ಸಂಸ್ಕಾರ ಸಂಸ್ಕೃತಿ ಕಲಿಸಿಕೊಟ್ಟಂತಹ ಶ್ರೀ ರೇಣುಕಾಂಬ ಶಾಲೆಯಲ್ಲಿ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿದ್ದು ಹೆಮ್ಮೆ ತಂದಿದೆ ಎಂದು ಸ್ಪೂರ್ತಿ ಸ್ನೇಹಿತರ ಬಳಗದ ಅಧ್ಯಕ್ಷೆ ವೀಣಾ ಶಶಿಧರ್ ಹೆಗಡೆ ಹೇಳಿದರು.
ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಿ ಉನ್ನತ ಶಿಕ್ಷಣ ಪಡೆದು ಉತ್ತಮ ನಾಯಕರಾಗಿ ಹೊರಹೊಮ್ಮಬೇಕು. ಮುಂದೆ ಕಲಿಯುವಂತಹ ಮಕ್ಕಳಿಗೆ ಸ್ಪೂರ್ತಿ ಆಗಬೇಕು, ಜೊತೆಗೆ ಶಿಕ್ಷಕ ವೃಂದದವರು ಮಕ್ಕಳನ್ನು ಪ್ರೇರೇಪಿಸಿ ಉತ್ತಮ ಶಿಕ್ಷಣ ನೀಡಬೇಕು ಎಂದರು.
ಶಾಲಾ ಮುಖ್ಯ ಶಿಕ್ಷಕ ಆರ್ ಶಶಿಕುಮಾರ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದಿಂದ ಉತ್ಸಾಹ ಹಾಗೂ ಸಾಧಿಸುವ ಮನೋಭಾವನೆ ಹೆಚ್ಚಾಗುತ್ತಿದೆ. ವಿದ್ಯಾರ್ಥಿ ದಿಸೆಯಲ್ಲಿ ಓದುವುದೇ ಮುಖ್ಯ ಗುರಿಯಾಗಬೇಕು. ವಿದ್ಯಾರ್ಥಿಗಳಲ್ಲಿ ತಾಳ್ಮೆ, ಮತ್ತು ಸಹನೆ ಇದ್ದಾಗ ಮಾತ್ರ ಇಂತಹ ಪ್ರತಿಭಾ ಪುರಸ್ಕಾರ ಗಳಿಸಲು ಸಾಧ್ಯವಾಗುತ್ತದೆ. ಮಕ್ಕಳು ಅಬ್ದುಲ್ ಕಲಾಂ ಅವರ ಆದರ್ಶ ತತ್ವಗಳನ್ನು ಪಾಲನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ ನಟರಾಜ್ ಎಸ್.ಕೆ ಮಾತನಾಡಿ ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಸಮಯದ ಮಹತ್ವವನ್ನು ಅರಿತು ಸತತ ಪ್ರಯತ್ನದಿಂದ ಸಾಧನೆ ಮಾಡಬೇಕು. ಎಂದರು.
ಸ್ಪೂರ್ತಿ ಸ್ನೇಹಿತರ ಬಳಗದಿಂದ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳು ಮಾಡುತ್ತಾ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕೆಲಸ ಕಾರ್ಯಗಳು ಮಾಡುತ್ತೇವೆ.ಪ್ರಶಾಂತ್ ಜೆ.ಎಸ್. ನಾಯ್ಕ್, ಸ್ಫೂರ್ತಿ ಸ್ನೇಹಿತರ ಬಳಗದ ಸಂಘಟನಾ ಕಾರ್ಯದರ್ಶಿ
ಸ್ಪೂರ್ತಿ ಸ್ನೇಹಿತರ ಬಳಗದ ಉಪಾಧ್ಯಕ್ಷ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಪ್ರಶಾಂತ್ ಜೆ.ಎಸ್ ನಾಯ್ಕ್, ಸ್ಪೂರ್ತಿ ಸ್ನೇಹಿತರ ಬಳಗದವರಾದ ಶ್ರೀದೇವಿ, ಶ್ರೀಧರ್, ಶರದ್ ನಾಯಕ್, ಗೋಪಿ, ದೇವರಾಜ್ ಚಿಕ್ಕಮಾಕೊಪ್ಪ, ಪ್ರಕಾಶ್, ಸಣ್ಣಪ್ಪ, ರೇಣುಕಾ ಬೆನ್ನೂರು, ಸೇರಿದಂತೆ ಶ್ರೀ ರೇಣುಕಾಂಬ ಪ್ರೌಢಶಾಲೆ ಶಿಕ್ಷಕರು ಉಪಸ್ಥಿತರಿದ್ದರು.ವರದಿ: ಮಧುರಾಮ್, ಸೊರಬ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















