ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಂದುಗಳ ಧ್ವನಿಯಾಗಿರುವ ಆರ್ಎಸ್ಎಸ್, RSS ಭಜರಂಗದಳ ತಂಟೆಗೆ ಹೋದರೆ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಆರ್. ಅಶೋಕ್ R Ashok ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ನಿಷೇಧವಲ್ಲ, ಸಂಘದ ಒಂದು ಶಾಖೆಯನ್ನು ಕಾಂಗ್ರೆಸ್ಗೆ ತಾಕತ್ತಿದ್ದರೆ ಮುಟ್ಟಲಿ. ನಿಮ್ಮ ಅಪ್ಪ, ಅಜ್ಜಿ, ಮುತ್ತಾತ್ತನ ಕೈಯಲ್ಲೇ ಆಗಿಲ್ಲ. ಇವಾಗ ದೇಶದಲ್ಲಿ ನಿಮ್ಮ ಸರ್ಕಾರ ನೆಗೆದು ಬಿದ್ದಿದೆ. ಇವಾಗ ತಾಕತ್ ಧಮ್ ಇದ್ರೆ, ಬಜರಂಗ ದಳ ಆಗಲಿ ಆಥವಾ ಒಂದು ಆರ್ಎಸ್ಎಸ್ ಶಾಖೆಯನ್ನು ಬ್ಯಾನ್ ಮಾಡಿ ಎಂದು ಆರ್. ಅಶೋಕ್ ಗುಡುಗಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















