Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಗಮನಿಸಿ! ಈ ಅವಧಿಯಲ್ಲಿ ಶ್ರೀಶೈಲಂ ದೇವಾಲಯದಲ್ಲಿ ಅಭಿಷೇಕ ಇರುವುದಿಲ್ಲ: ಕಾರಣವೇನು?

August 2, 2023
in ಬಳ್ಳಾರಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ |

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ Shrishaila Mallikarjuna Temple ಆಗಸ್ಟ್ 17 ರಿಂದ ಸೆಪ್ಟೆಂಬರ್ 15ರ ವರೆಗಿನ ನಿಜಶ್ರಾವಣ ಮಾಸದ ಹಬ್ಬ ಮತ್ತು ರಜಾ ದಿನಗಳಲ್ಲಿ ಶ್ರೀ ಸ್ವಾಮಿಯ ಗರ್ಭಗುಡಿ ಆರ್ಜಿತ ಅಭಿಷೇಕ ಹಾಗೂ ಸಾಮೂಹಿಕ ಆರ್ಜಿತ ಅಭಿಷೇಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಡೆಪ್ಯುಟಿ ಕಲೆಕ್ಟರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಲವನ್ನ ಅವರು ತಿಳಿಸಿದ್ದಾರೆ.

ಶ್ರಾವಣಮಾಸೋತ್ಸವದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಕರ್ನಾಟಕ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಶ್ರೀಶೈಲ ಕ್ಷೇತ್ರಕ್ಕೆ ದರ್ಶನಕ್ಕಾಗಿ ಬರುತ್ತಾರೆ. ಭಕ್ತರ ಅನುಕೂಲಕ್ಕಾಗಿ ನಿಜ ಶ್ರಾವಣ ಮಾಸದ ಶ್ರಾವಣಮಾಸೋತ್ಸವಗಳನ್ನು ಅಂದರೆ ಆಗಸ್ಟ್ 17 ರಿಂದ ಸೆಪ್ಟೆಂಬರ್ 15ರ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ.
ಶ್ರಾವಣ ಮಾಸದಲ್ಲಿ ಶನಿವಾರ, ಭಾನುವಾರ, ಸೋಮವಾರ, ಸ್ವಾತಂತ್ರ್ಯ ದಿನ(ಆ.15), ವರಲಕ್ಷ್ಮಿವ್ರತ(ಆ.25), ಶ್ರಾವಣಪೌರ್ಣಮಿ (ಆ.31), ಶ್ರೀ ಕೃಷ್ಣಾಷ್ಟಮಿ(ಸೆ.06) ಮುಂತಾದ ದಿನಗಳಲ್ಲಿ ಗರ್ಭಗುಡಿ ಆರ್ಜಿತ ಅಭಿಷೇಕಗಳು ಮತ್ತು ಸಾಮುದಾಯಿಕ ಅಭಿಷೇಕಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ.

ಶ್ರಾವಣ ಮಾಸದ ಇನ್ನುಳಿದ ದಿನಗಳಲ್ಲಿ, ಸರ್ವದರ್ಶನದ ಜೊತೆಗೆ (ಉಚಿತ ಅಲಂಕಾರಿಕ ದರ್ಶನದ ಜೊತೆಗೆ), ಮಲ್ಲಿಕಾರ್ಜುನ ಸ್ವಾಮಿಯ ಸ್ಪರ್ಶ ದರ್ಶನವನ್ನು ಸಹ ನಾಲ್ಕು ಕಂತುಗಳಲ್ಲಿ ಒದಗಿಸಲಾಗುತ್ತದೆ. ಅಮ್ಮನವರ ಕುಂಕುಮಾರ್ಚನೆಗಳನ್ನು ಸಹ ಎಂದಿನಂತೆ ಯಥಾವಿಧಿಯಾಗಿ ನಡೆಸಲಾಗುತ್ತದೆ.

http://kalpa.news/wp-content/uploads/2023/05/Jain-Public-School.mp4

ಭಕ್ತರು ಸ್ಪರ್ಶ ದರ್ಶನಕ್ಕಾಗಿ ರೂ.500/- ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಮೇಲಿನ ನಿಗದಿತ ದಿನಗಳನ್ನು ಹೊರತುಪಡಿಸಿ ಶ್ರಾವಣ ಮಾಸದ ಇತರ ದಿನಗಳಲ್ಲಿ ಶ್ರೀ ಸ್ವಾಮಿಯವರಿಗೆ ಅಭಿಷೇಕಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.

