Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕಿತ್ತುಕೊಳ್ಳುತ್ತಿದೆ ಕಾಂಗ್ರೆಸ್‌ ಸರ್ಕಾರ: ಸಂಸದ ರಾಘವೇಂದ್ರ

June 16, 2023
in ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕಾಂಗ್ರೆಸ್‌ ಸರಕಾರ ಗ್ಯಾರೆಂಟಿ ನೆಪದಲ್ಲಿ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕಿತ್ತುಕೊಳ್ಳುವ ಕಾರ್ಯವನ್ನು ಮಾಡುತ್ತಿದೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ #BYRaghavendra ಆಪಾದಿಸಿದರು.

ನರೇಂದ್ರ ಮೋದಿ #NarendraModi ಅವರ ನೇತೃತ್ವದ ಕೇಂದ್ರ ಸರಕಾರಕ್ಕೆ 9 ವರ್ಷ ತುಂಬಿದ ಸಂದರ್ಭದಲ್ಲಿ ಅವರು ಶುಕ್ರವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್‌ನ #Congress ಯಾವುದೇ ಭಾಗ್ಯದ ಬಗ್ಗೆ ಬೇಸರವಿಲ್ಲ, ಜನರಿಗೆ ಅವೆಲ್ಲವೂ ತಲುಪಬೇಕು. ಆದರೆ, ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕೊಡುವಂತದ್ದು ಸರಿ ಅಲ್ಲ. ವಿದ್ಯುತ್‌ ಯುನಿಟ್‌ ದರವನ್ನು ಹೆಚ್ಚಳ ಮಾಡಿರುವುದಲ್ಲದೇ, 200ರ ಬದಲು 201 ಯುನಿಟ್‌ ಬಳಕೆ ಮಾಡಿದರೂ ಪೂರ್ಣ ದರವನ್ನು ಕಟ್ಟಿಸಿಕೊಂಡು ಸಬ್ಸಿಡಿಯನ್ನು ಕಿತ್ತುಕೊಳ್ಳುವ ಕೆಲಸವನ್ನು ಸರಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಕೆಇಬಿ ಕಚೇರಿಗಳಿಗೆ ಮುತ್ತಿಗೆ ಹಾಕುವ ಕೆಲಸವನ್ನು ಬಿಜೆಪಿ #BJP ಆರಂಭ ಮಾಡಿದೆ ಎಂದರು.

ಪಕ್ಷದ ಕಾರ್ಯಕರ್ತರ ನೇತೃತ್ದಲ್ಲಿ ಸಂಪರ್ಕ್‌ ಸೆ ಸಮರ್ಥನ್‌ ಕಾರ್ಯಕ್ರಮದಡಿ ಕಾರ್ಯಕರ್ತರು, ಸಂಘಟನೆಯ ಹಿತೈಷಿಗಳನ್ನು, ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡುವಂತಹ ವಿಶೇಷ ಕಾರ್ಯಕ್ರಮ ಇಡೀ ದೇಶಾದ್ಯಂತ ಈಗಾಗಲೇ ಹಮ್ಮಿಕೊಳ್ಳಲಾಗಿದೆ. ಈ ಮುಖಾಂತರ ಕೇಂದ್ರ ಸರಕಾರದ ಸಾಧನೆಗಳನ್ನು ಚರ್ಚೆ ಮಾಡಿ ಜನಸಾಮಾನ್ಯರಿಗೆ ಮುಟ್ಟಿಸುವಂತಹ ಕಾರ್ಯವನ್ನು ಮಾಡಲಾಗುತ್ತಿದೆ. ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡ ಪ್ರದೇಶಗಳಲ್ಲಿ ಭೇಟಿ ನೀಡಿ, ಅಪೂರ್ಣಗೊಂಡ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರೈಸುವ ನಿಟ್ಟಿನಲ್ಲಿ ಹಾಗೂ ಚುನಾಯಿತ ಪ್ರತಿನಿಧೀಗಳ ನೇತೃತ್ವದಲ್ಲಿ ವಿಕಾಸ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಭದ್ರಾವತಿಯ #Bhadravathi ಬುಳ್ಳಾಪುರ ಗ್ರಾಮದಲ್ಲಿ 50.29 ಎಕರೆ ಪ್ರದೇಶದಲ್ಲಿ ರಾಪಿಡ್‌ ಆಕ್ಷನ್‌ ಫೋರ್ಸ್‌ #RAF ಸ್ಥಾಪನೆಗೆ ಕೇಂದ್ರ ಗೃಹ ಮಂತ್ರಿ ಅಮಿತ್‌ ಷಾ ಅವರು ಈಗಾಗಲೇ ಭೂಮಿ ಪೂಜೆ ನೆರವೇರಿಸಿದ್ದರು. ಈ ರಾಪಿಡ್‌ ಅಕ್ಷನ್‌ ಫೋರ್ಸ್‌ ಕರ್ನಾಟಕದ 31 ಜಿಲ್ಲೆಗಳನ್ನೊಳಗೊಂಡಿದ್ದಷ್ಟೇ ಅಲ್ಲದೇ, ಕೇರಳದ 4 ಜಿಲ್ಲೆಗಳು, ಗೋವಾದ 2 ಜಿಲ್ಲೆಗಳು, ಲಕ್ಷದ್ವೀಪದ 1 ಜಿಲ್ಲೆ ಹಾಗೂ ಪುದುಚೆರಿಯ 1 ಜಿಲ್ಲೆಗಳ ವ್ಯಾಪ್ತಿಯನ್ನು ಸಹ ಒಳಗೊಂಡಿರುತ್ತದೆ. ಕಮಾಂಡೆಂಟ್‌, ಡೆಪ್ಯುಟಿ ಕಮಾಂಡೆಂಟ್‌ ಸೇರಿದಂತೆ ಒಟ್ಟು 445 ಜನ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

