ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ Agricultural University 8ನೆಯ ಘಟಿಕೋತ್ಸವವು ಜುಲೈ 21ರಂದು ಸಾಗರ ತಾಲೂಕಿನ ಇರುವಕ್ಕಿಯಲ್ಲಿ ನಡೆಯಲಿದೆ.
ಈ ಕುರಿತಂತೆ ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ವಿವಿ ಕುಲಪತಿ ಪ್ರೊ.ಆರ್.ಸಿ. ಜಗದೀಶ್, ಅಂದು ಸಂಜೆ 4 ಗಂಟೆಗೆ ಘಟಿಕೋತ್ಸವ ನಡೆಯಲಿದೆ. ವಿವಿ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್, Governor Thawarchand Gehlot ಕೃಷಿ ಸಚಿವ ಹಾಗೂ ವಿವಿ ಸಹ ಕುಲಾಧಿಪತಿಗಳಾಗಿರುವ ಎಸ್. ಚೆಲುವರಾಯ ಸ್ವಾಮಿ Minister Cheluvaraya Swamy ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಎಸ್. ವೀರೇಂದ್ರ ಹೆಗ್ಗಡೆ Dr. Veerendra Heggade ಪಾಲ್ಗೊಳ್ಳಲಿದ್ದಾರೆ ಎಂದರು.
ಘಟಿಕೋತ್ಸವಕ್ಕೆ ರಾಜ್ಯಪಾಲರು ಚಾಲನೆ ನೀಡಿ, ಪದವಿ ಸಂಪೂರ್ಣಗೊಳಿಸಿದವರಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ, ರಾಜ್ಯ ಸಭಾ ಸದಸ್ಯರು, ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಎಂಟನೆಯ ಘಟಿಕೋತ್ಸವ ಭಾಷಣವನ್ನು ಮಾಡಲಿದ್ದಾರೆ ಎಂದರು.
ಎಷ್ಟು ವಿದ್ಯಾರ್ಥಿಗಳಿಗೆ ಪದವಿ?
ಘಟಿಕೋತ್ಸವದಲ್ಲಿ 409 ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ ಪದವಿ ಹಾಗೂ 101 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ 23 ವಿದ್ಯಾರ್ಥಿಗಳು ಪಿಎಚ್’ಡಿ ಪದವಿ ಪಡೆಯುತ್ತಿದ್ದಾರೆ.
ಎಷ್ಟು ವಿದ್ಯಾರ್ಥಿಗಳಿಗೆ ಚಿನ್ನದ ಪದಕ?
ಅತ್ಯುತ್ತಮ ಶೈಕ್ಷಣಿಕ ಸಾಧನೆಮಾಡಿದ 08 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಅವರಿಗೆ ಒಟ್ಟು 15 ಚಿನ್ನದ ಪದಕಗಳನ್ನು ನೀಡಲಾಗುವುದು. 14 ಎಂಎಸ್ಸಿ ವಿದ್ಯಾರ್ಥಿಗಳು, 07 ಪಿಎಚ್’ಡಿ ವಿದ್ಯಾರ್ಥಿಗಳು ಚಿನ್ನದ ಸಾಧನೆ ಮಾಡಿದ್ದಾರೆ. ಘಟಿಕೋತ್ಸವದಲ್ಲಿ ಒಟ್ಟು 37 ಚಿನ್ನದ ಪದಕಗಳನ್ನು ನೀಡಲಾಗುವುದು ಎಂದರು.
Also read: ವಿದ್ಯುತ್ ಟ್ರಾನ್ಸ್ಫಾರ್ಮರ್ಗಳ ಸುತ್ತ ಬೇಲಿ ನಿರ್ಮಿಸಿ: ವಿಹೆಚ್ಪಿ – ಬಜರಂಗ ದಳ ಮನವಿ
ವಿಶ್ವವಿದ್ಯಾಲಯದಲ್ಲಿ ಈ ವರ್ಷ ಹಲವಾರು ವಿಶಿಷ್ಟ ಸಾಧನೆಗಳನ್ನು ಮಾಡಲಾಗಿದೆ. ರಾಷ್ಟ್ರೀಯ ಉನ್ನತ ಶಿಕ್ಷಣ ಪ್ರಾಯೋಜನೆಯಡಿ ದೇಶದ ಕೃಷಿ ವಿಶ್ವವಿದ್ಯಾಲಯಗಳಲ್ಲೇ ಮೊದಲ ಬಾರಿಗೆ ಐಓಟಿ ಸ್ಮಾರ್ಟ್ ಕೃಷಿ, ತೋಟಗಾರಿಕೆ, ಅರಣ್ಯ ವಿಷಯಗಳನ್ನು ಪ್ರಾಯೋಗಿಕ ಕಲಿಕೆ ಪ್ರಾರಂಭಿಸಿದ್ದು 20 ವಿದ್ಯಾರ್ಥಿಗಳ ಮೊದಲ ತಂಡ ಇದನ್ನು ಪೂರ್ಣಗೊಳಿಸಿದ್ದಾರೆ ಎಂದರು.
ಕೃಷಿಯಲ್ಲಿ ಗಣಕ, ದ್ರೋಣ್ ಹಾಗೂ ರೋಬೋಟ್ ಅಳವಡಿಕೆ ಹೆಚ್ಚಾಗುತ್ತಿರುವುದರಿಂದ ಮೊದಲ ಬಾರಿಗೆ ಪ್ರೋಗ್ರಾಮಿಂಗ್ ಫಾರ್ ಕೃಷಿ, ತೋಟಗಾರಿಕೆ, ಅರಣ್ಯ ಎಂಬ ವಿಷಯಗಳನ್ನು ಅಳವಡಿಸಲಾಗಿದೆ. ಪದವಿ ಹಂತದಲ್ಲಿ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯಗಳಿಗೆ ನಮ್ಮ ವಿದ್ಯಾರ್ಥಿಗಳನ್ನು ಕಳುಹಿಸಿ ತರಬೇತಿಗೊಳಿಸುವ ವಿಶಿಷ್ಟವಾದ ಅಂತರ ರಾಷ್ಟ್ರೀಯ ಶಿಕ್ಷಣ ಕ್ರಮವನ್ನು ಅಳವಡಿಸಿಕೊಳ್ಳಲಾಗಿದೆ. ಇದರಡಿ ನಾಲ್ಕು ವಿದ್ಯಾರ್ಥಿನಿಯರು ಅಮೇರಿಕಾದ ಕನ್ಸಾಸ್ ಸ್ಟೇಟ್ ವಿಶ್ವವಿದ್ಯಾಲಯಕ್ಕೆ ಅಧ್ಯಯನಕ್ಕಾಗಿ ಹೋಗಿ ಬಂದಿದ್ದಾರೆ. ಆರು ವಿದ್ಯಾರ್ಥಿಗಳು ಜರ್ಮನಿಯ ಎಬರ್ಹಾರ್ಡ್ ಕಾರ್ಲ್ ವಿಶ್ವವಿದ್ಯಾಲಯಕ್ಕೆ ಅಧ್ಯಯನಕ್ಕಾಗಿ ಹೋಗಿ ಬಂದಿರುವುದು ವಿಶೇಷ ಎಂದರು.
ಕುಲಸಚಿವ ಪ್ರೊ.ಕೆ.ಸಿ. ಶಶಿಧರ, ಪ್ರೊ. ಹೇಮ್ಲಾ ನಾಯ್ಕ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post