ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಮೀನು ವ್ಯಾಜ್ಯದಲ್ಲಿ ಕನ್ನಡ ಚಲನಚಿತ್ರ ನಟಿ ಅನಿತಾ ಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ.
ಚಲನಚಿತ್ರ ಮತ್ತು ಕಿರುತೆರೆಯಲ್ಲಿ ಅಭಿನಯಿಸಿರುವ ನಟಿ ಅನಿತಾ ಗೌಡ ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿಯಾದ ಇವರಿಗೆ ಸಾಗರ ತಾಲೂಕಿನ ಕಾಸ್ಪಡಿಯಲ್ಲಿ ಜಮೀನು ಇತ್ತು. ಆ ಜಮೀನ ಅನುಗೌಡ ರವರ ಅಪ್ಪ ಅಮ್ಮ ವಾಸವಾಗಿದ್ದರು. ಜಮೀನಿನ ವಿಚಾರದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ವ್ಯಾಜ್ಯವಿದ್ದು ಇದೇ ವಿಚಾರದಲ್ಲಿ ಅನೂ ಗೌಡ ಅವರಿಗೆ ಸ್ಥಳೀಯ ನಿವಾಸಿಗಳು ಮಾರಣಾಂತಿಕ ವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ನಟಿ ಅನು ಗೌಡ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post