2009ಕ್ಕೂ ಮೊದಲು ಕೇವಲ 8-10 ಟ್ರೇನುಗಳು ಮಾತ್ರ ಓಡಾಟ ಇತ್ತು. ಇದೀಗ 28 ಟ್ರೇನುಗಳ ಟ್ರಿಪ್‌ ಓಡಾಟ ಆರಂಭವಾಗಿದೆ. ಎರಡು ರೈಲ್ವೆ ಓವರ್‌ ಬ್ರಿಡ್‌್ಜ ನಿರ್ಮಾಣವಾಗಿದ್ದು (ಭದ್ರಾವತಿ ತರೀಕೆರೆ ರಸ್ತೆಯಲ್ಲಿ, ಶಿವಮೊಗ್ಗ-ಹೊನ್ನಾಳಿ ರಸ್ತೆಯಲ್ಲಿ), ಇನ್ನೂ ನಾಲ್ಕು ರೈಲ್ವೆ ಓವರ್‌ ಬ್ರಿಡ್ಜ್ ನಿರ್ಮಾಣ ಆಗಲಿದೆ ಎಂದು ಮಾಹಿತಿ ನೀಡಿದರು.
ರಾ.ಹೆ.206 ತುಮಕೂರಿನಿಂದ ಶಿವಮೊಗ್ಗವರೆಗಿನ 214.45 ಕಿ.ಮೀ ಉದ್ದದ 4 ಪಥದ ರಸ್ತೆಯ ನಿರ್ಮಾಣ ರೂ. 7162 ಕೋಟಿ, ರಾ.ಹೆ. 13 ಚಿತ್ರದುರ್ಗ ಶಿವಮೊಗ್ಗ ರಸ್ತೆಯ ಬಾಕಿ ಉಳಿದ ಉಮಗಾರಿಗಳು 5169 ಕೋಟಿ ರೂ.ಕಾಮಗಾರಿ ಪ್ರಾರಂಭಗೊಂಡು ಶೇ 10ರಷ್ಟು ಕೆಲಸ ಮುಗಿದಿದ್ದು ಹೊಳೆಹೊನ್ನೂರಿನ ಬೈಪಾಸ್‌ ರಸ್ತೆ ಮತ್ತು ಭದ್ರಾನದಿಗೆ ಸೇತುವೆ ಸೇರಿದಂತೆ ಕೈಮರದಿಂದ ಶಿವಮೊಗ್ಗವರೆಗಿನ #Shivamogga ರಸ್ತೆ ಕೆಲಸ ಪ್ರಗತಿಯಲ್ಲಿವೆ. ರಾಷ್ಟ್ರೀಯ ಹೆದ್ದಾರಿ 206 ತುಮಕೂರು-ಶಿವಮೊಗ್ಗ ರಸ್ತೆ, ತುಮಕೂರಿನಿಂದ ಶಿವಮೊಗ್ಗ ವರೆಗಿನ ಹೆದ್ದಾರಿಯ 4 ಪಥದ ರಸ್ತೆ ನಿರ್ಮಾಣದ ಕೆಲಸ ಪ್ರಗತಿಯಲ್ಲಿದ್ದು, ಶಿವಮೊಗ್ಗದಿಂದ ತಾಳಗುಪ್ಪ ಚೂರಿಕಟ್ಟೆ ಜಂಕ್ಷನ್‌ ವರೆಗೆ ಸುಮಾರು 80 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲು ಈ ಕೆಳಗಿನಂತೆ ಡಿಪಿಆರ್‌ ತಯಾರಿಸಲಾಗುತ್ತಿದೆ ಎಂದರು.

