ಕಲ್ಪ ಮೀಡಿಯಾ ಹೌಸ್ | ಉಡುಪಿ |
ರಾಜ್ಯದಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ Shri Krishna Janmashtami ಸಂಭ್ರಮ ಮನೆ ಮಾಡಿದ್ದು, ಜಗನ್ನಿಯಾಮಕ ನೆಲೆಸಿರುವ ಉಡುಪಿ ಸಂಪೂರ್ಣವಾಗಿ ಕೃಷ್ಣಮಯವಾಗಿದೆ.
ದೇವಾಲಯಗಳ ನಗರಿ ಎಂದೇ ಖ್ಯಾತವಾಗಿರುವ ಉಡುಪಿಯಲ್ಲಿನ ಶ್ರೀಕೃಷ್ಣ ಮಠದಲ್ಲಿ Udupi Shri Krishnamutt ಜನ್ಮಾಷ್ಟಮಿ ಸಂಭ್ರಮ ಮನೆ ಮಾಡಿದ್ದು, ಪರ್ಯಾಯ ಶ್ರೀಗಳಿಂದ ವಿಶೇಷ ಪೂಜೆ ನಡೆಯಿತು.
ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣನ ಅವತಾರ ಗಳಿಗೆಯಲ್ಲಿ ಕೃಷ್ಣನಿಗೆ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಪ್ರಧಾನ ಅರ್ಘ್ಯ ಪ್ರದಾನ ಮಾಡಿದರು. ಆನಂತರ ಹೊರಗೆ ತುಳಸಿಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಪ್ರದಾನ ಮಾಡಿದರು.
Also read: ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು? ಯಾವಾಗ? ಕುತೂಹಲ ಮೂಡಿಸಿದ ಸಂಸದರ ಟ್ವೀಟ್
ಆನಂತರ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮತ್ತು ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದಲೂ ಅರ್ಘ್ಯ ಪ್ರದಾನ ಬಳಿಕ ಸಾರ್ವಜನಿಕರಿಂದ ಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಿತು. ಇದರೊಂದಿಗೆ ಭಕ್ತಿಶೃದ್ಧೆಯ ಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಂಡಿತು.
ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಡಿಯ ಕೃಷ್ಣಮಠವನ್ನು ವಿಶೇಷವಾಗಿ ಅಲಂಕಾರ ಮಾಡಲಾಗಿದ್ದು, ಪುರದ ತುಂಬ ಹುಲಿ ವೇಷ, ಕಡೆಗೋಲು ಸೇರಿದಂತೆ ವಿವಿಧ ವಿಶೇಷಗಳು ಇದಕ್ಕೆ ಮೆರುಗು ನೀಡಿವೆ. ಕೃಷ್ಣ ಮಠ ಹಾಗೂ ರಥಬೀದಿ ಕೃಷ್ಣಮಯವಾಗಿದ್ದು, ಭಕ್ತರಿಂದ ಜನತಪ, ಧ್ಯಾನಗಳು ಮೇಳೈಸಿವೆ.
ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಅಂತಾರಾಜ್ಯಗಳಿಂದ ಸಾವಿರಾರು ಮಂದಿ ಭಕ್ತರು ಮಠಕ್ಕೆ ಭೇಟಿ ನೀಡಿ, ಕೃಷ್ಣನ ದರ್ಶನ ಪಡೆದರು. ಕೃಷ್ಣ ಜಯಂತಿಯ ಪ್ರಯುಕ್ತ ಕಡೆಗೋಲು ಕೃಷ್ಣನಿಗೆ ಮೊಸರು ಮೆಲ್ಲುತ್ತಿರುವ ಬಾಲಕೃಷ್ಣನ ವಿಶೇಷ ಅಲಂಕಾರ ಮಾಡಿದ್ದು ಗಮನ ಸೆಳೆಯಿತು.
ಚಿನ್ನದ ರಥದಲ್ಲಿ ಕೃಷ್ಣನ ಮಣ್ಣಿನ ವಿಗ್ರಹಕ್ಕೆ ಉತ್ಸವ, ಭಕ್ತರಿಗೆ ಕೃಷ್ಣನಿಗೆ ಅರ್ಪಿಸಿದ ಲಡ್ಡುಚಕ್ಕುಲಿ ಪ್ರಸಾದದ ವಿತರಣೆ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post