಜೀವನ ಸಾಗಿಸುತ್ತಿರುವ ಹಾಗೂ ಅನಾರೋಗ್ಯದಿಂದಿರುವ 66ಜನರಿಗೆ 2ಲಕ್ಷಕ್ಕೂ ಹೆಚ್ಚಿನ ಧನ ಸಹಾಯವನ್ನು ಮಾಡಲಾಗಿದೆ. ಆಲ್ಲದೆ ಮೃತರಾದ 13ಪೊಲೀಸ್ ಕುಟುಂಬಗಳಿಗೆ 1.30ಲಕ್ಷ ಹಣ ನೀಡಿ ಸಹಕರಿಸಲಾಗಿದೆ. ಅಂತೆಯೇ ಪೊಲೀಸ್ ಕುಟುಂಬಗಳ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲಕುಮಾರ ಭೂಮಾರಡ್ಡಿ ಸೇರಿದಂತೆ ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.










Discussion about this post