ಕಲ್ಪ ಮೀಡಿಯಾ ಹೌಸ್ | ಉಡುಪಿ |
ಸೀರೆ ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳ ತಾಲೂಕು ನಿಟ್ಟೆ ಗ್ರಾಮ ಕೆಮ್ಮಣ್ಣುವಿನ ಲಕ್ಷ್ಮಿ ಪೂಜಾರಿ ಎಂಬವರ ಮಗಳು ಮಾನ್ವಿ (9) ಮೃತ ಬಾಲಕಿ. ಸಮೀಪದ ಮನೆಯ ಮತ್ತೊಬ್ಬ ಬಾಲಕಿಯ ಜೊತೆ ಚಿಕ್ಕಪ್ಪನ ಮನೆಯಲ್ಲಿ ಸೀರೆಯಲ್ಲಿ ಜೋಕಾಲಿ ಕಟ್ಟಿ ಆಡುತ್ತಿದ್ದ ವೇಳೆ ಸೀರೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಬೈಕ್’ನಲ್ಲಿ ಅನ್ಯ ಕೋಮಿನ ವಿದ್ಯಾರ್ಥಿನಿಯನ್ನು ಕರೆತಂದಿದ್ದಕ್ಕೆ ಹಲ್ಲೆ: ಭದ್ರಾವತಿಯಲ್ಲಿ ನಡೆದಿದ್ದೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post