ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳುವ ಧಾರುಣ ಪರಿಸ್ಥಿತಿ ನನಗಾಗಲಿ, ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಅವರಿಗಾಗಲೀ ಹಾಗೂ ಯಡಿಯೂರಪ್ಪ ಅವರ ಕುಟುಂಬದವರಿಗಾಗಲಿ ಬಂದಿಲ್ಲ ಎಂದು ಬಿ.ವೈ. ವಿಜಯೇಂದ್ರ BYVijayendra ಹೇಳಿದರು.
ಸಂವಾದದಲ್ಲಿ ಮಾತನಾಡಿದ ಅವರು, 2004ರ ಚುನಾವಣೆ ಸಂದರ್ಭದಲ್ಲಿ ಯಾರು ಅಭ್ಯರ್ಥಿಯೆಂಬುದೇ ಗೊತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ನಮ್ಮ ಶಿಕಾರಿಪುರದ ಸ್ವಾಭಿಮಾನಿ ಮತದಾರರು ಸುಮಾರು 46,000ಕ್ಕೂ ಅಧಿಕ ಮತಗಳ ಅಂತರದಿಂದ ಬಿ.ಎಸ್. ಯಡಿಯೂರಪ್ಪ BSYadiyurappa ಅವರನ್ನು ವಿಜಯಿಶಾಲಿಯನ್ನಾಗಿ ಮಾಡಿದ್ದರು.
ಉಪಚುನಾವಣೆ ನಡೆದ ಸಂದರ್ಭದಲ್ಲಿ ಬಿ.ವೈ. ರಾಘವೇಂದ್ರ ಸ್ಪರ್ಧೆ ಮಾಡಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಸರ್ಕಾರದ ಇಡೀ ಕ್ಯಾಬಿನೆಟ್ ಶಿಕಾರಿಪುರಕ್ಕೆ ಬಂದು ತಾಲೂಕಿನಾದ್ಯಂತ ಪ್ರಚಾರ ಮಾಡಿತ್ತು. ಶಿಕಾರಿಪುರದಲ್ಲಿ ಹಣ, ಹೆಂಡದ ಹೊಳೆ ಹರಿಸಿದ್ದರೂ ಅದ್ಯಾವುದಕ್ಕೂ ಬೆಲೆ ಕೊಡದೆ ಕ್ಷೇತ್ರದ ಮತದಾರರು ರಾಘವೇಂದ್ರ ಅವರಿಗೆ ಆಶೀರ್ವಾದ ಮಾಡಿದ್ದರು. ಹೀಗಾಗಿ ಹೊಂದಾಣಿಕೆ ರಾಜಕೀಯದ ಪ್ರಶ್ನೆಯೇ ಉದ್ಭವಿಸದು. ಪಕ್ಷದ ಸಂಘಟನೆ, ಕಾರ್ಯಕರ್ತರ ಪರಿಶ್ರಮ, ಅಭಿವೃದ್ಧಿ ಕೆಲಸವೇ ನಮಗೆ ಶ್ರೀರಕ್ಷೆಯಾಗಿದೆ ಎಂದರು.
Also read: 50 ಸಾವಿರ ಮತಗಳ ಅಂತರದಿಂದ ನನ್ನ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ಭರವಸೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post