ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಈದ್ ಮಿಲಾದ್ Eid Milad ದಿನ ಇಲ್ಲಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದ 1 ತಿಂಗಳುಗಳ ಕಾಲ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂಬ ಬ್ಯಾನರ್’ವೊಂದರು ಪ್ರಕಟಗೊಂಡಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಸೆ.28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿರುವುದು ವರದಿಯಾಗಿದೆ.
ಅಂದು ಮುಂಜಾನೆ 3.45ರಿಂದ ಯಾವುದೇ ಮೀನು ವ್ಯಾಪಾರಿಗಳು ಕೆಲಸ ಮಾಡದೇ ಕಡ್ಡಾಯ ರಜೆ ಹಾಕಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಸಂಘದ ವತಿಯಿಂದ ಒಂದು ತಿಂಗಳ ಕಾಲ ನಿಷೇಧ ಹೇರಲಾಗುವುದು ಎಂದು ಬ್ಯಾನರಿನಲ್ಲಿ ಎಚ್ಚರಿಸಿರುವ ಫೋಟೋ ವೈರಲ್ ಆಗಿದೆ.
Also read: Amit Shah’s political masterstroke to wipe out Congress from Karnataka
ಈ ಬ್ಯಾನರ್ ಇದೀಗ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಾರ ನಿರ್ಬಂಧ ಹಾಗೆ ದಂಡ ವಿಧಿಸುವಂತಹ ಬ್ಯಾನರನ್ನು ಧಕ್ಕೆಯ ಹಸಿ ಮೀನು ವ್ಯಾಪಾರಸ್ಥರು ಹಾಕಿದ್ದು ಖಂಡನೀಯವಾಗಿದ್ದು, ಪ್ರಜಾಪ್ರಭುತ್ವ ದೇಶದಲ್ಲಿ ಇದು ಸಂವಿಧಾನ ವಿರೋಧಿಯಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಅವರು, ಹಿಂದೂ ಮೀನು ವ್ಯಾಪಾರಸ್ಥರ ಮೇಲೆ ನಡೆಯುವ ಈ ದೌರ್ಜನ್ಯಕ್ಕೆ ವಿಶ್ವ ಹಿಂದೂ ಪರಿಷತ್ ಖಂಡನೆ ಮಾಡುತ್ತದೆ. ಅಲ್ಲದೆ ಜಿಲ್ಲಾಡಳಿತ ತಕ್ಷಣ ಹಸಿ ಮೀನು ವ್ಯಾಪಾರಸ್ಥ ಸಂಘದ ಅಧ್ಯಕ್ಷರ ಮೇಲೆ ಹಾಗು ಈ ಬ್ಯಾನರ್ ಅಳವಡಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post