No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಔಷಧಗಳ ಜಾಗತಿಕ ಸ್ಪರ್ಧೆಗೆ ನಾವೀನ್ಯತೆ ಮತ್ತು ಪೇಟೆಂಟ್ ಅತ್ಯಗತ್ಯ: ಕೆ.ಎಲ್. ಶಿವಕುಮಾರ್ ಅಭಿಪ್ರಾಯ

ಫಾರ್ಮಸಿ ಕಾಲೇಜಿನಲ್ಲಿ ಪೇಟೆಂಟ್ ಮತ್ತು ನಾವೀನ್ಯ ಯೋಚನೆಗಳ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 2, 2023
in Army
0
ಔಷಧಗಳ ಜಾಗತಿಕ ಸ್ಪರ್ಧೆಗೆ ನಾವೀನ್ಯತೆ ಮತ್ತು ಪೇಟೆಂಟ್ ಅತ್ಯಗತ್ಯ: ಕೆ.ಎಲ್. ಶಿವಕುಮಾರ್ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಭಾರತದಲ್ಲಿ ಪ್ರತಿ ತಿಂಗಳು ಇನ್ನೂರ ಐವತ್ತಕ್ಕೂ ಹೆಚ್ಚು ಹೊಸ ಔಷಧೀಯ ಬ್ರಾಂಡ್ ಗಳು ಹೊರಬರುತ್ತಿದ್ದು ನಾವೀನ್ಯತೆ ಮತ್ತು ಪೇಟೆಂಟ್ ಇದ್ದಾಗ ಮಾತ್ರ ಜಾಗತೀಕವಾಗಿ ಸ್ಪರ್ಧೆ ನೀಡಲು ಸಾಧ್ಯ ಎಂದು ಜಗದಾಲೆ ಇಂಡಸ್ಟ್ರೀಸ್ ಮಾರುಕಟ್ಟೆ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್. ಶಿವಕುಮಾರ್ ಹೇಳಿದರು.

ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ವತಿಯಿಂದ ಶನಿವಾರ ಫಾರ್ಮಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪೇಟೆಂಟ್ ಫೈಲಿಂಗ್ ಮತ್ತು ನಾವೀನ್ಯ ಯೋಚನೆಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

1970 ರ ಪೇಟೆಂಟ್ ಕಾಯಿದೆಯಿಂದ ಭಾರತ ಔಷಧೀಯ ಕ್ಷೇತ್ರದಲ್ಲಿ  ಉತ್ಪನ್ನಗಳ ಸ್ವಾವಲಂಬನೆ ಪಡೆಯಿತು. ನಮ್ಮ ದೇಶದ ಔಷಧ ವಿಜ್ಞಾನಿಗಳ‌ ನಿರಂತರ ಶ್ರಮ ಈ ಸಾಧನೆಗೆ ಕಾರಣವಾಗಿದೆ. ಭಾರತದಲ್ಲಿ ಮೂರು ಸಾವಿರ ಔಷಧೀಯ ಕಂಪನಿಗಳು ಹತ್ತು ಸಾವಿರ ಕಾರ್ಖಾನೆಗಳಿವೆ. ಈ ಮೂಲಕ ಭಾರತದ ಫಾರ್ಮಸಿ ಕ್ಷೇತ್ರ ಅತ್ಯಧಿಕ ಉದ್ಯೋಗವಕಾಶ ಮತ್ತು ಸಂಶೋಧನಾ ಅವಕಾಶಗಳನ್ನು ಹೊಂದಿದೆ.

ಪದವಿ ಪಡೆದು ಕಾಲೇಜಿನಿಂದ ಹೊರಬಂದ ನಂತರ ಬದುಕಿನ ನಿಜವಾದ ಅರ್ಥ ತಿಳಿಯುತ್ತದೆ. ಪ್ರತಿ ದಿನವು ಆರೋಗ್ಯ ಕ್ಷೇತ್ರ ಸವಾಲುಗಳನ್ನು ಎದರಿಸುತ್ತಿದೆ. ಅಂತಹ ಸವಾಲುಗಳಿಗೆ ನಾವೀನ್ಯತೆಯ ಪರಿಹಾರ ನೀಡಬೇಕಾಗಿದೆ. ಅಂತಹ ನಾವೀನ್ಯಯುತ ಚಿಂತನೆಗಳು ನಿಮ್ಮದಾಗಲಿ. ರೋಗಗಳ ನಿವಾರಣೆ ಮತ್ತು ಆರೈಕೆಯಲ್ಲಿ ಫಾರ್ಮಸಿಯ ನಾವೀನ್ಯಯುತ ಯೋಜನೆಗಳ ಅವಶ್ಯಕತೆಯ ಅರಿವು ಪಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಭಾರತ್ ಬಯೊಟೆಕ್ ಕಂಪನಿ ಇಂದಿಗೂ ಕೋವಿಡ್ ವಿರುದ್ಧ ಹೋರಾಟ ಮಾಡುವ ವ್ಯಾಕ್ಸಿನ್ ಗಳಿಗೆ ಪೇಟೆಂಟ್ ಪಡೆದಿಲ್ಲ. ಮಾನವೀಯತೆಯ ದೃಷ್ಟಿಯಿಂದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಪೇಟೆಂಟ್ ಫೈಲಿಂಗ್ ಮಾಡದಂತೆ ತೀರ್ಮಾನಿಸಿದ್ದರು. ಈ‌ ಮೂಲಕ ಲಾಭ ನಷ್ಟಗಳ ಲೆಕ್ಕಚಾರವಿಲ್ಲದೆ ಯಾವುದೇ ಕಂಪನಿಗಳು ಮುಕ್ತವಾಗಿ ಉತ್ಪಾದಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

