ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮ್ಯಯ್ಯ CM Siddaramaiah ಬಜೆಟ್ ಮಂಡಿಸುತ್ತಿದ್ದಾರೆ.
ಅಭಿವೃದ್ಧಿ, ಸಾಮಾಜಿಕ ನ್ಯಾಯ, ಸಾರ್ವಜನಿಕ ಸೇವೆ, ಆರ್ಥಿಕ ಅಭಿವೃದ್ಧಿ, ಮೂಲಭೂತ ಸೌಕರ್ಯ ಅಭಿವೃದ್ಧಿ ನಮ್ಮ ಸರ್ಕಾರದ ಧ್ಯೇಯೋದೇಶ ಎಂದು ಹೇಳುತ್ತಾ ಮುಖ್ಯಮಂತ್ರಿ ಸಿದ್ಧರಾಮಯ್ಯ 3.27 ಲಕ್ಷ ಕೋಟಿ ಗಾತ್ರದ ಬೃಹತ್ ಬಜೆಟ್ನ್ನು ಮಂಡಿಸಿದರು.
ಪ್ರಸುತ ಸಾಲಿನ ಬಜೆಟ್ನಲ್ಲಿ ಅಬಕಾರಿ ತೆರಿಗೆಯನ್ನು ಶೇ.20ರಷ್ಟು ಹೆಚ್ಚಿಸಲಾಗಿದ್ದು, ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇ.10ರಷ್ಟು ಏರಿಸಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.
ಆಗಸ್ಟ್ನಲ್ಲಿ ಗೃಹಜ್ಯೋತಿ ಯೋಜನೆ ಜಆರಿಯಾಗಲಿದ್ದು, ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಬೆಲೆ ಏರಿಕೆಯಿಂದ ಕಂಗಾಲದ ಜನರಿಗೆ ನಿರಾಳತೆ ತಂದು ಕೊಡುತ್ತೇವೆ ಹಾಗೂ ಯುವ ನಿಧಿ ಯೋಜನೆ ಮೂಲಕ ಯುವಕರ ಆತ್ಮವಿಶ್ವಾಸ ಹೆಚ್ಚಿಸುತ್ತಾ ಜನರ ಕನಸಿಗೆ ಬಲ ನೀಡುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಬಜೆಟ್ನ ಅಂಕಿ-ಅಂಶ
- ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ
- ನಮ್ಮ ಮೆಟ್ರೋಗೆ 30,000ಕೋಟಿ
- ಕೃಷಿ ಉದ್ಯಮ ಉತ್ತೇಜನಕ್ಕೆ ನವೋದ್ಯಮ ಯೋಜನೆಗೆ 10 ಕೋಟಿ
- ಕೃಷಿ ಭಾಗ್ಯ ಯೋಜನೆಗೆ ಮನ್ರೇಗಾ ಅಡಿಯಲ್ಲಿ 100ಕೋಟಿ
- ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ
- ರೈತರಿಗೆ 3ಲಕ್ಷದಿಂದ 5ಲಕ್ಷದವರೆಗೆ ಅಲ್ಪಾವಧಿ ಸಾಲ
- ಇಂದಿರಾ ಕ್ಯಾಂಟೀನ್ಗೆ 100 ಕೋಟಿ ರಊ.
- ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರ್ಯಾಂಡಿಂಗ್ಗೆ ೧೦ ಕೋಟಿ ರೂ.
- ಕಿರು ಆಹಾರ ಸಂಸ್ಕರಣಾ ಉದ್ದಿಮಿದಾರರಿಗೆ 5 ಕೋಟಿ ರೂ.
- ರೈತರಿಗೆ ಶೂನ್ಯ ಬಡ್ಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
- ಮಧ್ಯಮಾವದಿ, ದೀರ್ಘಾವಧಿ ಸಾಲ ಮಿತಿ 10 ಲಕ್ಷದಿಂದ 15ಲಕ್ಷಕ್ಕೆ ಹೆಚ್ಚಳ
- ಗುಡ್ಡಗಾಡು ಪ್ರದೇಶದ ರೈತರಿಗೆ ಪಿಕ್ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ
- ಹಿಂದಿನ ಸರ್ಕಾರ ನೀರಾವರಿ ಯೋಜನೆಯನ್ನು ಕೈ ಬಿಡಲು ನಿರ್ಧಾರ
- 19 ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 770 ಕೋಟಿ ರೂ. ಮೀಸಲು
- ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ
- ಎತ್ತಿನಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಅನುದಾನ
- ಮೇಕೆದಾಟು ಯೋಜನೆಯ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ
- ಬೆಂಗಳೂರಿಗೆ 45,000 ಕೋಟಿ ಅನುದಾನ ಘೋಷಣೆ
- ಬೆಂಗಳೂರು ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ ನಗರೋತ್ಥಾನ, ತ್ಯಾಜ್ಯ ನಿರ್ವಹಣೆಗೆ ಮೀಸಲು
- ರಾಜಕಾಲುವೆ ತೆರವು ಮತ್ತು ದುರಸ್ತಿಗೆ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೇ ಯೋಜನೆಗೆ ಅನುದಾನ
- ಬ್ರ್ಯಾಂಡ್ ಬೆಂಗಳೂರಿಗೆ ಆದ್ಯತೆ ನೀಡಲು 45 ಸಾವಿರ ಕೋಟಿ ರೂ. ಅನುದಾನ
- ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ
- ಕೊಪ್ಪಳ, ಕಾರವಾರ ಕೊಡಗು ಜಿಲ್ಲಾಸ್ಪತ್ರೆಯ ಉನ್ನತೀಕರಣಕ್ಕೆ ನಿರ್ಧಾರ
- ಮೈಸೂರು ಮತ್ತು ಕಲಬುರಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ ಸೆಂಟರ್
- ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ
- ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
- ಶಕ್ತಿ ಯೋಜನೆಗೆ ವಾರ್ಷಿಕ 4 ಸಾವಿರ ಕೋಟಿ
- ಗೃಹಜ್ಯೋತಿ ಯೋಜನೆಗೆ 13,910 ಕೋಟಿ ಅನುದಾನ
- ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮ
- ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ‘ಮರುಸಿಂಚನ’ ಎಂಬ ಹೊಸ ಯೋಜನೆ
- ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ ದಿಂದ 45,000 ರೂ. ಗಳವರೆಗೆ ಹೆಚ್ಚಳ
- 47,272 ಶಾಲೆಗಳು ಹಾಗೂ 1231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆ 153 ಕೋಟಿ ರೂ. ಅನುದಾನ
- ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು.
- ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ. ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು.
ಹಿಂದಿನ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ್ದ ಅನುಗ್ರಹ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಕುರಿ ಮತ್ತು ಮೇಕೆಗಳು ಮೃತಪಟ್ಟರೆ 5000ರೂ. ಪರಿಹಾರ ಹಾಗೂ ಹಸು, ಎಮ್ಮೆ, ಎತ್ತುಗಳಿಗೆ 10,000ರೂ. ಪರಿಹಾರ ಹಾಗೂ ಎಪಿಎಂಸಿ ಕಾಯಿದೆ ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post