ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ವಿವರಿಸಿ, ಶಾಲೆಯ ಶಿಕ್ಷಕರು ಮನೆ ಮನೆ ಭೇಟಿ ನೀಡಿ ದಾಖಲಾತಿ ಹೆಚ್ಚಿಸಬೇಕು ಹಾಗೂ ವಿದ್ಯಾರ್ಥಿಗಳ ಮನೆಗಳಿಗೆ ಶಿಕ್ಷಕರು ಬೇಟಿ ನೀಡಿ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣದ ಅರಿವು ಮೂಡಿಸಿ ವಿದ್ಯಾರ್ಥಿಗಳಿಗೆ ಹೆಚ್ಚು ಓದಲು ಪ್ರೋತ್ಸಾಹಿಸಬೇಕು ಎಂದು ಶ್ರೀರಾಂಪುರ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಶ್ರೀಧರ್ ಕರೆ ನೀಡಿದರು.
ಇಂದು ವಿದ್ಯಾಸ್ಪಂದನ ಪುಸ್ತಕ ವಿತರಣೆಯ ದಶಮಾನೋತ್ಸವ ಕಾರ್ಯಕ್ರಮ -2023 ಪ್ರಯುಕ್ತ ವಿದ್ಯಾಸ್ಪಂದನ ಸಂಸ್ಥೆಯ ವತಿಯಿಂದ ಮೈಸೂರಿನ ಪರಸಯ್ಯನ ಹುಂಡಿಯಲ್ಲಿ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮೂವತ್ತಕ್ಕೂ ಹೆಚ್ಚು ಮಕ್ಕಳಿಗೆ ನೋಟ್ ಪುಸ್ತಕ, ಪೆನ್ , ಪೆನ್ಸಿಲ್ ಕಿಟ್ , ಊಟದ ತಟ್ಟೆ ಹಾಗೂ ಚಾಪೆಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ವಿದ್ಯಾಸ್ಪಂದನ ಸಂಸ್ಥೆಯ ಅಧ್ಯಕ್ಷ ಪುನೀತ್ ಜಿ ಮಾತನಾಡಿ, ದಶಮಾನೋತ್ಸವ ಪ್ರಯುಕ್ತ ಹತ್ತು ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಆ ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕ, ಲೇಖನ ಸಾಮಾಗ್ರಿ, ಊಟದ ತಟ್ಟೆ ನೀಡುತ್ತಿದೆ, ವಿದ್ಯಾರ್ಥಿಗಳು ಅದರ ಸದ್ಬಳಕೆ ಮಾಡಿಕೊಂಡು ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಬೇಕು, ಶಾಲೆಗೆ ಪ್ರತಿ ನಿತ್ಯ ಹಾಜರಾಗಿ ವಿದ್ಯಾವಂತರಾಗಬೇಕು, ಶಿಕ್ಷಣದಿಂದ ಮಾತ್ರ ಭಾರತ ಅಭಿವೃದ್ಧಿ ಸಾಧ್ಯ ನೀವೆಲ್ಲ ಉತ್ತಮ ಶಿಕ್ಷಣ ಪಡೆದು ದೇಶದ ಪ್ರಗತಿಯ ಭಾಗವಾಗಬೇಕು ಎಂದು ತಿಳಿಸಿದರು.
Also read: ಆನೆ ದಾಳಿಯಿಂದ 2 ಸಾವು: ಸಚಿವ ಈಶ್ವರ ಖಂಡ್ರೆ ಸಂತಾಪ
ಪಟ್ಟಣ ಪಂಚಾಯಿತಿಯ ಆರೋಗ್ಯಾಧಿಕಾರಿ ಪರಮೇಶ್ವರ್ ಮಾತನಾಡಿ, ಮಕ್ಕಳಿಗೆ ಶುಚಿತ್ವದ ದಿಂದ ಆರೋಗ್ಯ ಸಾಧ್ಯ ಮಕ್ಕಳು ಯಾವಾಗಲೂ ಶುಚಿತ್ವದ ಬಗ್ಗೆ ಗಮನ ಹರಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ಕೆ.ಆರ್. ಗಣೇಶ್, ಅಕುನ ಟೆಕ್ನಾಲಜಿಯ ಪೂಜಾ , ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಜಗದಾಂಬ, ಸಹ ಶಿಕ್ಷಕರು, ಸಿಬ್ಬಂದಿ, ಪೋಷಕರು , ಕ್ಷೇತ್ರ ಸಂಪನ್ಮೂಲ ಅಧಿಕಾರಿ ಅನಿಲ್ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post