Also read: ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಸದಸ್ಯರ ಪಾತ್ರ ಮಹತ್ವದ್ದು: ಬಂದಗಿ ಬಸವರಾಜ ಶೇಟ್

ರಾಷ್ಟ್ರೀಯ ಶಿಕ್ಷಣ ಸಮಿತಿಯ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಮಾತನಾಡಿ, ಫಾರ್ಮಸಿ ಮತ್ತು ತಾಂತ್ರಿಕತೆ ಒಟ್ಟಾಗಿ ಸಂಶೋಧನೆಗಳನ್ನು ನಡೆಸಲು ಅನೇಕ ಅವಕಾಶಗಳಿವೆ. ಕಾಲೇಜುಗಳ ಸಂಶೋಧನಾ ಪ್ರಯೋಗಾಲಯಗಳು ಸಮಯದ ನಿರ್ಬಂಧವಿಲ್ಲದೆ ಕಾರ್ಯನಿರ್ವಹಿಸಬೇಕಾಗಿದ್ದು, ಸೀಮಿತತೆಯಿಂದ ಹೊರಬಂದು ವಿದ್ಯಾರ್ಥಿಗಳು ಸಂಶೋಧನಾ ಪ್ರಯೋಗಗಳಲ್ಲಿ ಮುನ್ನಡೆಯಿರಿ.

ಸ್ಟಾನ್ಫಾರ್ಡ್ ವಿಶ್ವವಿದ್ಯಾಲಯದ ಮನು ಪ್ರಕಾಶ್ ಎಂಬ ಸಹ ಪ್ರಾಧ್ಯಾಪಕ ಪ್ರಪಂಚದಾದ್ಯಂತ ಮಕ್ಕಳಿಗೆ ವೈಜ್ಞಾನಿಕ ಆವಿಷ್ಕಾರದ ಶಕ್ತಿ ಮತ್ತು ಕುತೂಹಲ ತರಲು ಕಾಗದದಿಂದ ಮಾಡಿದ ಸೂಕ್ಷ್ಮದರ್ಶಕವಾದ ಫೋಲ್ಡ್‌ಸ್ಕೋಪ್‌ ನಂತಹ ಅಗ್ಗದ ವಿಜ್ಞಾನ ಸಾಧನಗಳನ್ನು ಕಂಡುಹಿಡಿದಿದ್ದಾರೆ. ಇಂತಹ ಸಾಧನಗಳ ಬಳಕೆ ಮತ್ತು ನಿರ್ಮಾಣ ಕಾರ್ಯ ಫಾರ್ಮಸಿ ವಿದ್ಯಾರ್ಥಿಗಳಿಂದ ಹೆಚ್ಚಾಗಲಿ ಎಂದು ಹೇಳಿದರು.

ಜಗದಾಲೆ ಇಂಡಸ್ಟ್ರೀಸ್ ನಿಯಂತ್ರಕ ವ್ಯವಹಾರಗಳ ಸಹಾಯಕ ವ್ಯವಸ್ಥಾಪಕರಾದ ಲತಾ.ಸಿ.ವಿ ಮಾತನಾಡಿದರು. ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಜಿ.ನಾರಾಯಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ನಾವೀನ್ಯತೆ ಮತ್ತು ಸಂಶೋಧನೆ ಕೇಂದ್ರದ ಸಂಯೋಜಕರಾದ ಕೆ.ಎಲ್.ಅರುಣ್ ಕುಮಾರ್, ಸಿ.ಎಂ.ನೃಪತುಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಸದಸ್ಯರ ಪಾತ್ರ ಮಹತ್ವದ್ದು: ಬಂದಗಿ ಬಸವರಾಜ ಶೇಟ್

Next Post

‘Meri Mati Mera Desh’ program is Modi ji’s campaign to unite India: Shah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
‘Meri Mati Mera Desh’ program is Modi ji’s campaign to unite India: Shah

'Meri Mati Mera Desh' program is Modi ji's campaign to unite India: Shah

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

May 5, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಬೆಂಗಳೂರು ಒಡೆಯರ್ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

May 5, 2026
ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

May 5, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಹೊತ್ತಿ ಉರಿದ ಕೆಎಸ್’ಆರ್’ಟಿಸಿ ಬಸ್ | ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

ಹೊತ್ತಿ ಉರಿದ ಕೆಎಸ್’ಆರ್’ಟಿಸಿ ಬಸ್ | ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL