ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 28ರಿಂದ ಮೇ 7ರವರೆಗೂ ಏಳು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ರಾಜ್ಯದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಎಪ್ರಿಲ್ 28ರಂದು ಕೋಲಾರಕ್ಕೆ ಭೇಟಿ ನೀಡಲಿರುವ ಪ್ರಧಾನಿಯವರು ಬೃಹತ್ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಮತಯಾಚನೆ ಮಾಡಲಿದ್ದಾರೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭ್ಯರ್ಥಿಗಳ ಪರವಾಗಿ ಮೋದಿ ಪ್ರಚಾರ ನಡೆಸಲಿದ್ದು ಕೋಲಾರ ತಾಲೂಕಿನ ಚಲುವನಹಳ್ಳಿ ಗ್ರಾಮದ ಬಳಿ ವೇದಿಕೆ ನಿರ್ಮಾಣಕ್ಕೆ ಸಿದ್ದತೆ ನಡೆದಿದೆ. ಇದಕ್ಕಾಗಿ, ಸುಮಾರು 30 ಎಕರೆ ಪ್ರದೇಶದಲ್ಲಿ ವೇದಿಕೆ ನಿರ್ಮಾಣವಾಗಲಿದ್ದು ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಪ್ರಚಾರ ಮಾಡಲು ಬಿಜೆಪಿ ಮುಂದಾಗಿದೆ.
Also read: ಏ.22: ರೇಡಿಯೋ ಶಿವಮೊಗ್ಗಕ್ಕೆ ವರ್ಷದ ಸಡಗರ-ಲಕ್ಷಾಂತರ ಕೇಳುಗರ ಹೃನ್ಮನ ತಲುಪಿದ ಸಾಧನೆ
ಏ.28ರಿಂದ ಮೇ 7ರವರೆಗಿನ ಅವಧಿಯಲ್ಲಿ ಸುಮಾರು ಏಳು ದಿನಗಳ ಕಾಲ ಪ್ರಚಾರ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ಸುಮಾರು 20ಕ್ಕೂ ಹೆಚ್ಚು ಸಮಾವೇಶವನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಅಲ್ಲದೇ, ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ Yogi Adithyanath ಅವರನ್ನೂ ಪ್ರಚಾರದಲ್ಲಿ ಸಮರ್ಥವಾಗಿ ಬಳಸಿಕೊಳ್ಳಲು ಯೋಜಿಸಲಾಗಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post