ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ಶಿಸ್ತುಬದ್ದ ನಡವಳಿಕೆ ಅಳವಡಿಸಿಕೊಂಡಾಗ ಜೀವನದಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಕರೆ ನೀಡಿದರು.
ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ ನಡೆದ ಇನ್ವೆಸ್ಪೀಚರ್ ಸೆರಮನಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಆರೋಗ್ಯಕರ ವಾತಾವರಣವನ್ನು ಸೃಷ್ಟಿಸಿ, ಶಿಸ್ತುಬದ್ಧವಾದ ನಡವಳಿಕೆಯನ್ನು ಕಾಯ್ದುಕೊಂಡು ನಿಮ್ಮ ಅಮೂಲ್ಯವಾದ ಜವಾಬ್ದಾರಿಗಳನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸಿಕೊಂಡು ಸದಾ ಚಟುವಟಿಕೆಯಿಂದ ಲವಲವಿಕೆಯಿಂದ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ನಾಯಕರನ್ನು ಹುರಿದುಂಬಿಸಿದರು.
ಇತ್ತೀಚಿನ ದಿನಗಳಲ್ಲಿ ಚುನಾವಣೆಯ ಮಹತ್ವವೇನು? ನಾಯಕರಗುಣ, ನಡವಳಿಕೆ, ಹೊಣೆಗಾರಿಕೆ, ಜವಾಬ್ದಾರಿಗಳೇನು ಎಂಬುದನ್ನು ಮನವರಿಕೆ ಮಾಡಿಸುವ ಮೂಲಕ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.
ವಿದ್ಯಾರ್ಥಿ ಸಂಘದ ನಾಯಕ, ನಾಯಕಿ, ಶಾಲಾ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ, ಕ್ರೀಡಾ ನಾಯಕ, ಉಪ ನಾಯಕ ಇಂಟರ್ ಹೌಸ್ ಗಳಾದ ಶಕ್ತಿಹೌಸ್ ನ ನಾಯಕ, ಉಪನಾಯಕ, ವಿಶ್ವಾಸ್ ಹೌಸ್ ನಾಯಕ ಉಪನಾಯಕ ಸಿದ್ದಂತ್ನ ನಾಯಕ, ಉಪನಾಯಕ, ನಿಶ್ಚಯ್ಹೌಸ್ ನಾಯಕ, ಉಪನಾಯಕರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬ್ಯಾಡ್ಜಿಂಗ್ ನೀಡುವ ಮೂಲಕ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಮಾಡಿಕೊಡಲಾಯಿತು.
Also read: ಸನಾತನ ಹಬ್ಬಕ್ಕೆ ಜಾಗತಿಕ ಮನ್ನಣೆ: ದೀಪಾವಳಿಗೆ ನ್ಯೂಯಾರ್ಕ್ ಶಾಲೆಗಳಿಗೆ ರಜೆ ಘೋಷಣೆ
ಶಾಲೆಯ ಪ್ರಾಂಶುಪಾಲರಾದ ಪ್ರಿಯದರ್ಶಿನಿ, ಶಾಲಾ ಸಂಯೋಜಕರಾದ ದಿವ್ಯಶೆಟ್ಟಿ, ಶಾಲೆಯ ಸಿಒಒ ಸುಮಂತ್, ಸೌಲಭ್ಯ ವ್ಯವಸ್ಥಾಪಕರಾದ ವಿಜಯ್ ಕುಮಾರ್,ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು,ಆಡಳಿತ ಮತ್ತು ಆಡಳಿತೇತರ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post