ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ತಮ್ಮ ಗೌರವ ಪೂರ್ವಕ ನಮನಗಳು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಹೇಳಿದರು.
ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಸ್ತ ಜನತೆಗೆ 77ನೇ ಸ್ವಾತಂತ್ರ್ಯೋತ್ಸವದ 77th Independence Day ಶುಭಾಶಯಗಳನ್ನು ತಿಳಿಸಿ ನಾಡಿನ ಜನತೆಯನ್ನುದ್ದೇಷಿಸಿ ಭಾಷಣ ಮಾಡಿದರು.
ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ಅಮೂಲ್ಯವಾದುದು ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು ಎಂದರು.
Also read: ಶಾಂತಿಯಿಂದ ಮಾತ್ರ ಯಾವುದೇ ಸಮಸ್ಯೆಗೆ ಪರಿಹಾರ ಸಾಧ್ಯ: ಪ್ರಧಾನಿ ನರೇಂದ್ರ ಮೋದಿ
ಮುಂಗಾರು ವಿಳಂಬವಾಗಿ ಪ್ರಾರಂಭವಾದ್ದರಿಂದ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಬರದ ಛಾಯೆ ಇತ್ತು. ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯೂ ತಲೆದೋರಿತು. ಅತಿವೃಷ್ಟಿ, ಅನಾವೃಷ್ಟಿಗಳೆರಡನ್ನೂ ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಹಾಗೂ ಇದರಿಂದಾಗುವ ಹಾನಿಯನ್ನು ತಗ್ಗಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ.
ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ. ಇದರ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ರಸ್ತೆ, ವಿಮಾನ ನಿಲ್ದಾಣ ಹಾಗೂ ಬಂದರುಗಳ ಅಭಿವೃದ್ಧಿಗೂ ಆಯವ್ಯಯದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ರಾಜ್ಯದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳು ಹಾಗೂ ಪ್ರಗತಿಯಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆಗಳು, ಅಂತರರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆಗಳು ಮತ್ತು ಪ್ರವಾಸಿ ತಾಣಗಳ ರಸ್ತೆಗಳನ್ನು ಗುರುತಿಸಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post