ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಜಿಲ್ಲೆಯ ಹಿರೇಗೌಜ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ದಂಪತಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಡೂರು-ಮೂಡಿಗೆರೆ ಹೆದ್ದಾರಿಯ ಹಿರೇಗೌಜ ಬಳಿ ಘಟನೆ ನಡೆದಿದ್ದು, ಟಿಪ್ಪರ್, ಕಾರು ಹಾಗೂ ಬೈಕ್ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗ ತೀವ್ರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಬೈಕ್’ನಲ್ಲಿ ತೆರಳುತ್ತಿದ್ದ ಶಿವಮೊಗ್ಗ ಮೂಲದ ಆಸೀಫ್, ಮಾಜೀನಾ ಸ್ಥಳದಲ್ಲೇ ಮೃತಪಟ್ಟಿದ್ದು, ಇವರೊಂದಿಗಿದ್ದ ಮಗು ಗಂಭೀರವಾಗಿ ಗಾಯಗೊಂಡಿದೆ.
Also read: ಕೇರಳದಲ್ಲಿ ನಿಫಾ ವೈರಸ್’ಗೆ ಇಬ್ಬರು ಬಲಿ: ಕೋಝಿಕೋಡ್ 7 ಗ್ರಾಪಂಗಳು ಕಂಟೈನ್ಮೆಂಟ್ ವಲಯ
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಟಿಪ್ಪರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post