Also read: ಹರಿದಾಸರ ಮಿಲನ, ದಾಸೋಪಾಸನ ಹಾಗೂ ಚಿಪ್ಪಗಿರಿ ವಿಜಯದಾಸರ ಸೇವಾ ಬಳಗ ವಾರ್ಷಿಕೋತ್ಸವ

ಭದ್ರಾವತಿ ವಿಐಎಸ್‌’ಎಲ್‌ #VISL ಕಾರ್ಖಾನೆಯನ್ನು ಬಂಡವಾಳ ಹೂಡಿಕೆ ಪಟ್ಟಿಯಿಂದ ಹಿಂಪಡೆದಿದ್ದನ್ನು ರದ್ದುಪಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹಾಕಿದ್ದರ ಪರಿಣಾಮ ಕೇಂದ್ರ ಸರ್ಕಾರ ವಾಪಸು ಪಡೆದಿದೆ. ಕೆಲವು ಸಣ್ಣಪುಟ್ಟ ಯುನಿಟ್‌ಗಳನ್ನು ಫೋರ್ಜ್‌ ಯುನಿಟ್‌ಗಳನ್ನು ಪ್ರಾರಂಭಿಸಲಾಗಿದ್ದು, ಉತ್ತಮ ಆದಾಯ ಬರುವಂತಾಗಿದೆ ಎಂದರು.
ಸಂಸತ್‌ ಸದಸ್ಯರ ಪ್ರದೇಶಾಭಿವೃದ್ಧಿ ಯೋಜನೆಯಡಿ ಒಟ್ಟಾರೆ 37 ಕೋಟಿ ವೆಚ್ಚದಲ್ಲಿ ಅಂದಾಜು 1000ಕಾಮಗಾರಿಗಳ ಅನುಷ್ಠಾನಕ್ಕೆ ಕ್ರಮ. (ಪ್ರಯಾಣಿಕರ ತಂಗುದಾಣ, ಹೈಮಾಸ್ಟ್ ಲೈಟ್ಸ್ ಸಮುದಾಯಭವನಗಳು, ರಸ್ತೆ, ಶಾಲೆಗಳಲ್ಲಿ ಕುಡಿಯುವ ನೀರಿನ ಘಟಕಗಳು, ಸ್ಮಶಾನ ಅಭಿವೃದ್ಧಿ, ಪಾರ್ಕ್‌ ಅಭಿವೃದ್ಧಿ, ರೈತ ಸಹಕಾರಿ ಸಂಘಗಳ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳು, ಭದ್ರಾವತಿಯಲ್ಲಿ 2 ಡಿಸ್ಪೆನ್ಸರಿಗಳನ್ನು ಪ್ರಾರಂಭಿಸಲಾಗಿದೆ, ಮತ್ತಿತರೆ ಅಭಿವೃದ್ಧಿ ಕಾರ್ಯ). ಹೀಗೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದರು.

