ಕಲ್ಪ ಮೀಡಿಯಾ ಹೌಸ್ | ಸೊರಬ |
ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕೆಲವರು ಹಣ ವಸೂಲಿಗೆ ಮುಂದಾಗಿದ್ದಾರೆ ಎಂದು ಸಮಿತಿಯ ತಾಲೂಕು ಸಂಚಾಲಕ ಬಸವರಾಜ ಹಸ್ವಿ ಆರೋಪಿಸಿದರು.
ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವರು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕದಸಂಸ ಹೆಸರಿನಲ್ಲಿ ಗ್ರಾಮ ಪಂಚಾಯ್ತಿಗಳಿಗೆ ತೆರಳಿ ಎಸ್-ಎಸ್ಟಿ ಅನುದಾನವನ್ನು ಕೇಳುತ್ತಿದ್ದಾರೆ. ಬುದ್ದ,ಬಸವ, ಅಂಬೇಡ್ಕರ್ ಜಯಂತಿ ಮಾಡುತ್ತೇವೆ ಎಂದು ಗ್ರಾಪಂ ಗಳಲ್ಲಿ 5ಸಾವಿರ ರೂ., ವಂತಿಕೆ ಸಂಗ್ರಹಿಸಲು ಮುಂದಾಗಿದ್ದಾರೆ. ಇವರಿಗೂ ಸಂಘಟನೆಗೂ ಯಾವುದೇ ಸಂಬಂಧ ಇರುವುದಿಲ್ಲ ಹಾಗೂ ಸಂಘಟನೆಯ ಪದಾಧಿಕಾರಿಗಳು ಆಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ಸಮಘಟನೆಯ ಹೆಸರು ಹೇಳಿಕೊಂಡು ಹಣ ವಸೂಲಿ ಮಾಡುವರಿಗೆ ಸಂಘಟನೆಯ ಸಿದ್ಧಾಂತವು ಅರಿವಿಲ್ಲ. ಈ ಹಿಂದೆ ಅಂತವರ ವಿರುದ್ಧ ಪ್ರಕರಣಗಳು ಸಹ ದಾಖಲಾಗಿದೆ ಎಂದ ಅವರು, ತಾಪಂ ಇಒ ಅವರು ಎಲ್ಲಾ ಗ್ರಾಪಂ ಪಿಡಿಒ ಗಳಿಗೆ ಸೂಚನೆ ನೀಡಬೇಕು. ಎಸ್ಸಿ-ಎಸ್ಟಿ ಅನುದಾನ ದುರ್ಬಳಕೆ ಮಾಡದಿರಲು ಹಾಗೂ ಇಂತಹವರಿಗೆ ನೀಡದಿರಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಮಹಿಳಾ ಸಂಚಾಲಕಿ ಗಂಗಾಮಾಳಮ್ಮ, ತಾಲೂಕು ಮಹಿಳಾ ಸಂಚಾಲಕಿ ಚಂದ್ರಕಲಾ, ತಾಲೂಕು ಸಂಘಟನಾ ಸಂಚಾಲಕರಾದ ದಿನೇಶ್ ಹಣಜಿ, ಬೈರಪ್ಪ, ಪ್ರಮುಖರಾದ ಗಣೇಶ್ ಮಲ್ಲಾಪುರ, ಬಸವರಾಜಪ್ಪ ಸಾಲಿಗೆ, ರಮೇಶ್ ನಲ್ಲಿಕೊಪ್ಪ, ಫಕೀರಪ್ಪ ಇದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post