ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಏರಲು ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ರವಿ ಭಟ್ ಹೇಳಿದರು.
ಚಂದ್ರಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ Dr. Sarvapalli Radhakrishnan ಅವರ ಜನ್ಮ ದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯಂದು Teachers day ವಿಶೇಷವಾಗಿ ವೃಕ್ಷಾರೋಪಣ ನೆರವೇರಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಹೊರ ಹೊಮ್ಮುವುದಕ್ಕೆ ಶಿಕ್ಷಕರ ಕಾರ್ಯವು ಶ್ಲಾಘನೀಯ ಪ್ರಕೃತಿಯೊಂದಿಗೆ ಮಕ್ಕಳನ್ನು ಬೆಳೆಸುವ ಮೂಲಕ ಅವರಿಗೆ ಸ್ವಾಸ್ತ ಪರಿಸರವನ್ನು ಉಳಿಸಿಕೊಡಬೇಕಾದುದು ನಮ್ಮ ಕರ್ತವ್ಯ ಎಂದರು.
ಶಾಲಾ ಮುಖ್ಯ ಶಿಕ್ಷಕಿ ಶಾಂತಲಾ ಅಧ್ಯಕ್ಷತೆ ವಹಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ ಚರಿತ್ರೆ ಕುರಿತು ಮಾತನಾಡಿದರು.
ಶಾಲಾ ಶಿಕ್ಷಕ ವೃಂದದವರು, ಶಾಲಾಭಿವೃದ್ಧಿ ಸಮಿತಿಯವರು ಶಾಲಾ ಆವರಣದಲ್ಲಿರುವ ಗಿಡ ಮರಗಳಿಗೆ ವೃಕ್ಷಾ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು. ಶಾಲಾ ವಿದ್ಯಾರ್ಥಿಗಳು ಶಿಕ್ಷಕರ ಬಗ್ಗೆ ತಮ್ಮದೇ ಬುದ್ಧಿಶಕ್ತಿಯನ್ನು ಉಪಯೋಗಿಸಿ ಮಾತನಾಡಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಭವಾನಿ ಚಂದ್ರಕಾಂತ್, ಸದಸ್ಯರಾದ ಗಣೇಶ್ ಮರಡಿ, ಪ್ರಶಾಂತ್ ಜೆ.ಎಸ್ ನಾಯ್ಕ್, ಚೇತನಾ, ಉಷಾ, ಶಾಲಾ ಶಿಕ್ಷಕರಾದ ನೂರ್ ಫಾತಿಮಾ, ಸುಪ್ರಿತಾ, ದಿವ್ಯ, ಸೇರಿದಂತೆ ಇತರರಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post