ಈಗ ರಾಜ್ಯದಲ್ಲಿ ಬಿಜೆಪಿಗೆ ಹಿನ್ನಡೆ ಆಗಿರುವುದು ತಾತ್ಕಾಲಿಕ ಮಾತ್ರ. ಈ ಸಂದರ್ಭ ಕಾಂಗ್ರೆಸ್‌ ಸರಕಾರ ಮಾಡುತ್ತಿರುವು ಘೋಷಣೆಗಳು ಹಾಗೂ ತೆಗೆದುಕೊಳ್ಳುವಂತಹ ನಿಲುವುಗಳು ಎಲ್ಲ ವೂ ಅಚ್ಚರಿಯಾಗಿದೆ. ದೇಶದ ಹಿತ ದೃಷ್ಟಿಯಿಂದ ಮಹಾನ್‌ ನಾಯಕ ಸಾವರ್ಕರ್‌ ಅವರ ಇತಿಹಾಸ ಪುಟದಿಂದ ಮುಚ್ಚಿಡುವಂತಹ ಕೆಲಸವನ್ನು ಕಾಂಗ್ರೆಸ್‌ ಮಾಡಿತ್ತು. ಅದನ್ನು ಸೇರಿಸುವಂತಹ ಕೆಲಸವನ್ನು ಬಿಜೆಪಿ ಸರಕಾರ ಮಾಡಿದಾಗ, ಈಗ ಕಾಂಗ್ರೆಸ್‌ ಸರಕಾರ ತೆಗೆಯುವ ಕೆಲಸವನ್ನು ಮಾಡುತ್ತಿದೆ. ಇದರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಥವಾ ಬಿಜೆಪಿಯ ಸಿದ್ಧಾಂತಗಳಿಲ್ಲ, ಇವರು ಬ್ರಿಟೀಷರ ವಿರುದ್ಧ ಗುಂಡಿಗೆ ಎದೆಗೊಟ್ಟು ದೇಶದ ರಕ್ಷಣೆಗೋಷ್ಕರ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಮಹಾನ್‌ ನಾಯಕರ ಪಾಠವನ್ನು ತೆಗೆದು ಹಾಕುವ ಕೆಲಸ ನಿಜಕ್ಕೂ ಖಂಡನೀಯ, ಅಲ್ಲದೇ ಗೋ ಹತ್ಯೆಯನ್ನು ನಿಷೇಧ ಕಾಯಿದೆ ರದ್ದಗೊಳಿಸುವ ಕುರಿತು ಪಶು ಸಂಗೋಪನಾ ಸಚಿವರು ಹೇಳಿರುವುದು ದೌರ್ಭಾಗ್ಯ. ಕಾಂಗ್ರೆಸ್‌ ಹೀಗೆ ದ್ವೇಷದ ಕಾರಣವನ್ನು ಮಾಡಿದರೆ ಮತ್ತೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂತರೆ ಅನುಮಾನ ಇಲ್ಲ ಎಂದರು.

http://kalpa.news/wp-content/uploads/2023/05/VID-20230516-WA0005-1.mp4

 

ರಾಜ್ಯದ ಎಲ್ಲ ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ಬಸ್‌ ಸಂಚಾರವನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಭದ್ರಾವತಿ ಕ್ಷೇತ್ರ ಬಿಜೆಪಿ ಉಸ್ತುವಾರಿ ಅಶೋಕ್‌ ಮೂರ್ತಿ, ಜಿಲ್ಲಾ ಬಿಜೆಪಿ ಮುಖಂಡರಾದ ಡಾ.ಧನಂಜಯ ಸರ್ಜಿ, ಮಂಗೋಟೆ ರುದ್ರೇಶ್‌, ಧರ್ಮಪ್ರಸಾದ್‌, ಪ್ರಧಾನ ಕಾರ್ಯದರ್ಶೀ ಶ್ರೀನಾಥ್‌, ಕೂಡ್ಲಿಗೆರೆ ಹಾಲೇಶ್‌ ಮತ್ತಿತರರು ಹಾಜರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಹರಿದಾಸರ ಮಿಲನ, ದಾಸೋಪಾಸನ ಹಾಗೂ ಚಿಪ್ಪಗಿರಿ ವಿಜಯದಾಸರ ಸೇವಾ ಬಳಗ ವಾರ್ಷಿಕೋತ್ಸವ

Next Post

ಹೆಣ್ಣು ಕೊಟ್ಟ ಅತ್ತೆಗೆ ಚಾಕು ಇರಿದು ಕೊಲೆಗೆ ಯತ್ನ: ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೆಣ್ಣು ಕೊಟ್ಟ ಅತ್ತೆಗೆ ಚಾಕು ಇರಿದು ಕೊಲೆಗೆ ಯತ್ನ: ಕಾರಣವೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!