ಕಲ್ಪ ಮೀಡಿಯಾ ಹೌಸ್ | ಉಡುಪಿ |
ಆಗುಂಬೆ ಘಾಟಿಯ Agumbe Ghat ಕೆಲವು ತಿರುವುಗಳಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ-ಉಡುಪಿಯನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಜುಲೈ 27ರಿಂದ ಸೆ.15ರವರೆಗೂ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ.
ಘಾಟಿಯ 6,7 ಹಾಗೂ 11ನೆಯ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಹೀಗಾಗಿ ಭಾರೀ ವಾಹನಗಳ ಸಂಚಾರದಿAದ ರಸ್ತೆ ಮತ್ತಷ್ಟು ಕುಸಿದು ಅಪಘಾತದ ಸಂಭವವಿರುವುವಿದೆ. ಈ ಹಿನ್ನೆಲೆಯಲ್ಲಿ ಜುಲೈ 27ರಿಂದ ಸೆ.15ರವರೆಗೂ ತಾತ್ಕಾಲಿಕವಾಗಿ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಲಘು ವಾಹನಗಳಿಗೆ ಮಾತ್ರ ಅವಕಾಶವಿರುತ್ತದೆ.
Also read: ಚಾರ್ಮಡಿಯಲ್ಲಿ ಪ್ರವಾಹ ಎಂಬ ವೀಡಿಯೋ ವೈರಲ್: ಚಿಕ್ಕಮಗಳೂರು ಪೊಲೀಸರ ಸ್ಪಷ್ಟನೆಯೇನು?
ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗ ಹೀಗಿದೆ:
ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಮಾಳಾಘಾಟ್- ಕಾರ್ಕಳ- ಉಡುಪಿ
ತೀರ್ಥಹಳ್ಳಿ-ಮಾಸ್ತಿಕಟ್ಟೆ- ಸಿದ್ಧಾಪುರ- ಕುಂದಾಪುರ- ಉಡುಪಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post