ಕಲ್ಪ ಮೀಡಿಯಾ ಹೌಸ್ | ಸೊರಬ |
ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಾ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಮಾಡಿರುವುದು ಖಂಡನೀಯ ಎಂದು ವಿಹಿಂಪ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ಆರೋಪಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ವಿಹಿಂಪ, ಬಜರಂಗದಳ ಹಾಗೂ ಯುವಾ ಬ್ರಗೇಡ್ ವತಿಯಿಂದ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಟಿ. ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಅವರನ್ನು ಹತ್ಯೆ ಮಾಡಿರುವುದು ಖಂಡನೀಯವಾಗಿದೆ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಅತ್ಯಂತ ದುಃಖದ ಹಾಗೂ ಖಂಡನೀಯ ವಿಷಯ. ಜಗತ್ತಿಗೆ ಶಾಂತಿ ಮತ್ತು ಅಹಿಂಸೆಯನ್ನು ಬೋಧಿಸಿದ ಜೈನ ಸಮಾಜದ ಮುನಿಗಳನ್ನು ಅಮಾನುಷವಾಗಿ ಕೊಲೆ ಮಾಡಿರುವುದು ಘೋರ ಅಪರಾಧವಾಗಿದ್ದು, ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದ ಅವರು, ರಾಜ್ಯದಲ್ಲಿ ಗೋ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಬಹುಸಂಖ್ಯಾತರ ಭಾವನೆಗಳಿಗೆ ಸರ್ಕಾರ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಯುವಾ ಬ್ರಿಗೇಡ್ ನ ಮಂಜು, ಆರ್ ಎಸ್ ಎಸ್ ನ ಕಾರ್ಯಕ್ರಮ ಆಯೋಜಕ್ ಪ್ರಮುಕ್ ಸುಧಾಕರ್ ಬಾವೆ, ಬಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ಪ್ರಮುಖರಾದ ರವಿ ಗುಡಿಗಾರ್, ಲೋಕೇಶ್, ವಕೀಲ ಆಶೀಕ್ ನಾಗಪ್ಪ, ನಾಗರಾಜ ಅಂಬಾರಿ, ಆರ್ ಎಸ್ ಎಸ್ ನ ಕಾರ್ಯಕ್ರಮ ಆಯೋಜಕ್ ಪ್ರಮುಕ್ ಸುಧಾಕರ್ ಬಾವೆ ಸೇರಿದಂತೆ ಇತರರಿದ್ದರು.
(ವರದಿ: ಮಧುರಾಮ್, ಸೊರಬ)


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















