ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಮಗೆ ಓದಿನಲ್ಲಿರುವ ಆನಂದ ಮೊಬೈಲ್ ನಲ್ಲಿ ಸಿಗುವುದಿಲ್ಲ ಮೊಬೈಲ್ ಆರೋಗ್ಯವನ್ನು ಕ್ಷೀಣಿಸಿದರೆ ಸಾಹಿತ್ಯ ನಮ್ಮ ಆರೋಗ್ಯಯುತ ವ್ಯಕ್ತಿತ್ವ ಹೆಚ್ಚಿಸುತ್ತದೆ ಎಂದು ಖ್ಯಾತ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅಭಿಪ್ರಾಯಪಟ್ಟರು.
ಮಂಗಳವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತಮಹೋತ್ಸವ ಸಮಾರೋಪ ಸಮಾರಂಭ ‘ಎನ್ಇಎಸ್ ಹಬ್ಬ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ತುಮಕೂರು ವಿಶ್ವವಿದ್ಯಾಲಯ ಕುಲಸಚಿವರಾದ ಪ್ರೊ. ವೆಂಕಟೇಶ್ವರಲು ಮಾತನಾಡಿ, ಭಾರತಕ್ಕೆ ಬೇಕಾಗಿರುವುದು ಸುಸಂಸ್ಕೃತ ಶಿಕ್ಷಣ. ಯಾವುದೇ ಸಾಧನೆಯ ಮೂಲ ಶಿಕ್ಷಣ. ಅಂತಹ ಶಿಕ್ಷಣದ ಪ್ರಾಕಾರಗಳು ಹೊಸತನದೆಡೆಗೆ ಸಾಗುತ್ತಿದೆ. ಜಾಗತಿಕ ವಿದ್ಯಾರ್ಥಿ ಸಮೂಹದಲ್ಲಿರುವ ಶೇ.50 ರಷ್ಟು ವಿದ್ಯಾರ್ಥಿಗಳು ಭಾರತೀಯರು ಎಂಬ ಹೆಗ್ಗಳಿಕೆಯಿದೆ ಎಂದು ಹೇಳಿದರು.

Also read: ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡಿನ ಸಂಗತಿ: ಮಾಜಿ ಸಚಿವ ಈಶ್ವರಪ್ಪ
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಎನ್ಇಎಸ್ ಕ್ರೀಡೋತ್ಸವದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಎನ್ಇಎಸ್ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.











Discussion about this post