ಈ ನಿರ್ದಿಷ್ಟ ದಿನಗಳನ್ನು ಹೊರತುಪಡಿಸಿ, ಸಾಮಾನ್ಯ ದಿನಗಳಲ್ಲಿ ಅಂದರೆ ಮಂಗಳವಾರ, ಬುಧವಾರ, ಗುರುವಾರ ಮತ್ತು ಶುಕ್ರವಾರ ಮಧ್ಯಾಹ್ನ 2 ರಿಂದ ನೀಡಲಾಗುವ ಉಚಿತ ಸ್ಪರ್ಶ ದರ್ಶನ ಎಂದಿನಂತೆ ಮುಂದುವರಿಯಲಿದೆ. ಆದರೆ ಇಂದಿನ ದಿನಗಳಲ್ಲಿ ಉಚಿತ ಸ್ಪರ್ಶ ದರ್ಶನಕ್ಕೆ ಬರುವ ಭಕ್ತರು ಮಧ್ಯಾಹ್ನ 1.30 ರೊಳಗೆ ಸರತಿ(ಕ್ಯೂ) ಕಾಂಪ್ಲೆಕ್ಸ್‍ನಲ್ಲಿ ವರದಿ ಮಾಡಬೇಕು.

Also read: ಶಾಸಕರು, ಸಚಿವರೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ: ಯಾಕೆ ಗೊತ್ತಾ?

ಭಕ್ತರು ಆರ್ಜಿತ ಅಭಿಷೇಕಗಳು, ಕುಂಕುಮಾರ್ಚನೆಗಳು, ಹೋಮಗಳು, ಶ್ರೀಸ್ವಾಮಿ ಅಮ್ಮನವರ ಕಲ್ಯಾಣೋತ್ಸವ ಇತ್ಯಾದಿ ಆರ್ಜಿತಸೇವಾ ಟಿಕೆಟ್‍ಗಳನ್ನು ಹಾಗೂ ಶ್ರೀಸ್ವಾಮಿಯ ಸ್ಪರ್ಶದರ್ಶನದ ಟಿಕೆಟ್‍ಗಳನ್ನು ದೇವಸ್ಥಾನದ ಅಧಿಕೃತ ವೆಬ್‍ಸೈಟ್‍ನಿಂದ ಮಾತ್ರ ಪಡೆಯಬೇಕು. ಪ್ರಸ್ತುತ ಬುಕಿಂಗ್ ಮೂಲಕ ಈ ಟಿಕೆಟ್‍ಗಳು ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಭಕ್ತರು ಆಯಾ ಟಿಕೆಟ್‍ಗಳನ್ನು ದೇವಸ್ಥಾನದ ವೆಬ್‍ಸೈಟ್ www.srisailadevasthanam.org ಮೂಲಕ ಮುಂಗಡವಾಗಿ ಪಡೆಯಬಹುದು. ಆಗಸ್ಟ್ ತಿಂಗಳ ಟಿಕೆಟ್ ಕೋಟಾವನ್ನು ಈಗಾಗಲೇ ದೇವಸ್ಥಾನದ ವೆಬ್‍ಸೈಟ್‍ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಅದರಂತೆಯೇ, ಸೆಪ್ಟೆಂಬರ್ ತಿಂಗಳ ಟಿಕೆಟ್‍ಗಳ ಕೋಟಾ ಆಗಸ್ಟ್ 25 ರಿಂದ ಲಭ್ಯವಿರುತ್ತದೆ.

ಟಿಕೆಟ್‍ಗಳ ಲಭ್ಯತೆಯ ಆಧಾರದ ಮೇಲೆ ಪ್ರಾರಂಭದ ಸಮಯಕ್ಕಿಂತ ಒಂದು ಗಂಟೆ ಮೊದಲು ಆನ್‍ಲೈನ್‍ನಲ್ಲಿ ಟಿಕೆಟ್‍ಗಳನ್ನು ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ಸ್ಪರ್ಶದರ್ಶನ ಚೀಟಿದಾರರು ಟಿಕೆಟ್ ಪ್ರತಿ (ಹಾರ್ಡ್ ಕಾಪಿ) ಮತ್ತು ಆಧಾರ್ ಕಾರ್ಡ್‍ನ ಮೂಲ ಅಥವಾ ಜೆರಾಕ್ಸ್ ಪ್ರತಿಯನ್ನು ತರಬೇಕು. ಆಯಾ ಸೇವಾ ಟಿಕೆಟ್‍ಗಳನ್ನು ಸ್ಕ್ಯಾನ್ ಮಾಡಿದ ನಂತರ ಮತ್ತು ಆಧಾರ್ ಗುರುತಿನ ಚೀಟಿಯೊಂದಿಗೆ ಆಯಾ ಟಿಕೆಟ್‍ಗಳನ್ನು ಪರಿಶೀಲಿಸಿದ ನಂತರ, ಭಕ್ತರಿಗೆ ಆಯಾ ಸೇವೆಗಳಿಗೆ ಅವಕಾಶ ನೀಡಲಾಗುತ್ತದೆ. ಆದರೆ ರೂ.150/- ತ್ವರಿತ ದರ್ಶನಕ್ಕೆ (ಶ್ರೀ ಸ್ವಾಮಿಯ ಅಲಂಕಾರಿಕ ದರ್ಶನ ಮಾತ್ರ) ಮತ್ತು ರೂ.300/- ಅತಿತ್ವರಿತ ದರ್ಶನ ಟಿಕೆಟ್‍ಗಳನ್ನು (ಶ್ರೀಸ್ವಾಮಿಯ ಅಲಂಕಾರಿಕ ದರ್ಶನ ಮಾತ್ರ) ಆನ್‍ಲೈನ್ ಮತ್ತು ಕರೆಂಟ್ ಬುಕಿಂಗ್ ಮೂಲಕ ಪಡೆಯಬಹುದು. ಈ ಪೈಕಿ ಶೇ.30ರಷ್ಟು ಟಿಕೆಟ್‍ಗಳನ್ನು ಆನ್‍ಲೈನ್‍ನಲ್ಲಿ ನೀಡಲಾಗಿದ್ದು, ಶೇ.70ರಷ್ಟು ಟಿಕೆಟ್‍ಗಳನ್ನು ಕರೆಂಟ್ ಬುಕ್ಕಿಂಗ್ ಮೂಲಕ ನೀಡಲಾಗುತ್ತದೆ.

ಆದ್ದರಿಂದ ಆರ್ಜಿತ ಸೇವೆಗಳನ್ನು ಮಾಡುವ ಭಕ್ತರು ತಮ್ಮ ಶ್ರೀಶೈಲಯಾತ್ರೆಯನ್ನು ಆರ್ಜಿತ ಸೇವೆಗಳು ಮತ್ತು ಸ್ಪರ್ಶ ದರ್ಶನದ ಟಿಕೆಟ್‍ಗಳ ಲಭ್ಯತೆಗೆ ಅನುಗುಣವಾಗಿ ಯೋಜಿಸಿಕೊಳ್ಳಬೇಕು ಎಂದು ಡೆಪ್ಯುಟಿ ಕಲೆಕ್ಟರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಲವನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Previous Post

ಶಾಸಕರು, ಸಚಿವರೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ: ಯಾಕೆ ಗೊತ್ತಾ?

Next Post

ಶಿವಮೊಗ್ಗ ಜಿಲ್ಲೆಯ ಹಲವು ಇನ್ಸ್’ಪೆಕ್ಟರ್’ಗಳ ವರ್ಗಾವಣೆ: ಯಾರು ಎಲ್ಲಿಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Representational Image

ಶಿವಮೊಗ್ಗ ಜಿಲ್ಲೆಯ ಹಲವು ಇನ್ಸ್'ಪೆಕ್ಟರ್'ಗಳ ವರ್ಗಾವಣೆ: ಯಾರು ಎಲ್ಲಿಗೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!