ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರ ಹೆಸರು ಇಂದೇ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಕೇಂದ್ರದ ನಾಯಕರು ಆಗಮಿಸಿ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ, Amith Shah ಪ್ರಧಾನಿ ನರೇಂದ್ರ ಮೋದಿ PM Narendra Modi ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಇಂದೇ ಘೋಷಣೆಯಾಗುವ ಸಾಧ್ಯತೆಗಳಿದ್ದು, ರಾಷ್ಟ್ರೀಯ ಮಖಂಡರ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು.
Also read: ಆರೋಗ್ಯದ ಅರಿವು ಜೊತೆಗೆ ಸಾಮಾಜಿಕ ಸೇವೆಯಲ್ಲಿ ನಿರತ ಐಎಂಎ ಕಾರ್ಯ ಶ್ಲಾಘನೀಯ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















