ಮೊಬೈಲ್ ಗೀಳಿಗೆ ಸಿಲುಕಿರುವ ಆಧುನಿಕ ಯುವ ಸಮೂಹದಿಂದ ಭಾವನಾತ್ಮಕ ಸಂಬಂಧ ಕಣ್ಮರೆಯಾಗುತ್ತಿದೆ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಆತಂಕ ವ್ಯಕ್ತಪಡಿಸಿದರು.
Also read: ಆ.16 ಸಂಸದ ರಾಘವೇಂದ್ರ 50ನೇ ಜನ್ಮದಿನ: ಅರ್ಥಪೂರ್ಣ ಆಚರಣೆಗೆ ಸಿದ್ಧತೆ
ಉನ್ನತ ಶಿಕ್ಷಣದ ಉನ್ನತಿಕರಣಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿಯಾಗಿದೆ. ಬದಲಾವಣೆಗಳ ಅವಶ್ಯಕತೆಗೆ ತಕ್ಕಂತೆ ಅಧ್ಯಯನ ಕೈಗೊಳ್ಳಬಹುದಾಗಿದೆ. ಎನ್ಇಪಿ ಸರಿಯಿಲ್ಲ ಎಂದು ಪ್ರತಿಪಾದಿಸುವವರು ಎನ್ಇಪಿ ನೀಡುವ ಪೂರಕ ಅಂಶಗಳನ್ನು ಮೊದಲು ಸರಿಯಾಗಿ ತಿಳಿದುಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಮತಾ.ಆರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲರಾದ ಹೆಚ್.ಎಂ.ಸುರೇಶ್, ಖಾಜೀಂ ಷರೀಫ್, ಪ್ರಾಧ್ಯಾಪಕರಾದ ಜಗದೀಶ್, ನಾಗರಾಜ್, ಮಂಜುನಾಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post