ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮಿಂಚಿನ ಸಂಚಾರದೊಂದಿಗೆ ಮತಯಾಚನೆ ನಡೆಸುತ್ತಿರುವ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ರವರನ್ನು ಗ್ರಾಮಸ್ಥರು, ಅಭಿಮಾನಿಗಳು, ಕಾರ್ಯಕರ್ತರು ಕಂಬಳಿ ಹೊದಿಸಿ ಕುರಿ ಮರಿ ನೀಡಿ ಸ್ವಾಗತಿಸಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ತ್ಯಾಜ್ ಮಿರ್ಜಾಪೂರ್ ಗ್ರಾಮದಿಂದ ಶನಿವಾರ ಮತಯಾಚನಾ ಯಾತ್ರೆ (ಚುನಾವಣಾ ಪ್ರಚಾರ) ಆರಂಭಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರಿಗೆ ಗ್ರಾಮದೆಲ್ಲಡೆ ಭರ್ಜರಿ ರಸ್ಪಾನ್ಸ್ ದೊರೆಯಿತು. ಶಾಸಕರು ಗ್ರಾಮ ಸಂಚಾರ ನಡೆಸಿ ಮತಯಾಚಿಸಿದರು. ಬಳಿಕ ಅವರು ಅಷ್ಟೂರ ಗ್ರಾಮಕ್ಕೆ ಭೇಟಿ ನೀಡಿ ಮತಯಾಚನೆ ನಡೆಸಿದರು. ನಂತರ ಮಲ್ಕಾಪೂರ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕರನ್ನು ಗ್ರಾಮಸ್ಥರು, ಅಭಿಮಾನಿಗಳು, ಕಾರ್ಯಕರ್ತರು ಕಂಬಳಿ ಹೊದಿಸಿ ಕುರಿಮರಿ ನೀಡುವ ಮೂಲಕ ಭರ್ಜರಿಯಾಗಿ ಸ್ವಾಗತಿಸಿದರು.
ಗ್ರಾಮ ಸಂಚಾರ ನಡೆಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಗ್ರಾಮಸ್ಥರು ಭಾಜಾ ಭಜಂತ್ರಿಯೊಂದಿಗೆ ಬರಮಾಡಿಕೊಂಡರು. ಈ ವೇಳೆ ಜೆಡಿಎಸ್ ಗೆ ಮತ ನೀಡುವಂತೆ ಶಾಸಕರು ಮನವಿ ಮಾಡಿದರು. ನಂತರ ಸುಲ್ತಾನಪೂರದಲ್ಲಿ ಮತಯಾಚನೆ ನಡೆಸಿದ ಶಾಸಕರಿಗೆ ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ದೊರೆಯಿತು. ನಂತರ ಅವರು ಗುನ್ನಳ್ಳಿ, ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚನೆ ನಡೆಸಿದರು. ಇದೇ ವೇಳೆ ಗ್ರಾಮಗಳ ಮಂದಿರ, ದರ್ಗಾ, ಚರ್ಚ್ ಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ನಾನು ಪ್ರತಿನಿತ್ಯ ಭೇಟಿ ನೀಡುವ ಗ್ರಾಮಗಳಲ್ಲಿ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿಕೊಳ್ಳುತ್ತಿರುವುದು ಸಂತಸದ ವಿಷಯವಾಗಿದೆ. ನಾನು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇವೆ. ಮತ್ತೊಮ್ಮೆ ನನಗೆ ಅವಕಾಶ ನೀಡಿ ಎಂದು ಕ್ಷೇತ್ರದ ಮತದಾರರಿಗೆ ಮನವಿ ಮಾಡಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post