ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಯನೂರಿನಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ಮೆಗಾ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಠಿಯಿಂದ ಹಲವು ಸಂಚಾರ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಲಾಗಿದ್ದು, ಮೇ ೭ರಂದು ಸಮಾವೇಶ ನಡೆಯಲಿರುವ ಆಯನೂರಿಗೆ ಸಂಪರ್ಕಿಸುವ ಹಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಹೀಗಿದೆ ಮಾರ್ಗ ಬದಲಾವಣೆ:
- ಸಾಗರದಿಂದ ಶಿವಮೊಗ್ಗ ಕಡೆಗೆ ಬರುವ ಲಘು ವಾಹನಗಳು: ಆನಂದಪುರ ಎಡೆಹಳ್ಳಿ ಸರ್ಕಲ್ – ಚೊರಡಿ – ಕುಂಸಿ – ಕುಂಸಿ ರೈಲ್ವೆ ಗೇಟಿನ ಹತ್ತಿರ ಎಡಕ್ಕೆ ತಿರುಗಿ ಹಾರ್ನಳ್ಳಿ – ಬೈರನಕೊಪ್ಪ -ಹಿಟ್ಟೂರು ಕ್ರಾಸ್ ಬಲಕ್ಕೆ ತಿರುಗಿ ಶಿವಮೊಗ್ಗಕ್ಕೆ ಬಂದು ಸೇರುವುದು.
- ಸಾಗರದಿಂದ ಶಿವಮೊಗ್ಗದ ಕಡೆಗೆ ಬರುವ ಭಾರಿ ಮತ್ತು ಸರಕು ವಾಹನಗಳು: ಆನಂಪುರ – ಶಿಕಾರಿಪುರ – ಹೊನ್ನಾಳಿ ಮೂಲಕ ಶಿವಮೊಗ್ಗಕ್ಕೆ ಬಂದು ಸೇರುವುದು.
- ಶಿವಮೊಗ್ಗದಿಂದ ಸಾಗರಕ್ಕೆ ಹೋಗುವ ಲಘು ವಾಹನಗಳು: ಶಿವಮೊಗ್ಗದಿಂದ ಸೋಮಿನಕೊಪ್ಪ – ಗೆಜ್ಜೇನಹಳ್ಳಿ – ಮುದುವಾಲ – ಹಾರ್ನಳ್ಳಿ – ಕುಂಸಿ ರೈಲ್ವೆ ಗೇಟಿನ ಹತ್ತಿರ ಬಲಕ್ಕೆ ತಿರುಗಿ ಸಾಗರಕ್ಕೆ ಹೋಗುವುದು.
- ಶಿವಮೊಗ್ಗದಿಂದ ಸಾಗರಕ್ಕೆ ಹೋಗುವ ಭಾರಿ ಮತ್ತು ಸರಕು ವಾಹನಗಳು: ಶಿವಮೊಗ್ಗದಿಂದ ಹೊನ್ನಾಳಿ – ಶಿಕಾರಿಪುರ – ಆನಂದಪುರ ಮೂಲಕ ಸಾಗರಕ್ಕೆ ಹೋಗುವುದು
Also read: ನಾಳೆ ಪ್ರಧಾನಿಯವರ ಕಾರ್ಯಕ್ರಮಕ್ಕೆ ಈ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ
- ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುವ ಭಾರಿ ಮತ್ತು ಲಘು ವಾಹನಗಳು: ಶಿವಮೊಗ್ಗದಿಂದ ಹೊನ್ನಾಳಿ ಮೂಲಕ ಶಿಕಾರಿಪುರಕ್ಕೆ ಹೋಗುವುದು.
- ಶಿಕಾರಿಪುರ ದಿಂದ ಶಿವಮೊಗ್ಗಕ್ಕೆ ಬರುವ ಭಾರಿ ಮತ್ತು ಲಘು ವಾಹನಗಳು: ಶಿಕಾರಿಪುರ ದಿಂದ ಹೊನ್ನಾಳಿ ಮೂಲಕ ಶಿವಮೊಗ್ಗಕ್ಕೆ ಬಂದು ಸೇರುವುದು.
- ಶಿವಮೊಗ್ಗದಿಂದ ರಿಪ್ಪನ್ ಪೇಟೆ ಹಾಗೂ ಹೊಸನಗರ ಕಡೆಗೆ ಹೋಗುವ ಭಾರಿ ಮತ್ತು ಲಘು ವಾಹನಗಳು: ಶಿವಮೊಗ್ಗದಿಂದ ಮಂಡಗದ್ದೆ – ಕೋಣಂದೂರು – ರಿಪ್ಪನಪೇಟೆ ಮೂಲಕ ಹೊಸನಗರಕ್ಕೆ ಹೋಗುವುದು.
- ರಿಪ್ಪನಪೇಟೆ ಹೊಸನಗರದಿಂದ ಶಿವಮೊಗ್ಗಕ್ಕೆ ಬರುವ ಭಾರಿ ಮತ್ತು ಲಘು ವಾಹನಗಳು: ಕೋಣಂದೂರು – ಸಿಕೆ ರಸ್ತೆ – ಮಂಡಗದ್ದೆ – ಮಾಳೂರು ಮೂಲಕ ಶಿವಮೊಗ್ಗಕ್ಕೆ ಬಂದು ಸೇರುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post