ಅವರು ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನ ಪರಿಷತ್ ಕಲಾಪದಲ್ಲಿ ನಾನು ಹಲವು ಪ್ರಶ್ನೆಗಳನ್ನು ಕೇಳಿದ್ದೆ. ಕೆಲವು ಪ್ರಶ್ನೆಗಳಿಗೆ ಸ್ಟಾರ್ ಸಿಕ್ಕಿತ್ತು. ಶೂನ್ಯ ವೇಳೆಯಲ್ಲಿ ಕೂಡ ಪ್ರಶ್ನೆಗಳನ್ನು ಕೇಳಿರುವೆ. ಪಠ್ಯ ಪುಸ್ತಕ ಬದಲಾವಣೆ ಸೇರಿದಂತೆ ಜಿಎಸ್ಟಿ, ಎಪಿಎಂಸಿ ಕಾಯಿದೆ, ಟ್ರೇಡ್ ಲೈಸೆನ್ಸ್ ಹೀಗೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಕಲಾಪದ ಚರ್ಚೆಯಲ್ಲಿ ಭಾಗವಹಿಸಿದ್ದೇನೆ ಎಂದರು.
Also read: ಉದ್ಯಮಿಗಳ ಬೆಳವಣಿಗೆ ಉತ್ತೇಜಿಸಲು ಅನ್ವೇಷಣಾ ಫೋರಂ ಸಹಕಾರಿ: ಸಂಸದ ರಾಘವೇಂದ್ರ
ಈ ಲಿಖಿತ ಉತ್ತರವನ್ನು ಮನನವಿಟ್ಟು ಓದಿದಾಗ ಇದು ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ ಮತ್ತು ದ್ವೇಷದ ರಾಜಕಾರಣ ಇದರಲ್ಲಿ ಅಡಗಿದೆ ಎಂದು ಸ್ಪಷ್ಟವಾಗಿ ಅನಿಸಿದೆ. 6ರಿಂದ 10ನೇ ತರಗತಿಯ ಕನ್ನಡ ಭಾಷೆಗೆ ಸಂಬಂಧಿಸಿದಂತೆ 9 ಪಠ್ಯಗಳನ್ನು, ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದಂತೆ 9 ಪಠ್ಯಗಳನ್ನು ತಿದ್ದುಪಡಿ ಮಾಡಲಾಗಿದೆ. ಮುಖ್ಯವಾಗಿ ಚಕ್ರವರ್ತಿ ಸೂಲಿಬೆಲೆ, ಶತಾವಧಾನಿ ಗಣೇಶ್, ಡಾ. ಕೆ.ಬಿ. ಹೆಡ್ಗೆವಾರ್ ಅವರ ಪಠ್ಯಗಳನ್ನು ತೆಗೆದುಹಾಕಲಾಗಿದೆ ಎಂದರು.
ಯಾವುದೇ ಪಠ್ಯ ಬದಲಾವಣೆ ಮಾಡುವುದು ಕ್ಯಾಬಿನೆಟ್ನಲ್ಲಿ ಅಲ್ಲ. ಅದು ಬದಲಾವಣೆ ಆಗಬೇಕು ಎಂದರೆ ಶಿಕ್ಷಣ ತಜ್ಞರ ಸಮಿತಿ ರಚನೆಯಾಗಬೇಕು. ಆ ಸಮಿತಿಯಲ್ಲಿ ಯಾವ ಪಠ್ಯ ಬೇಕು, ಯಾವುದ ಬೇಡ ಎಂಬ ತೀರ್ಮಾನ ಆಗಬೇಕು. ನಂತರ ಪಠ್ಯ ಪುಸ್ತಕಗಳ ಬದಲಾವಣೆ ಆಗಬೇಕು. ಆದರೆ ಇದ್ಯಾವುದನ್ನೂ ಮಾಡದ ರಾಜ್ಯ ಸರ್ಕಾರ ಬದಲಾವಣೆ ಮಾಡುವ ಮೂಲಕ ಅಸಹಿಷ್ಣುತೆ ಮೂಡಿಸಿದೆ. ಕೂಡಲೇ ಮೊದಲಿದ್ದ ಪಠ್ಯವನ್ನೇ ಮಕ್ಕಳಿಗೆ ಬೋಧಿಸಬೇಕು ಎಂದು ಒತ್ತಾಯಿಸಿದರು.
ಹಾಗೆಯೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೂಡ ತೆಗೆದುಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಲಕ್ಷಾಂತರ ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಖಾಸಗಿ ಶಾಲೆಗಳಷ್ಟೇ ಸರ್ಕಾರಿ ಶಾಲೆಗಳು ಕೂಡ ಬೆಳೆಯಬೇಕು ಎಂಬ ಹಲವು ಸದುದ್ದೇಶದಿಂದ ಎನ್ಇಪಿಯನ್ನು ಜಾರಿಗೊಳಿಸಲಾಗಿದೆ. ಆದರೆ ಸರ್ಕಾರ ಇದನ್ನು ತೆಗೆದು ಹಾಕುವತ್ತ ಕೆಲಸ ಮಾಡುತ್ತಿದೆ. ಈ ಬಗ್ಗೆ ನಾವು ಸುಮ್ಮನಿರುವುದಿಲ್ಲ ಜನಜಾಗೃತಿ ಮೂಡಿಸುತ್ತೇವೆ. ಜನರೇ ಇಂತಹ ವಿಷಯಗಳಿಗೆ ಸರ್ಕಾರಕ್ಕೆ ತಕ್ಕ ಬುದ್ಧಿ ಕಲಿಸುತ್ತಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಶಿವಕುಮಾರ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post