ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಇಂದು ಸಹ ನಗರ ಹಾಗೂ ಹೊರವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸಲಹೆ-ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯ ಎಲ್ಬಿಎಸ್ ನಗರದ ಚಾನಲ್ಗೆ ಭೇಟಿ ನೀಡಿ, ಚಾನಲ್ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ನೀರು ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುವಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ವಿವಿಧ ನಾಲೆಗಳು, ರಾಜ ಕಾಲುವೆ, ಚಾನಲ್, ಚರಂಡಿಗಳನ್ನು ಪರಿಶೀಲಿಸಿ, ಮಳೆ ಆರಂಭವಾಗುವ ಮುನ್ನ ಕಸ, ಮಣ್ಣು, ಹೂಳು ತೆಗೆಸುವಂತೆ ಹಾಗೂ ಇತರೆ ಪರ್ಯಾಯ ವ್ಯವಸ್ಥೆ ಮಾಡಿ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.











Discussion about this post