ಪತ್ರಿಕಾ ವಿತರಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಇಂದು ಪತ್ರಿಕಾ ವಿತರಕರ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪತ್ರಿಕಾ ವಿತರಕರು ಮತ್ತು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಸಲುವಾಗಿ 2018-19ರ ಬಜೆಟ್ನಲ್ಲಿ ನಾಮಕಾವಸ್ತೆಗೆ ಎರಡು ಕೋಟಿ ಮೀಸಲಿಟ್ಟಿದ್ದು ಇದುವರೆಗೂ ಯಾವುದೇ ಸೌಲಭ್ಯಗಳನ್ನು ಪತ್ರಕರ್ತರಿಗೆ ಮತ್ತು ಪತ್ರಿಕಾ ವಿತರಕರಿಗೆ ವಿತರಿಸಿದ ಇರುವುದು ವಿಷಾಧನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸರ್ಕಾರ ಕೂಡಲೇ ಕ್ಷಮಾಭಿವೃದ್ಧಿ ನಿಧಿ ಸ್ಥಾಪಿಸುವ ಮೂಲಕ ಪತ್ರಿಕಾ ವಿತರಕರ ಬೇಡಿಕೆಗಳನ್ನು ಈಡೇರಿಸಬೇಕು. ದಿನಪತ್ರಿಕೆ ಹಂಚಲು ಇವಿಎಂ ಬೈಕ್ ಅಥವಾ ಮೊಪೆಡ್ ತೆಗೆದುಕೊಳ್ಳಲು ಸಾಲ ಸೌಲಭ್ಯ ಕೊಡಿಸಬೇಕು. ಪತ್ರಿಕೆ ಹಂಚುವ ಸಮಯದಲ್ಲಿ ಮೃತಪಟ್ಟಲ್ಲಿ 5 ಲಕ್ಷ ಸಹಾಯಧನ ನೀಡಬೇಕು ಅಪಘಾತವಾದಾಗ ಆಸ್ಪತ್ರೆಯ ವೆಚ್ಚ ಭರಿಸಬೇಕು ಎಂದು ಮನವಿದಾರರು ಆಗ್ರಹಿಸಿದರು.
Also read: ರೈತರು ಅಡಿಕೆ ತೋಟದಲ್ಲಿ ಉಪಬೆಳೆ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಿ: ಬಿ.ಎಸ್. ಮಹಾಬಲೇಶ್ವರ ಕರೆ
ಪತ್ರಕರ್ತರು ಮತ್ತು ಪತ್ರಿಕಾ ವಿತರಕರ ಕುಟುಂಬಕ್ಕೆ ಯಾವುದೇ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಬೇಕು. ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು.
ಪತ್ರಕರ್ತರು ಮತ್ತು ಪತ್ರಿಕಾ ವಿತರಕರು 65 ವರ್ಷ ಮೇಲ್ಪಟ್ಟವರಿಗೆ ಸರ್ಕಾರ ಗೌರವಿಸಿ ಪಿಂಚಣಿ ವ್ಯವಸ್ಥೆ ಮಾಡಬೇಕು. ಮತ್ತು ಅಳಿವಿನ ಅಂಚಿನಲ್ಲಿರುವ ಪತ್ರಿಕಾ ರಂಗಕ್ಕೆ ಸರ್ಕಾರ ಸಬ್ಸಿಡಿ ನೀಡುವ ಮೂಲಕ ಉತ್ತೇಜನ ನೀಡಿ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಖಾಸಗಿ ಶಾಲಾ ಕಾಲೇಜುಗಳಲ್ಲೂ ಕೂಡ ಪತ್ರಿಕೆ ಸರಬರಾಜು ಮಾಡಲು ಆದೇಶ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್, ಪ್ರಮುಖರಾದ ಹುಲಿಗಿ ಕೃಷ್ಣ ಶಿಕಾರಿಪುರ, ಪರಶುರಾಮ್ ರಾವ್ ಭದ್ರಾವತಿ, ಗಜೇಂದ್ರ ಶಿಕಾರಿಪುರ, ವೆಂಕಟೇಶ್, ಶಿವಮೊಗ್ಗ ಮಲ್ಲಿಕಾರ್ಜುನ್, ಹಿರಿಯ ಪತ್ರಿಕಾ ವಿತರಕ ಮುಸ್ತಫ, ಪ್ರಧಾನ ಕಾರ್ಯದರ್ಶಿ ನಜೀರ್ ರಾಮು ದುರ್ಗೋಜಿ ಮುಂತಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post